ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಪ್ರಮುಖವಾಗಿ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಇಂದು ಕೂಡ ಮಳೆ ಹೆಚ್ಚಳವಾಗಲಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆ. 20ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆ ಇದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆ. 20ರವರೆಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕೊಡಗು, ಹಾಸನ, ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯಿಂದ ಆ. 20ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಆ. 20ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಆ. 21ರ ಬಳಿಕ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…