ಕರಾವಳಿಯಲ್ಲಿ ಸದ್ದು ಮಾಡ್ತಿದೆ #EducationInTulu ಟ್ರೆಂಡ್..! ಏನಿದು ಹ್ಯಾಶ್ಟ್ಯಾಗ್ ಅಭಿಯಾನ?
ಮಂಗಳೂರು: ನಮ್ಮ ರಾಜ್ಯದಲ್ಲಿ ಕನ್ನಡ ಬಿಟ್ಟರೆ ಅತೀ ಹೆಚ್ಚಾಗಿ ಬಳಸಲ್ಪಡುವ ಭಾಷೆ ತುಳು. ಆದರೆ ತುಳು ಭಾಷೆಗೆ ಇನ್ನೂ ಸಾಂವಿಧಾನಿಕ ಸ್ಥಾನಮಾನ ಇನ್ನೂ ಸಿಕ್ಕಿಲ್ಲ. ಸಾಂವಿಧಾನಿಕ ಸ್ಥಾನಮಾನಕ್ಕಾಗಿ ಕಳೆದ ಹಲವು ವರ್ಷಗಳಿಂದ ಅನೇಕ ಹೋರಾಟಗಳು, ಅಭಿಯಾನಗಳು ನಡೆಯುತ್ತಾ ಬಂದಿವೆ.
ಈಗ ಕೇಂದ್ರ ಸರಕಾರದ ಹೊಸ ಶಿಕ್ಷಣ ನೀತಿ ಪ್ರಕಾರ ಪ್ರಾದೇಶಿಕ ಭಾಷೆಯಲ್ಲಿ ಶಿಕ್ಷಣ ನೀಡಲು ಆದ್ಯತೆಯ ಅವಕಾಶ ನೀಡಿದ್ದು ಈ ಹಿನ್ನಲೆ ಇದೀಗ ತುಳುನಾಡಿನ ಮಕ್ಕಳಿಗೆ ತುಳುವಿನಲ್ಲಿಯೇ ಶಿಕ್ಷಣ ಸಿಗಬೇಕು ಎಂಬ ಅಭಿಯಾನವೊಂದನ್ನು ನಡೆಸಲು ತುಳುವರು ತೀರ್ಮಾನಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಈಗಾಗಲೇ ತುಳುಪರ ಕಾರ್ಯಕ್ರಮಗಳನ್ನು ಮಾಡಿ ಮೆಚ್ಚುಗೆ ಗಳಿಸಿರುವ ಜೈ ತುಳುನಾಡ್ ಸಂಘಟನೆ ಸಾಮಾಜಿಕ ಜಾಲತಾಣಗಳಲ್ಲಿ ನಡೆಸುವ ಅಭಿಯಾನದ ನೇತೃತ್ವ ವಹಿಸಿಕೊಂಡಿದೆ. ಅಲ್ಲದೆ ಈಗಾಗಲೇ ಜನರಲ್ಲಿ ಈ ಬಗ್ಗೆ ಜಾಗೃತಿ ಕೂಡ ಮೂಡಿಸಲು ಆರಂಭಿಸಿದೆ. ಇದೇ ಆಗಸ್ಟ್ 16ರಂದು ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ಕ್ಯಾಂಪೇನ್ ನಡೆಸಲು ತುಳುವರು ನಿರ್ಧರಿಸಿದ್ದಾರೆ.
ಈ ಹಿಂದೆ ತುಳುಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕು. ತುಳು ಭಾಷೆಯನ್ನು ಕರ್ನಾಟಕ ಮತ್ತು ಕೇರಳ ರಾಜ್ಯದಲ್ಲಿ ಅಧಿಕೃತ ರಾಜ್ಯ ಭಾಷೆಯನ್ನಾಗಿ ಘೋಷಣೆ ಮಾಡಬೇಕು. ಹಾಗೂ ತುಳು ಲಿಪಿಯನ್ನು ಸಾರ್ವಜನಿಕರಿಗೆ ಕಲಿಸುವಂತಹ ದೊಡ್ಡ ಮಟ್ಟದ ಕಾರ್ಯಕ್ರಮಗಳನ್ನು ಇದೇ ಸಂಘಟನೆ ಹಮ್ಮಿಕೊಂಡಿತ್ತು. ಈ ಮೂಲಕ ತುಳುವರ ಪರ ಕಾರ್ಯಕ್ರಮಗಳನ್ನು ಮಾಡಿ ಜನಮನ್ನಣೆ ಗಳಿಸಿದೆ.
ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿ ಜಾರಿಗೊಳಿಸಲು ನಿರ್ಧರಿಸಿದೆ. ಈ ಹೊಸ ಶಿಕ್ಷಣ ನೀತಿಯಲ್ಲಿ 5ನೇ ತರಗತಿಯವರೆಗೆ ಆಯಾ ಪ್ರಾದೇಶಿಕ ಭಾಷೆಯಲ್ಲಿ ಶಿಕ್ಷಣ ಕೊಡಬೇಕು ಎಂಬ ನಿಯಮವಿದೆ. ಇದರ ಅನ್ವಯ ತುಳುನಾಡಿನ ಮಕ್ಕಳಿಗೆ ತುಳು ಭಾಷೆಯಲ್ಲಿಯೇ ಶಿಕ್ಷಣ ನೀಡಬೇಕೆಂಬ ನಿಯಮ ಸೇರಿಸಬೇಕು ಎಂಬುದು ಕರಾವಳಿ ಜನರ ಮಹತ್ತರವಾದ ಆಶಯವಾಗಿದೆ.
ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ಬಳಿ ತುಳುವನ್ನು ಹೊಸ ಶಿಕ್ಷಣ ನೀತಿಯಲ್ಲಿ ಸೇರಿಸುವ ಬಗ್ಗೆ ಮನವಿ ಮಾಡಬೇಕಾಗಿದ್ದು, ಈ ಮೂಲಕ ಸರ್ಕಾರದ ಗಮನ ಸೆಳೆಯುವ ಅಗತ್ಯತೆ ಇದೆ. ಹೀಗಾಗಿ ತುಳು ಅಭಿಮಾನಿಗಳು ಪಾಲ್ಗೊಂಡು #EducationInTulu ಎಂಬ ಹ್ಯಾಶ್ ಟ್ಯಾಗ್ ನಲ್ಲಿ ಟ್ವೀಟ್ ಮಾಡಿ ಜನಪ್ರತಿನಿಧಿಗಳು ಹಾಗೂ ಸರ್ಕಾರವನ್ನು ಎಚ್ಚರಿಸಲು ಈ ಅಭಿಯಾನ ನಡೆಸಲು ಸಂಘಟನೆ ನಿರ್ಧರಿಸಿದೆ.
ಇದೇ ಆಗಸ್ಟ್ 16ರಂದು ಟ್ವೀಟ್ ಅಭಿಯಾನ ಆಯೋಜಿಸಲಾಗಿದೆ. ಈ ಅಭಿಯಾನದಲ್ಲಿ ತುಳು ಭಾಷಾಪ್ರೇಮಿಗಳು ಪಾಲ್ಗೊಳ್ಳುವಂತೆ ಜೈ ತುಳುನಾಡ್ ಸಂಘಟನೆ ವಿನಂತಿಸಿಕೊಂಡಿದ್ದು, #EducationInTulu ಅನ್ನುವ ಹ್ಯಾಷ್ಟ್ಯಾಗ್ನಲ್ಲಿ ತುಳು ಭಾಷೆಯಲ್ಲಿಯೇ ಶಿಕ್ಷಣ ಸಿಗುವಂತೆ ಸರ್ಕಾರವನ್ನು ಜನರು ಎಚ್ಚರಿಸಬೇಕೆಂದು ತಿಳಿಸಲಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…