ಉಡುಪಿ,: ಇಂದಿನಿಂದ ಮುಂದಿನ ಮೂರು ದಿನಗಳ ಕಾಲ ಕರ್ನಾಟಕ ಕರಾವಳಿ ತೀರದಲ್ಲಿ ಭಾರೀ ವೇಗದ ಗಾಳಿ-ಮಳೆ ಬೀಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.
ಜೂ.8ರಿಂದ 11ರವರೆಗೆ ಕರಾವಳಿಯಲ್ಲಿ ಗಂಟೆಗೆ 35ರಿಂದ 45ಕಿ.ಮೀ. ವೇಗದ ಒಮ್ಮೊಮ್ಮೆ 55ರಿಂದ 65ಕಿ.ಮೀ. ವೇಗ ಪಡೆಯುವ ಗಾಳಿ ಕರ್ನಾಟಕ ಕರಾವಳಿ ತೀರದುದ್ದಕ್ಕೂ ಬೀಸುವ ಸಾಧ್ಯತೆ ಇದ್ದು, ಈ ಅವಧಿಯಲ್ಲಿ ಕರಾವಳಿಯ ಮೀನುಗಾರರು ಮೀನುಗಾರಿಕೆಗೆಂದು ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.
ಈ ಅವಧಿಯಲ್ಲಿ ರಾಜ್ಯ ಕರಾವಳಿಯ ಜಿಲ್ಲೆಗಳ ಕೆಲವು ಪ್ರದೇಶಗಳ್ಲಿ 64.5ಮಿ.ಮೀ.ನಿಂದ 115.6ಮಿ.ಮೀ.ವರೆಗೆ ಹಾಗೂ ಇನ್ನು ಕೆಲವು ಪ್ರದೇಶಗಳಲ್ಲಿ 115.6ಮಿ.ಮೀ.ನಿಂದ 204.4 ಮಿ.ಮೀ.ವರೆಗೂ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ವರದಿಯಲ್ಲಿ ತಿಳಿಸಲಾಗಿದೆ.
ಇದೇ ರೀತಿಯ ಎಚ್ಚರಿಕೆಯನ್ನು ಕೇರಳ, ಲಕ್ಷದ್ವೀಪ ಹಾಗೂ ದಕ್ಷಿಣ ತಮಿಳುನಾಡಿನ ಕರಾವಳಿ ತೀರದ ಮೀನುಗಾರರಿಗೂ ನೀಡಲಾಗಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…