Featured

ಕರಾವಳಿಯಲ್ಲಿ ಪ್ರವಾಸಿಗರ ಸಂಖ್ಯೆ ದಿಢೀರ್‌ ಏರಿಕೆ : ಪ್ರವಾಸಿ ತಾಣ, ಹೋಟೆಲ್‌ , ರೆಸಾರ್ಟ್‌ಗಳು ಭರ್ತಿ – Vishwanews24

ಕರಾವಳಿಯಲ್ಲಿ ಪ್ರವಾಸಿಗರ ಸಂಖ್ಯೆ ದಿಢೀರ್‌ ಏರಿಕೆ , ಪ್ರವಾಸಿ ತಾಣ, ಹೋಟೆಲ್‌ , ರೆಸಾರ್ಟ್‌ಗಳು ಭರ್ತಿ

ಮಂಗಳೂರು/ಉಡುಪಿ: ಕರಾವಳಿಯಲ್ಲಿ ಪ್ರವಾಸಿಗರ ಸಂಖ್ಯೆ ದಿಢೀರ್‌ ಏರಿಕೆಯಾಗಿದ್ದು, ತೀರ್ಥಕ್ಷೇತ್ರಗಳು, ಕಡಲ ತೀರ ಸಹಿತ ಪ್ರವಾಸಿ ತಾಣಗಳಲ್ಲಿ ಜನಜಂಗುಳಿ ಹೆಚ್ಚಿದೆ.

ಮಂಗಳೂರು, ಉಡುಪಿಯ ಪ್ರಮುಖ ಹೊಟೇಲ್‌ಗ‌ಳ ಕೊಠಡಿಗಳು ಜನವರಿ ಮೊದಲ ವಾರದ ವರೆಗೂ ಬುಕ್‌ ಆಗಿವೆ.ಹೋಂ ಸ್ಟೇಗಳು, ರೆಸಾರ್ಟ್‌ಗಳು, ಸರ್ವಿಸ್‌ ಅಪಾರ್ಟ್‌ಮೆಂಟ್‌ಗಳೂ ಭರ್ತಿಯಾಗಿವೆ.

ಮೂರು ವರ್ಷಗಳಿಂದ ಕೋವಿಡ್‌ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆ, ಕ್ರಿಸ್ಮಸ್‌ ಆಚರಣೆ ಮೇಲೆ ಒಂದಿಲ್ಲೊಂದು ರೀತಿಯ ನಿಯಂತ್ರಣ ಕ್ರಮಗಳಿದ್ದ ಕಾರಣ ಪ್ರವಾಸಿಗರ ಸಂಖ್ಯೆ ಕಡಿಮೆ ಇತ್ತು. ಈ ಬಾರಿ ಮುಖ್ಯವಾಗಿ ವರ್ಷಾಂತ್ಯಕ್ಕೆ ಊರಿಗೆ ಮರಳಿರುವ ಅನಿವಾಸಿ ಭಾರತೀಯರು, ಕ್ರಿಸ್ಮಸ್‌ ರಜೆಗೆ ಸುತ್ತಾಟಕ್ಕೆ ಆಗಮಿಸಿರುವಂತಹ ಕುಟುಂಬಗಳಿಂದಾಗಿ ಜನಸಂದಣಿ ಹೆಚ್ಚಿದೆ ಎನ್ನುತ್ತಾರೆ ಹೊಟೇಲ್‌ನವರು.

ದ.ಕ.ದಲ್ಲಿ 80 ನೋಂದಾಯಿತ ಹೋಂಸ್ಟೇಗಳು ಇವೆ. ಹೆಚ್ಚಿನವು ಮಂಗಳೂರು ತಾಲೂಕಿನಲ್ಲಿ ಅದರಲ್ಲೂ ವಿಶೇಷವಾಗಿ ಉಳ್ಳಾಲ, ಸುರತ್ಕಲ್‌ ಕಡಲ ಕಿನಾರೆ ಬಳಿ ಇವೆ. ಉಡುಪಿ ಜಿಲ್ಲೆಯ ಮಲ್ಪೆ, ಕಾಪು, ಕುಂದಾಪುರ ಕಡಲ ಕಿನಾರೆ ಪರಿಸರದಲ್ಲಿರುವ ಹೋಂ ಸ್ಟೇ, ಹಟ್‌ ಹೋಂಗಳು ಭರ್ತಿಯಾಗಿವೆ.

ಮಂಗಳೂರು ನಗರದಲ್ಲಿರುವ ಸ್ಟಾರ್‌ ಹೊಟೇಲ್‌ಗ‌ಳಲ್ಲಿ ಸುಮಾರು 400 ಕೊಠಡಿಗಳು ಪೂರ್ತಿ ತುಂಬಿ ದ್ದರೆ ಅದಕ್ಕಿಂತ ಕೆಳ ಮಟ್ಟದ ಹೊಟೇಲ್‌ಗ‌ಳಲ್ಲಿರುವ 2 ಸಾವಿರದಷ್ಟು ಕೊಠಡಿಗಳೂ ಭರ್ತಿಯಾಗಿವೆ. 30ಕ್ಕೂ ಹೆಚ್ಚು ಸರ್ವಿಸ್‌ ಅಪಾರ್ಟ್‌ಮೆಂಟ್‌ಗಳೂ ಬುಕ್‌ ಆಗಿವೆ. ಮುಖ್ಯವಾಗಿ ಬೆಂಗಳೂರು ಭಾಗದಿಂದ ಹೆಚ್ಚು ಜನರು ಆಗಮಿಸಿದ್ದಾರೆ.

ಮಂಗಳೂರು ನಗರದಲ್ಲಿರುವ ವಿವಿಧ ಶಾಪಿಂಗ್‌ ಮಾಲ್‌ಗ‌ಳು, ನಗರದ ಪ್ರಮುಖ ರೆಸ್ಟೋರೆಂಟ್‌, ಐಸ್‌ಕ್ರೀಂ ಪಾರ್ಲರುಗಳಲ್ಲೂ ಗ್ರಾಹಕರ ಸಂಖ್ಯೆ ಹೆಚ್ಚಿದೆ. ಕ್ರಿಸ್ಮಸ್‌ ಶಾಪಿಂಗ್‌ ಕೂಡ ಹೆಚ್ಚಾಗಿದೆ. ಮೂಡು ಬಿದಿರೆಯ ಸಾಂಸ್ಕೃತಿಕ ಜಾಂಬೂರಿ ನೋಡಲು ಬರುವವರ ಸಂಖ್ಯೆಯೂ ಅಧಿಕವಾಗಿದೆ. ಅಲ್ಲಿಗೆ ಬರುವವರು ಪ್ರಮುಖ ಧಾರ್ಮಿಕ ಕ್ಷೇತ್ರಗಳಿಗೂ ಹೋಗುವ ಯೋಜನೆ ಹಾಕಿಕೊಂಡೇ ಬರುತ್ತಾರೆ.

 

Vishwa News 24

Recent Posts

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

35 minutes ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

43 minutes ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

51 minutes ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 hour ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 hours ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

3 hours ago