Featured

ಕರಾವಳಿಯಲ್ಲಿ ಪ್ರವಾಸಿಗರ ಸಂಖ್ಯೆ ದಿಢೀರ್‌ ಏರಿಕೆ : ಪ್ರವಾಸಿ ತಾಣ, ಹೋಟೆಲ್‌ , ರೆಸಾರ್ಟ್‌ಗಳು ಭರ್ತಿ – Vishwanews24

ಕರಾವಳಿಯಲ್ಲಿ ಪ್ರವಾಸಿಗರ ಸಂಖ್ಯೆ ದಿಢೀರ್‌ ಏರಿಕೆ , ಪ್ರವಾಸಿ ತಾಣ, ಹೋಟೆಲ್‌ , ರೆಸಾರ್ಟ್‌ಗಳು ಭರ್ತಿ

ಮಂಗಳೂರು/ಉಡುಪಿ: ಕರಾವಳಿಯಲ್ಲಿ ಪ್ರವಾಸಿಗರ ಸಂಖ್ಯೆ ದಿಢೀರ್‌ ಏರಿಕೆಯಾಗಿದ್ದು, ತೀರ್ಥಕ್ಷೇತ್ರಗಳು, ಕಡಲ ತೀರ ಸಹಿತ ಪ್ರವಾಸಿ ತಾಣಗಳಲ್ಲಿ ಜನಜಂಗುಳಿ ಹೆಚ್ಚಿದೆ.

ಮಂಗಳೂರು, ಉಡುಪಿಯ ಪ್ರಮುಖ ಹೊಟೇಲ್‌ಗ‌ಳ ಕೊಠಡಿಗಳು ಜನವರಿ ಮೊದಲ ವಾರದ ವರೆಗೂ ಬುಕ್‌ ಆಗಿವೆ.ಹೋಂ ಸ್ಟೇಗಳು, ರೆಸಾರ್ಟ್‌ಗಳು, ಸರ್ವಿಸ್‌ ಅಪಾರ್ಟ್‌ಮೆಂಟ್‌ಗಳೂ ಭರ್ತಿಯಾಗಿವೆ.

ಮೂರು ವರ್ಷಗಳಿಂದ ಕೋವಿಡ್‌ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆ, ಕ್ರಿಸ್ಮಸ್‌ ಆಚರಣೆ ಮೇಲೆ ಒಂದಿಲ್ಲೊಂದು ರೀತಿಯ ನಿಯಂತ್ರಣ ಕ್ರಮಗಳಿದ್ದ ಕಾರಣ ಪ್ರವಾಸಿಗರ ಸಂಖ್ಯೆ ಕಡಿಮೆ ಇತ್ತು. ಈ ಬಾರಿ ಮುಖ್ಯವಾಗಿ ವರ್ಷಾಂತ್ಯಕ್ಕೆ ಊರಿಗೆ ಮರಳಿರುವ ಅನಿವಾಸಿ ಭಾರತೀಯರು, ಕ್ರಿಸ್ಮಸ್‌ ರಜೆಗೆ ಸುತ್ತಾಟಕ್ಕೆ ಆಗಮಿಸಿರುವಂತಹ ಕುಟುಂಬಗಳಿಂದಾಗಿ ಜನಸಂದಣಿ ಹೆಚ್ಚಿದೆ ಎನ್ನುತ್ತಾರೆ ಹೊಟೇಲ್‌ನವರು.

ದ.ಕ.ದಲ್ಲಿ 80 ನೋಂದಾಯಿತ ಹೋಂಸ್ಟೇಗಳು ಇವೆ. ಹೆಚ್ಚಿನವು ಮಂಗಳೂರು ತಾಲೂಕಿನಲ್ಲಿ ಅದರಲ್ಲೂ ವಿಶೇಷವಾಗಿ ಉಳ್ಳಾಲ, ಸುರತ್ಕಲ್‌ ಕಡಲ ಕಿನಾರೆ ಬಳಿ ಇವೆ. ಉಡುಪಿ ಜಿಲ್ಲೆಯ ಮಲ್ಪೆ, ಕಾಪು, ಕುಂದಾಪುರ ಕಡಲ ಕಿನಾರೆ ಪರಿಸರದಲ್ಲಿರುವ ಹೋಂ ಸ್ಟೇ, ಹಟ್‌ ಹೋಂಗಳು ಭರ್ತಿಯಾಗಿವೆ.

ಮಂಗಳೂರು ನಗರದಲ್ಲಿರುವ ಸ್ಟಾರ್‌ ಹೊಟೇಲ್‌ಗ‌ಳಲ್ಲಿ ಸುಮಾರು 400 ಕೊಠಡಿಗಳು ಪೂರ್ತಿ ತುಂಬಿ ದ್ದರೆ ಅದಕ್ಕಿಂತ ಕೆಳ ಮಟ್ಟದ ಹೊಟೇಲ್‌ಗ‌ಳಲ್ಲಿರುವ 2 ಸಾವಿರದಷ್ಟು ಕೊಠಡಿಗಳೂ ಭರ್ತಿಯಾಗಿವೆ. 30ಕ್ಕೂ ಹೆಚ್ಚು ಸರ್ವಿಸ್‌ ಅಪಾರ್ಟ್‌ಮೆಂಟ್‌ಗಳೂ ಬುಕ್‌ ಆಗಿವೆ. ಮುಖ್ಯವಾಗಿ ಬೆಂಗಳೂರು ಭಾಗದಿಂದ ಹೆಚ್ಚು ಜನರು ಆಗಮಿಸಿದ್ದಾರೆ.

ಮಂಗಳೂರು ನಗರದಲ್ಲಿರುವ ವಿವಿಧ ಶಾಪಿಂಗ್‌ ಮಾಲ್‌ಗ‌ಳು, ನಗರದ ಪ್ರಮುಖ ರೆಸ್ಟೋರೆಂಟ್‌, ಐಸ್‌ಕ್ರೀಂ ಪಾರ್ಲರುಗಳಲ್ಲೂ ಗ್ರಾಹಕರ ಸಂಖ್ಯೆ ಹೆಚ್ಚಿದೆ. ಕ್ರಿಸ್ಮಸ್‌ ಶಾಪಿಂಗ್‌ ಕೂಡ ಹೆಚ್ಚಾಗಿದೆ. ಮೂಡು ಬಿದಿರೆಯ ಸಾಂಸ್ಕೃತಿಕ ಜಾಂಬೂರಿ ನೋಡಲು ಬರುವವರ ಸಂಖ್ಯೆಯೂ ಅಧಿಕವಾಗಿದೆ. ಅಲ್ಲಿಗೆ ಬರುವವರು ಪ್ರಮುಖ ಧಾರ್ಮಿಕ ಕ್ಷೇತ್ರಗಳಿಗೂ ಹೋಗುವ ಯೋಜನೆ ಹಾಕಿಕೊಂಡೇ ಬರುತ್ತಾರೆ.

 

Vishwa News 24

Recent Posts

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು – vishwanews24

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…

54 minutes ago

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

22 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

22 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

22 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

23 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

24 hours ago