Featured

ಕರಾವಳಿಯಲ್ಲಿ ಕ್ಯಾರ್ ಚಂಡಮಾರುತ , ಕಡಲ ತೀರದಲ್ಲಿ ಹೆಚ್ಚಾದ ಅಲೆಗಳ ಅಬ್ಬರ -Vishwanews24

ಮಂಗಳೂರು: ಕ್ಯಾರ್ ಚಂಡಮಾರುತ ಪರಿಣಾಮ, ಕರಾವಳಿಯಲ್ಲಿ ಕಡಲು ಪ್ರಕ್ಷುಬ್ಧಗೊಂಡು ತೀರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದೆ. ಸುರಿದ ಭಾರಿ ಗಾಳಿ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತು.

ಅರಬ್ಬಿ ಸಮುದ್ರದಲ್ಲಿ ನಿರ್ಮಾಣವಾಗಿದ್ದ ವಾಯುಭಾರ ಕುಸಿತ ಶುಕ್ರವಾರ ಮುಂಜಾನೆ 5.30ರ ವೇಳೆಗೆ ಚಂಡಮಾರುತವಾಗಿ ಪರಿತರ್ವನೆಗೊಂಡು ಉತ್ತರಕ್ಕೆ ಸಂಚರಿಸಿದೆ. ಮಧ್ಯಾಹ್ನ 2.30ರ ವೇಳೆಗೆ 16.2ಡಿಗ್ರಿ ಉತ್ತರ ಅಕ್ಷಾಂಶ ಮತ್ತು 71.7ಡಿಗ್ರಿ ಪೂರ್ವ ರೇಖಾಂಶದಲ್ಲಿ ಪೂರ್ವ ಮಧ್ಯ ಸಮುದ್ರಲ್ಲಿ ಕೇಂದೀಕೃತವಾಗಿತ್ತು. ಪ್ರಸ್ತತ ಒಮಾನ್ ತೀರದಿಂದ 1880 ಕಿ.ಮೀ.ದೂರದಲ್ಲಿದ್ದು, ಪ್ರತಿ ಕ್ಷಣಕ್ಕೂ ತೀವ್ರಗೊಳ್ಳುತ್ತಿದ್ದು, 12 ಗಂಟೆಯಲ್ಲಿ ಶಕ್ತಿ ಇನ್ನಷ್ಟು ಹೆಚ್ಚಾಗಲಿದೆ. ಪೂರ್ವ ಕೇಂದ್ರ ಅರಬ್ಬಿ ಸಮುದ್ರದಿಂದ ಪಶ್ಚಿಮ ಮತ್ತು ವಾಯವ್ಯ ದಿಕ್ಕಿನತ್ತ ಸಾಗುವ ಸಾಧ್ಯತೆ ಇರುವುದರಿಂದ ಭಾರತ ಕರಾವಳಿಯಿಂದ ಮಾರುತ ದೂರ ಸಾಗಲಿದೆ ಎಂದು ಹವಾಮಾನ ಇಲಾಖೆ ಮತ್ತು ಸಮುದ್ರ ಅಧ್ಯಯನ ಸಂಸ್ಥೆ ಐಎನ್‌ಸಿಒಐಎಸ್ ಜಂಟಿ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರವಾಸಿಗರನ್ನು ಸಮುದ್ರಕ್ಕೆ ಇಳಿದಂತೆ ತಡೆಯಲು ಜಿಲ್ಲಾಡಳಿತ ಪೊಲೀಸ್ ಹಾಗೂ ಹೋಮ್‌ಗಾರ್ಡ್ ಕಿನಾರೆಗಳಲ್ಲಿ ಸಿಬ್ಬಂದಿಯನ್ನು ನಿಯೋಜಿಸಿದೆ. ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ಹೆಚ್ಚಿನ ಬೋಟ್‌ಗಳು ಬಂದರಿನಲ್ಲಿ ಲಂಗರು ಹಾಕಿವೆ. ನವ ಮಂಗಳೂರು ಬಂದರು ಪ್ರವೇಶಿಸುವ ಬಾಗಿಲಿನಲ್ಲಿ 200ಕ್ಕೂ ಅಧಿಕ ಬೋಟ್‌ಗಳು ನಿಂತಿರುವುದು ಕೋಸ್ಟ್‌ಗಾರ್ಡ್ ನೌಕೆಗಳು ಸಮುದ್ರದಲ್ಲಿ ರಕ್ಷಣೆ ಹಾಗೂ ಹುಡುಕಾಟ ಕಾರ್ಯಾಚರಣೆಗೆ ತೆರಳಲು ಅಡಚಣೆಯಾಗಿದೆ. ಬೋಟ್‌ಗಳನ್ನು ಬಂದರ್‌ನಲ್ಲಿ ಲಂಗರು ಹಾಕಿಸಲು ಪ್ರಯತ್ನ ನಡೆದಿದೆ.

ಚಂಡಮಾರುತ ಪರಿಣಾಮ ಸಮುದ್ರ ಇನ್ನೂ ಕೆಲವು ದಿನ ಸಮುದ್ರ ಪ್ರಕ್ಷುಬ್ಧವಾಗಿರುವುದರಿಂದ ಅ.31ರವರೆಗೆ ಮಿನುಗಾರರು ಸಮುದ್ರಕ್ಕೆ ಪ್ರವೇಶಿಸಬಾರದು ಎಂದು ಎಚ್ಚರಿಕೆ ನೀಡಲಾಗಿದೆ. 45-55 ಕಿ.ಮೀ.ನಿದ 65 ಕಿ.ಮೀ. ವೇಗದಲ್ಲಿ ಸಮುದ್ರದಿಂದ ಬಲವಾದ ಗಾಳಿ ಬೀಸಲಿದೆ ಎಂದು ಜಿಲ್ಲಾಡಳಿತ ಎಚ್ಚರಿಸಿದೆ.

 

 

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

18 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

18 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

19 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

19 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

19 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

21 hours ago