ಬೆಂಗಳೂರು: ಜಲ್ಲಿಕಲ್ಲು ಹಾಗೂ ಶಿಲೆಗಳ ಸಾಗಾಟಕ್ಕೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.
ಇಂದು ಶಾಸಕ ವೇದವ್ಯಾಸ್ ಕಾಮತ್, ಉಡುಪಿ ಶಾಸಕರಾದ ರಘುಪತಿ ಭಟ್ ಅವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕ್ವಾರಿ ಮಾಲಕರು, ಕ್ರಷರ್ ಮಾಲಕರು, ಕಟ್ಟಡ ಸಾಮಾಗ್ರಿ ಲಾರಿ ಟೆಂಪೋ ಮಾಲಕರ ಸಂಘದ ಪದಾಧಿಕಾರಿಗಳ ನಿಯೋಗವು ಗಣಿ ಮತ್ತು ಭೂವಿಜ್ಞಾನ ಸಚಿವರಾಗ ಮುರುಗೇಶ್ ನಿರಾಣಿ ಅವರನ್ನು ಭೇಟಿ ಮಾಡಿ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಜಲ್ಲಿಕಲ್ಲು ಹಾಗೂ ಶಿಲೆಕಲ್ಲುಗಳ ಸಾಗಾಟಕ್ಕೆ ನಿರ್ಬಂಧ ಹೇರಿರುವ ಕಾರಣ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತವಾಗಿರುವ ಕುರಿತು ಚರ್ಚೆ ನಡೆಯಿತು.
ಜಲ್ಲಿಕಲ್ಲು ಸಿಗದೆ ಅನೇಕ ಕಾಮಗಾರಿಗಳು ಸ್ಥಗಿತವಾಗಿದೆ. ಮಾತ್ರವಲ್ಲದೆ ಜನ ಸಾಮಾನ್ಯರಿಗೂ ಇದರಿಂದ ವಿಪರೀತ ಸಮಸ್ಯೆಯಾಗುತ್ತಿದೆ. ಹಾಗಾಗಿ ನಿರ್ಬಂಧ ತೆರವುಗೊಳಿಸುವಂತೆ ನಿಯೋಗವು ಗಣಿ ಹಾಗೂ ಭೂ ವಿಜ್ಞಾನ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಸಮಸ್ಯೆ ಆಲಿಸಿದ ಸಚಿವರು ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ನಿಯೋಗದೊಂದಿಗೆ ಮುಖ್ಯಮಂತ್ರಿ ಶ್ರೀ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿಸಿ ಸಮಸ್ಯೆಯ ಕುರಿತು ಗಮನ ಸೆಳೆದರು.
ಸಮಸ್ಯೆಯ ಗಂಭೀರತೆಯನ್ನು ಅರಿತ ಮುಖ್ಯಮಂತ್ರಿಗಳು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜಲ್ಲಿಕಲ್ಲು ಹಾಗೂ ಶಿಲೆಕಲ್ಲು ಸಾಗಾಟಕ್ಕೆ ಅವಕಾಶ ನೀಡುವ ಕುರಿತು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ
ಇದನ್ನೂ ಓದಿ : ಸಿಡಿ ಪ್ರಕರಣ : ಯುವತಿಯ ಜೀವ ಹಾಗೂ ಮಾನ ರಕ್ಷಣೆಗೆ ಬದ್ಧನಾಗಿದ್ದೇನೆ : ರಮೇಶ್ ಕುಮಾರ್ -Vishwanews24
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…