Featured

ಕರಾವಳಿಯಲ್ಲಿ ಕ್ಯಾರ್ ಚಂಡಮಾರುತ , ಕಡಲ ತೀರದಲ್ಲಿ ಹೆಚ್ಚಾದ ಅಲೆಗಳ ಅಬ್ಬರ -Vishwanews24

ಮಂಗಳೂರು: ಕ್ಯಾರ್ ಚಂಡಮಾರುತ ಪರಿಣಾಮ, ಕರಾವಳಿಯಲ್ಲಿ ಕಡಲು ಪ್ರಕ್ಷುಬ್ಧಗೊಂಡು ತೀರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದೆ. ಸುರಿದ ಭಾರಿ ಗಾಳಿ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತು.

ಅರಬ್ಬಿ ಸಮುದ್ರದಲ್ಲಿ ನಿರ್ಮಾಣವಾಗಿದ್ದ ವಾಯುಭಾರ ಕುಸಿತ ಶುಕ್ರವಾರ ಮುಂಜಾನೆ 5.30ರ ವೇಳೆಗೆ ಚಂಡಮಾರುತವಾಗಿ ಪರಿತರ್ವನೆಗೊಂಡು ಉತ್ತರಕ್ಕೆ ಸಂಚರಿಸಿದೆ. ಮಧ್ಯಾಹ್ನ 2.30ರ ವೇಳೆಗೆ 16.2ಡಿಗ್ರಿ ಉತ್ತರ ಅಕ್ಷಾಂಶ ಮತ್ತು 71.7ಡಿಗ್ರಿ ಪೂರ್ವ ರೇಖಾಂಶದಲ್ಲಿ ಪೂರ್ವ ಮಧ್ಯ ಸಮುದ್ರಲ್ಲಿ ಕೇಂದೀಕೃತವಾಗಿತ್ತು. ಪ್ರಸ್ತತ ಒಮಾನ್ ತೀರದಿಂದ 1880 ಕಿ.ಮೀ.ದೂರದಲ್ಲಿದ್ದು, ಪ್ರತಿ ಕ್ಷಣಕ್ಕೂ ತೀವ್ರಗೊಳ್ಳುತ್ತಿದ್ದು, 12 ಗಂಟೆಯಲ್ಲಿ ಶಕ್ತಿ ಇನ್ನಷ್ಟು ಹೆಚ್ಚಾಗಲಿದೆ. ಪೂರ್ವ ಕೇಂದ್ರ ಅರಬ್ಬಿ ಸಮುದ್ರದಿಂದ ಪಶ್ಚಿಮ ಮತ್ತು ವಾಯವ್ಯ ದಿಕ್ಕಿನತ್ತ ಸಾಗುವ ಸಾಧ್ಯತೆ ಇರುವುದರಿಂದ ಭಾರತ ಕರಾವಳಿಯಿಂದ ಮಾರುತ ದೂರ ಸಾಗಲಿದೆ ಎಂದು ಹವಾಮಾನ ಇಲಾಖೆ ಮತ್ತು ಸಮುದ್ರ ಅಧ್ಯಯನ ಸಂಸ್ಥೆ ಐಎನ್‌ಸಿಒಐಎಸ್ ಜಂಟಿ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರವಾಸಿಗರನ್ನು ಸಮುದ್ರಕ್ಕೆ ಇಳಿದಂತೆ ತಡೆಯಲು ಜಿಲ್ಲಾಡಳಿತ ಪೊಲೀಸ್ ಹಾಗೂ ಹೋಮ್‌ಗಾರ್ಡ್ ಕಿನಾರೆಗಳಲ್ಲಿ ಸಿಬ್ಬಂದಿಯನ್ನು ನಿಯೋಜಿಸಿದೆ. ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ಹೆಚ್ಚಿನ ಬೋಟ್‌ಗಳು ಬಂದರಿನಲ್ಲಿ ಲಂಗರು ಹಾಕಿವೆ. ನವ ಮಂಗಳೂರು ಬಂದರು ಪ್ರವೇಶಿಸುವ ಬಾಗಿಲಿನಲ್ಲಿ 200ಕ್ಕೂ ಅಧಿಕ ಬೋಟ್‌ಗಳು ನಿಂತಿರುವುದು ಕೋಸ್ಟ್‌ಗಾರ್ಡ್ ನೌಕೆಗಳು ಸಮುದ್ರದಲ್ಲಿ ರಕ್ಷಣೆ ಹಾಗೂ ಹುಡುಕಾಟ ಕಾರ್ಯಾಚರಣೆಗೆ ತೆರಳಲು ಅಡಚಣೆಯಾಗಿದೆ. ಬೋಟ್‌ಗಳನ್ನು ಬಂದರ್‌ನಲ್ಲಿ ಲಂಗರು ಹಾಕಿಸಲು ಪ್ರಯತ್ನ ನಡೆದಿದೆ.

ಚಂಡಮಾರುತ ಪರಿಣಾಮ ಸಮುದ್ರ ಇನ್ನೂ ಕೆಲವು ದಿನ ಸಮುದ್ರ ಪ್ರಕ್ಷುಬ್ಧವಾಗಿರುವುದರಿಂದ ಅ.31ರವರೆಗೆ ಮಿನುಗಾರರು ಸಮುದ್ರಕ್ಕೆ ಪ್ರವೇಶಿಸಬಾರದು ಎಂದು ಎಚ್ಚರಿಕೆ ನೀಡಲಾಗಿದೆ. 45-55 ಕಿ.ಮೀ.ನಿದ 65 ಕಿ.ಮೀ. ವೇಗದಲ್ಲಿ ಸಮುದ್ರದಿಂದ ಬಲವಾದ ಗಾಳಿ ಬೀಸಲಿದೆ ಎಂದು ಜಿಲ್ಲಾಡಳಿತ ಎಚ್ಚರಿಸಿದೆ.

 

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago