ಕರಾವಳಿಯಲ್ಲಿ ಸದ್ದು ಮಾಡ್ತಿದೆ #EducationInTulu ಟ್ರೆಂಡ್..! ಏನಿದು ಹ್ಯಾಶ್ಟ್ಯಾಗ್ ಅಭಿಯಾನ?
ಮಂಗಳೂರು: ನಮ್ಮ ರಾಜ್ಯದಲ್ಲಿ ಕನ್ನಡ ಬಿಟ್ಟರೆ ಅತೀ ಹೆಚ್ಚಾಗಿ ಬಳಸಲ್ಪಡುವ ಭಾಷೆ ತುಳು. ಆದರೆ ತುಳು ಭಾಷೆಗೆ ಇನ್ನೂ ಸಾಂವಿಧಾನಿಕ ಸ್ಥಾನಮಾನ ಇನ್ನೂ ಸಿಕ್ಕಿಲ್ಲ. ಸಾಂವಿಧಾನಿಕ ಸ್ಥಾನಮಾನಕ್ಕಾಗಿ ಕಳೆದ ಹಲವು ವರ್ಷಗಳಿಂದ ಅನೇಕ ಹೋರಾಟಗಳು, ಅಭಿಯಾನಗಳು ನಡೆಯುತ್ತಾ ಬಂದಿವೆ.
ಈಗ ಕೇಂದ್ರ ಸರಕಾರದ ಹೊಸ ಶಿಕ್ಷಣ ನೀತಿ ಪ್ರಕಾರ ಪ್ರಾದೇಶಿಕ ಭಾಷೆಯಲ್ಲಿ ಶಿಕ್ಷಣ ನೀಡಲು ಆದ್ಯತೆಯ ಅವಕಾಶ ನೀಡಿದ್ದು ಈ ಹಿನ್ನಲೆ ಇದೀಗ ತುಳುನಾಡಿನ ಮಕ್ಕಳಿಗೆ ತುಳುವಿನಲ್ಲಿಯೇ ಶಿಕ್ಷಣ ಸಿಗಬೇಕು ಎಂಬ ಅಭಿಯಾನವೊಂದನ್ನು ನಡೆಸಲು ತುಳುವರು ತೀರ್ಮಾನಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಈಗಾಗಲೇ ತುಳುಪರ ಕಾರ್ಯಕ್ರಮಗಳನ್ನು ಮಾಡಿ ಮೆಚ್ಚುಗೆ ಗಳಿಸಿರುವ ಜೈ ತುಳುನಾಡ್ ಸಂಘಟನೆ ಸಾಮಾಜಿಕ ಜಾಲತಾಣಗಳಲ್ಲಿ ನಡೆಸುವ ಅಭಿಯಾನದ ನೇತೃತ್ವ ವಹಿಸಿಕೊಂಡಿದೆ. ಅಲ್ಲದೆ ಈಗಾಗಲೇ ಜನರಲ್ಲಿ ಈ ಬಗ್ಗೆ ಜಾಗೃತಿ ಕೂಡ ಮೂಡಿಸಲು ಆರಂಭಿಸಿದೆ. ಇದೇ ಆಗಸ್ಟ್ 16ರಂದು ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ಕ್ಯಾಂಪೇನ್ ನಡೆಸಲು ತುಳುವರು ನಿರ್ಧರಿಸಿದ್ದಾರೆ.
ಈ ಹಿಂದೆ ತುಳುಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕು. ತುಳು ಭಾಷೆಯನ್ನು ಕರ್ನಾಟಕ ಮತ್ತು ಕೇರಳ ರಾಜ್ಯದಲ್ಲಿ ಅಧಿಕೃತ ರಾಜ್ಯ ಭಾಷೆಯನ್ನಾಗಿ ಘೋಷಣೆ ಮಾಡಬೇಕು. ಹಾಗೂ ತುಳು ಲಿಪಿಯನ್ನು ಸಾರ್ವಜನಿಕರಿಗೆ ಕಲಿಸುವಂತಹ ದೊಡ್ಡ ಮಟ್ಟದ ಕಾರ್ಯಕ್ರಮಗಳನ್ನು ಇದೇ ಸಂಘಟನೆ ಹಮ್ಮಿಕೊಂಡಿತ್ತು. ಈ ಮೂಲಕ ತುಳುವರ ಪರ ಕಾರ್ಯಕ್ರಮಗಳನ್ನು ಮಾಡಿ ಜನಮನ್ನಣೆ ಗಳಿಸಿದೆ.
ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿ ಜಾರಿಗೊಳಿಸಲು ನಿರ್ಧರಿಸಿದೆ. ಈ ಹೊಸ ಶಿಕ್ಷಣ ನೀತಿಯಲ್ಲಿ 5ನೇ ತರಗತಿಯವರೆಗೆ ಆಯಾ ಪ್ರಾದೇಶಿಕ ಭಾಷೆಯಲ್ಲಿ ಶಿಕ್ಷಣ ಕೊಡಬೇಕು ಎಂಬ ನಿಯಮವಿದೆ. ಇದರ ಅನ್ವಯ ತುಳುನಾಡಿನ ಮಕ್ಕಳಿಗೆ ತುಳು ಭಾಷೆಯಲ್ಲಿಯೇ ಶಿಕ್ಷಣ ನೀಡಬೇಕೆಂಬ ನಿಯಮ ಸೇರಿಸಬೇಕು ಎಂಬುದು ಕರಾವಳಿ ಜನರ ಮಹತ್ತರವಾದ ಆಶಯವಾಗಿದೆ.
ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ಬಳಿ ತುಳುವನ್ನು ಹೊಸ ಶಿಕ್ಷಣ ನೀತಿಯಲ್ಲಿ ಸೇರಿಸುವ ಬಗ್ಗೆ ಮನವಿ ಮಾಡಬೇಕಾಗಿದ್ದು, ಈ ಮೂಲಕ ಸರ್ಕಾರದ ಗಮನ ಸೆಳೆಯುವ ಅಗತ್ಯತೆ ಇದೆ. ಹೀಗಾಗಿ ತುಳು ಅಭಿಮಾನಿಗಳು ಪಾಲ್ಗೊಂಡು #EducationInTulu ಎಂಬ ಹ್ಯಾಶ್ ಟ್ಯಾಗ್ ನಲ್ಲಿ ಟ್ವೀಟ್ ಮಾಡಿ ಜನಪ್ರತಿನಿಧಿಗಳು ಹಾಗೂ ಸರ್ಕಾರವನ್ನು ಎಚ್ಚರಿಸಲು ಈ ಅಭಿಯಾನ ನಡೆಸಲು ಸಂಘಟನೆ ನಿರ್ಧರಿಸಿದೆ.
ಇದೇ ಆಗಸ್ಟ್ 16ರಂದು ಟ್ವೀಟ್ ಅಭಿಯಾನ ಆಯೋಜಿಸಲಾಗಿದೆ. ಈ ಅಭಿಯಾನದಲ್ಲಿ ತುಳು ಭಾಷಾಪ್ರೇಮಿಗಳು ಪಾಲ್ಗೊಳ್ಳುವಂತೆ ಜೈ ತುಳುನಾಡ್ ಸಂಘಟನೆ ವಿನಂತಿಸಿಕೊಂಡಿದ್ದು, #EducationInTulu ಅನ್ನುವ ಹ್ಯಾಷ್ಟ್ಯಾಗ್ನಲ್ಲಿ ತುಳು ಭಾಷೆಯಲ್ಲಿಯೇ ಶಿಕ್ಷಣ ಸಿಗುವಂತೆ ಸರ್ಕಾರವನ್ನು ಜನರು ಎಚ್ಚರಿಸಬೇಕೆಂದು ತಿಳಿಸಲಾಗಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…