ಉಡುಪಿ

ಕರಾವಳಿಯಲ್ಲಿ ಭಾರಿ ಸದ್ದು ಮಾಡ್ತಿದೆ #EducationInTulu ಅಭಿಯಾನ..! Vishwanews24

ಕರಾವಳಿಯಲ್ಲಿ ಸದ್ದು ಮಾಡ್ತಿದೆ #EducationInTulu ಟ್ರೆಂಡ್..! ಏನಿದು ಹ್ಯಾಶ್‌ಟ್ಯಾಗ್ ಅಭಿಯಾನ?

ಮಂಗಳೂರು: ನಮ್ಮ ರಾಜ್ಯದಲ್ಲಿ ಕನ್ನಡ ಬಿಟ್ಟರೆ ಅತೀ ಹೆಚ್ಚಾಗಿ ಬಳಸಲ್ಪಡುವ ಭಾಷೆ ತುಳು. ಆದರೆ ತುಳು ಭಾಷೆಗೆ ಇನ್ನೂ ಸಾಂವಿಧಾನಿಕ ಸ್ಥಾನಮಾನ ಇನ್ನೂ ಸಿಕ್ಕಿಲ್ಲ. ಸಾಂವಿಧಾನಿಕ ಸ್ಥಾನಮಾನಕ್ಕಾಗಿ ಕಳೆದ ಹಲವು ವರ್ಷಗಳಿಂದ ಅನೇಕ ಹೋರಾಟಗಳು, ಅಭಿಯಾನಗಳು ನಡೆಯುತ್ತಾ ಬಂದಿವೆ.

ಈಗ ಕೇಂದ್ರ ಸರಕಾರದ ಹೊಸ ಶಿಕ್ಷಣ ನೀತಿ ಪ್ರಕಾರ ಪ್ರಾದೇಶಿಕ ಭಾಷೆಯಲ್ಲಿ ಶಿಕ್ಷಣ ನೀಡಲು ಆದ್ಯತೆಯ ಅವಕಾಶ ನೀಡಿದ್ದು ಈ ಹಿನ್ನಲೆ ಇದೀಗ ತುಳುನಾಡಿನ ಮಕ್ಕಳಿಗೆ ತುಳುವಿನಲ್ಲಿಯೇ ಶಿಕ್ಷಣ ಸಿಗಬೇಕು ಎಂಬ ಅಭಿಯಾನವೊಂದನ್ನು ನಡೆಸಲು ತುಳುವರು ತೀರ್ಮಾನಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಈಗಾಗಲೇ ತುಳುಪರ ಕಾರ್ಯಕ್ರಮಗಳನ್ನು ಮಾಡಿ ಮೆಚ್ಚುಗೆ ಗಳಿಸಿರುವ ಜೈ ತುಳುನಾಡ್ ಸಂಘಟನೆ ಸಾಮಾಜಿಕ ಜಾಲತಾಣಗಳಲ್ಲಿ ನಡೆಸುವ ಅಭಿಯಾನದ ನೇತೃತ್ವ ವಹಿಸಿಕೊಂಡಿದೆ. ಅಲ್ಲದೆ ಈಗಾಗಲೇ ಜನರಲ್ಲಿ ಈ ಬಗ್ಗೆ ಜಾಗೃತಿ ಕೂಡ ಮೂಡಿಸಲು ಆರಂಭಿಸಿದೆ. ಇದೇ ಆಗಸ್ಟ್ 16ರಂದು ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ಕ್ಯಾಂಪೇನ್ ನಡೆಸಲು ತುಳುವರು ನಿರ್ಧರಿಸಿದ್ದಾರೆ.

ಈ ಹಿಂದೆ ತುಳುಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕು. ತುಳು ಭಾಷೆಯನ್ನು ಕರ್ನಾಟಕ ಮತ್ತು ಕೇರಳ ರಾಜ್ಯದಲ್ಲಿ ಅಧಿಕೃತ ರಾಜ್ಯ ಭಾಷೆಯನ್ನಾಗಿ ಘೋಷಣೆ ಮಾಡಬೇಕು. ಹಾಗೂ ತುಳು ಲಿಪಿಯನ್ನು ಸಾರ್ವಜನಿಕರಿಗೆ ಕಲಿಸುವಂತಹ ದೊಡ್ಡ ಮಟ್ಟದ ಕಾರ್ಯಕ್ರಮಗಳನ್ನು ಇದೇ ಸಂಘಟನೆ ಹಮ್ಮಿಕೊಂಡಿತ್ತು. ಈ ಮೂಲಕ ತುಳುವರ ಪರ ಕಾರ್ಯಕ್ರಮಗಳನ್ನು ಮಾಡಿ ಜನಮನ್ನಣೆ ಗಳಿಸಿದೆ.

ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿ ಜಾರಿಗೊಳಿಸಲು ನಿರ್ಧರಿಸಿದೆ. ಈ ಹೊಸ ಶಿಕ್ಷಣ ನೀತಿಯಲ್ಲಿ 5ನೇ ತರಗತಿಯವರೆಗೆ ಆಯಾ ಪ್ರಾದೇಶಿಕ ಭಾಷೆಯಲ್ಲಿ ಶಿಕ್ಷಣ ಕೊಡಬೇಕು ಎಂಬ ನಿಯಮವಿದೆ. ಇದರ ಅನ್ವಯ ತುಳುನಾಡಿನ ಮಕ್ಕಳಿಗೆ ತುಳು ಭಾಷೆಯಲ್ಲಿಯೇ ಶಿಕ್ಷಣ ನೀಡಬೇಕೆಂಬ ನಿಯಮ ಸೇರಿಸಬೇಕು ಎಂಬುದು ಕರಾವಳಿ ಜನರ ಮಹತ್ತರವಾದ ಆಶಯವಾಗಿದೆ.

ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ಬಳಿ ತುಳುವನ್ನು ಹೊಸ ಶಿಕ್ಷಣ ನೀತಿಯಲ್ಲಿ ಸೇರಿಸುವ ಬಗ್ಗೆ ಮನವಿ ಮಾಡಬೇಕಾಗಿದ್ದು, ಈ ಮೂಲಕ ಸರ್ಕಾರದ ಗಮನ ಸೆಳೆಯುವ ಅಗತ್ಯತೆ ಇದೆ. ಹೀಗಾಗಿ ತುಳು ಅಭಿಮಾನಿಗಳು ಪಾಲ್ಗೊಂಡು #EducationInTulu ಎಂಬ ಹ್ಯಾಶ್ ಟ್ಯಾಗ್ ನಲ್ಲಿ ಟ್ವೀಟ್ ಮಾಡಿ ಜನಪ್ರತಿನಿಧಿಗಳು ಹಾಗೂ ಸರ್ಕಾರವನ್ನು ಎಚ್ಚರಿಸಲು ಈ ಅಭಿಯಾನ ನಡೆಸಲು ಸಂಘಟನೆ ನಿರ್ಧರಿಸಿದೆ.

ಇದೇ ಆಗಸ್ಟ್ 16ರಂದು ಟ್ವೀಟ್ ಅಭಿಯಾನ ಆಯೋಜಿಸಲಾಗಿದೆ. ಈ ಅಭಿಯಾನದಲ್ಲಿ ತುಳು ಭಾಷಾಪ್ರೇಮಿಗಳು ಪಾಲ್ಗೊಳ್ಳುವಂತೆ ಜೈ ತುಳುನಾಡ್ ಸಂಘಟನೆ ವಿನಂತಿಸಿಕೊಂಡಿದ್ದು, #EducationInTulu ಅನ್ನುವ ಹ್ಯಾಷ್‌ಟ್ಯಾಗ್‌ನಲ್ಲಿ ತುಳು ಭಾಷೆಯಲ್ಲಿಯೇ ಶಿಕ್ಷಣ ಸಿಗುವಂತೆ ಸರ್ಕಾರವನ್ನು ಜನರು ಎಚ್ಚರಿಸಬೇಕೆಂದು ತಿಳಿಸಲಾಗಿದೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

11 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

11 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

11 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

11 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

11 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

13 hours ago