ಉಡುಪಿ: ಜಿಲ್ಲೆಯ ವಿವಿಧ ಮೂಲೆಯಲ್ಲಿ ಹಿಂದೂ ಯುವ ಕಾರ್ಯಕರ್ತರ ಪಡೆಯೊಂದು ಕರಾವಳಿ ಭಾಗದಲ್ಲಿ ಬಲಿಷ್ಠವಾಗಿ ಬೆಳೆಯುತ್ತಿದೆ.
“ತುಳುನಾಡ ಹಿಂದೂ ಸೇನೆ” ಎಂಬ ನಾಮಂಕಿತದೊಂದಿದೆ ರಾಜಕೀಯದ ನೆರಳು ಸೋಂಕಿಸಿಕೊಳ್ಳದೆ ತಮ್ಮದೆ ಆದ ಶೈಲಿಯಲ್ಲಿ ಸಂಘಟನೆಯ ಕಾರ್ಯಪ್ರವೃತಗೊಂಡಿದ್ದು ಈಗಾಗಲೇ ಹೊಸ ನವ ತರುಣ ತರುಣಿಯರು ಸಂಘಟನೆಯ ಕಾರ್ಯಕಲಾಪದಲ್ಲಿ ಕೈಜೋಡಿಸುತ್ತಿದ್ದಾರೆ.
ಸಾಮಾಜಿಕ ಹಾಗೂ ಧರ್ಮದ ವಿಚಾರಧಾರೆಯಡಿಯಲ್ಲಿ ಕೆಲಸ ಮಾಡುತ್ತಿರುವ ಸಂಘಟನೆಯು ನ್ಯಾಯರ ಪರವಾಗಿ ಧ್ವನಿ ಎತ್ತುತ್ತಿರುವುದು ಕೂಡ ಸಮಾಜದಲ್ಲಿ ಶ್ಲಾಘನೆಗೆ ಪಾತ್ರವಾಗಿದೆ.
ಜಿಲ್ಲೆಯಲ್ಲಿ ಶ್ರೀಮತಿ ರಕ್ಷಾ ಹೆಣ್ಣುಮಗಳ ಸಾವಿನ ವಿಚಾರದಲ್ಲಿ ಗಟ್ಟಿಯಾಗಿ ಧ್ವನಿಎತ್ತಿದ ಪರಿಣಾದ ಪ್ರಕರಣದ ಚೆಂಡು ಸಿ.ಒ.ಡಿ ತನಿಖೆಯ ಕೈ ಸೇರಿರುವುದು ಇದೇ ಸಂಘಟನೆಯ ಮುತುವರ್ಜಿಯಲ್ಲಿ ಎಂಬುದು ಗಮನಾರ್ಹ ಅಂಶವಾಗಿದೆ.
ಜಿಲ್ಲೆಯಲ್ಲಿ ಅನ್ಯಾಯದ ಪರವಾಗಿ ಧ್ವನಿ ಎತ್ತಿ ನ್ಯಾಯದ ಹಾದಿಯಲ್ಲಿ ಸಾಗುತ್ತಿರುವ ತುಳುನಾಡ ಹಿಂದೂ ಸೇನೆಗೆ ಸೇರಲು ಯುವಕ ಯುವತಿಯರು ಮನಸ್ಸು ಮಾಡುತ್ತಿದ್ದಾರೆ ಎಂಬುದು ಕೂಡ ಗಮನಾರ್ಹ ಅಂಶವಾಗಿದೆ.
ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿ ಆರಂಭಗೊಂಡ ಸಂಘಟನೆ ಪ್ರಸ್ತುತ ತನ್ನ ಬಾಹುಬುಜವನ್ನು ಜಿಲ್ಲೆಯ ಮೂಲೆಮೂಲೆಗೂ ಪಸರಿಸುತ್ತಿದ್ದು ಮುಂದೊಂದು ದಿನ ರಾಜಕೀಯ ಸೋಂಕಿಲ್ಲದೆ ಹೆಮ್ಮರವಾಗಿ ಬೆಳೆಯುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದೆ.
ಸಮಾಜದ ಧ್ವನಿಯಾಗಿ ಕೆಲಸ ಮಾಡುವ ಹಾಗೂ ಸಕಾರಾತ್ಮಕವಾಗಿ ಸ್ಪಂದಿಸುವ ಉದ್ದೇಶದಿಂದ ಕಚೇರಿ ಕಾರ್ಯ ಕೂಡ ಮುಂದಿನ ದಿನದಲ್ಲಿ ಪ್ರಾರಂಭವಾಗಲಿದೆ.
ಒಟ್ಟಾರೆಯಾಗಿ ಸಮಾಜದ ಹಿತದೃಷ್ಟಿ ಹಾಗೂ ಧರ್ಮ ಹಾಗೂ ದೇಶ ವಿಚಾರಕ್ಕೆ ಧಕ್ಕೆ ಬಂದಾಗ ಯುವಕರನ್ನು ಒಗ್ಗೂಡಿಸಿ ಸಾಗುವ ಸಂಘಟನೆಯಾಗಿ “ತುಳುನಾಡ ಹಿಂದೂ ಸೇನೆ” ಮೂಡಿಬರಲಿ ಎಂಬುದು ಆಶಯವಾಗಿದೆ.
ಬ್ಯೂರೋ ರಿಪೋರ್ಟ್.
ಪುರುಷೋತ್ತಮ ಸಾಲಿಯಾನ್ ವಿಶ್ವನ್ಯೂಸ್24.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…