ಮಂಗಳೂರು/ಉಡುಪಿ: ಕರಾವಳಿಯಲ್ಲಿ ಪ್ರವಾಸಿಗರ ಸಂಖ್ಯೆ ದಿಢೀರ್ ಏರಿಕೆಯಾಗಿದ್ದು, ತೀರ್ಥಕ್ಷೇತ್ರಗಳು, ಕಡಲ ತೀರ ಸಹಿತ ಪ್ರವಾಸಿ ತಾಣಗಳಲ್ಲಿ ಜನಜಂಗುಳಿ ಹೆಚ್ಚಿದೆ.
ಮಂಗಳೂರು, ಉಡುಪಿಯ ಪ್ರಮುಖ ಹೊಟೇಲ್ಗಳ ಕೊಠಡಿಗಳು ಜನವರಿ ಮೊದಲ ವಾರದ ವರೆಗೂ ಬುಕ್ ಆಗಿವೆ.ಹೋಂ ಸ್ಟೇಗಳು, ರೆಸಾರ್ಟ್ಗಳು, ಸರ್ವಿಸ್ ಅಪಾರ್ಟ್ಮೆಂಟ್ಗಳೂ ಭರ್ತಿಯಾಗಿವೆ.
ಮೂರು ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆ, ಕ್ರಿಸ್ಮಸ್ ಆಚರಣೆ ಮೇಲೆ ಒಂದಿಲ್ಲೊಂದು ರೀತಿಯ ನಿಯಂತ್ರಣ ಕ್ರಮಗಳಿದ್ದ ಕಾರಣ ಪ್ರವಾಸಿಗರ ಸಂಖ್ಯೆ ಕಡಿಮೆ ಇತ್ತು. ಈ ಬಾರಿ ಮುಖ್ಯವಾಗಿ ವರ್ಷಾಂತ್ಯಕ್ಕೆ ಊರಿಗೆ ಮರಳಿರುವ ಅನಿವಾಸಿ ಭಾರತೀಯರು, ಕ್ರಿಸ್ಮಸ್ ರಜೆಗೆ ಸುತ್ತಾಟಕ್ಕೆ ಆಗಮಿಸಿರುವಂತಹ ಕುಟುಂಬಗಳಿಂದಾಗಿ ಜನಸಂದಣಿ ಹೆಚ್ಚಿದೆ ಎನ್ನುತ್ತಾರೆ ಹೊಟೇಲ್ನವರು.
ದ.ಕ.ದಲ್ಲಿ 80 ನೋಂದಾಯಿತ ಹೋಂಸ್ಟೇಗಳು ಇವೆ. ಹೆಚ್ಚಿನವು ಮಂಗಳೂರು ತಾಲೂಕಿನಲ್ಲಿ ಅದರಲ್ಲೂ ವಿಶೇಷವಾಗಿ ಉಳ್ಳಾಲ, ಸುರತ್ಕಲ್ ಕಡಲ ಕಿನಾರೆ ಬಳಿ ಇವೆ. ಉಡುಪಿ ಜಿಲ್ಲೆಯ ಮಲ್ಪೆ, ಕಾಪು, ಕುಂದಾಪುರ ಕಡಲ ಕಿನಾರೆ ಪರಿಸರದಲ್ಲಿರುವ ಹೋಂ ಸ್ಟೇ, ಹಟ್ ಹೋಂಗಳು ಭರ್ತಿಯಾಗಿವೆ.
ಮಂಗಳೂರು ನಗರದಲ್ಲಿರುವ ಸ್ಟಾರ್ ಹೊಟೇಲ್ಗಳಲ್ಲಿ ಸುಮಾರು 400 ಕೊಠಡಿಗಳು ಪೂರ್ತಿ ತುಂಬಿ ದ್ದರೆ ಅದಕ್ಕಿಂತ ಕೆಳ ಮಟ್ಟದ ಹೊಟೇಲ್ಗಳಲ್ಲಿರುವ 2 ಸಾವಿರದಷ್ಟು ಕೊಠಡಿಗಳೂ ಭರ್ತಿಯಾಗಿವೆ. 30ಕ್ಕೂ ಹೆಚ್ಚು ಸರ್ವಿಸ್ ಅಪಾರ್ಟ್ಮೆಂಟ್ಗಳೂ ಬುಕ್ ಆಗಿವೆ. ಮುಖ್ಯವಾಗಿ ಬೆಂಗಳೂರು ಭಾಗದಿಂದ ಹೆಚ್ಚು ಜನರು ಆಗಮಿಸಿದ್ದಾರೆ.
ಮಂಗಳೂರು ನಗರದಲ್ಲಿರುವ ವಿವಿಧ ಶಾಪಿಂಗ್ ಮಾಲ್ಗಳು, ನಗರದ ಪ್ರಮುಖ ರೆಸ್ಟೋರೆಂಟ್, ಐಸ್ಕ್ರೀಂ ಪಾರ್ಲರುಗಳಲ್ಲೂ ಗ್ರಾಹಕರ ಸಂಖ್ಯೆ ಹೆಚ್ಚಿದೆ. ಕ್ರಿಸ್ಮಸ್ ಶಾಪಿಂಗ್ ಕೂಡ ಹೆಚ್ಚಾಗಿದೆ. ಮೂಡು ಬಿದಿರೆಯ ಸಾಂಸ್ಕೃತಿಕ ಜಾಂಬೂರಿ ನೋಡಲು ಬರುವವರ ಸಂಖ್ಯೆಯೂ ಅಧಿಕವಾಗಿದೆ. ಅಲ್ಲಿಗೆ ಬರುವವರು ಪ್ರಮುಖ ಧಾರ್ಮಿಕ ಕ್ಷೇತ್ರಗಳಿಗೂ ಹೋಗುವ ಯೋಜನೆ ಹಾಕಿಕೊಂಡೇ ಬರುತ್ತಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…