Featured

ಕರಾವಳಿಯಲ್ಲಿ ಮತ್ತೆ ಅಬ್ಬರಿಸಿದ  ವರುಣ ;  ಪ್ರವಾಹ ಪರಿಸ್ಥಿತಿಗೆ ತುತ್ತಾದ ಭಟ್ಕಳ – Vishwanews24

ಕರಾವಳಿಯಲ್ಲಿ ಮತ್ತೆ ಅಬ್ಬರಿಸಿದ  ವರುಣ ;  ಪ್ರವಾಹ ಪರಿಸ್ಥಿತಿಗೆ ತುತ್ತಾದ ಭಟ್ಕಳ

ಉತ್ತರ ಕನ್ನಡ: ರಾಜ್ಯದ ಕರಾವಳಿಯಲ್ಲಿ ಮತ್ತೆ ವರುಣನ ಆರ್ಭಟ ಜೋರಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳಲ್ಲಿ ಸೋಮವಾರ ರಾತ್ರಿಯಿಂದ ಆರಂಭವಾದ ಮಳೆ ಈವರೆಗೂ ಬಿಡುವು ನೀಡಿಲ್ಲ. ಇದರಿಂದಾಗಿ ಮತ್ತೆ ಅನೇಕ ಗ್ರಾಮಗಳು ಮುಳುಗಡೆಯ ಹಂತ ತಲುಪಿವೆ.

ರಾತ್ರಿಯಿಂದ ಬೆಳಗ್ಗಿನವರೆಗೆ ಸುರಿದ ಮಳೆಗೆ ನಿರೀಕ್ಷೆಯೇ ಇರದಷ್ಟು ನೀರು ತುಂಬಿ ಪಟ್ಟಣ ಭಾಗದಲ್ಲೇ ಹತ್ತಾರು ಗ್ರಾಮಗಳು ಜಲಾವೃತವಾಗಿವೆ. ಒಮ್ಮೆಲೆ ನಗರ ಭಾಗದಲ್ಲಿ ನೀರು ತುಂಬಲಾರಂಭಿಸಿದ್ದು, ಇದರಿಂದಾಗಿ ಜನ ಕಂಗಾಲಾಗಿದ್ದಾರೆ. ಬೆಳ್ಳಂಬೆಳಿಗ್ಗೆ ನಿದ್ದೆಯಿಂದ ಎದ್ದು ಕುಳಿತು ಸಾಮಾನು- ಸರಂಜಾಮುಗಳನ್ನ ರಕ್ಷಿಸಿಕೊಳ್ಳಲು ಪರದಾಡಿದರು.

ವೆಂಕಟಾಪುರ, ಚೌಥ್ನಿ, ಶರಾಬಿ ಹೊಳೆಗಳು ತುಂಬಿ ಹರಿದ ಪರಿಣಾಮ ಪಟ್ಟಣ ಭಾಗದ ಕೋಕ್ತಿ, ಆಸರಕೇರಿ, ಮೂಡಭಟ್ಕಳ, ಮುಟ್ಟಳ್ಳಿ, ಚೌಥ್ನಿ, ಮುಂಡಳ್ಳಿ ಭಾಗ ಸಂಪೂರ್ಣ ಜಲಾವೃತವಾಗಿದೆ. ರಾಷ್ಟ್ರೀಯ ಹೆದ್ದಾರಿಯ ಶಂಸುದ್ದೀನ್ ಸರ್ಕಲ್, ರಂಗಿನಕಟ್ಟೆ, ಶಿರಾಲಿಯಲ್ಲಿ ಸೊಂಟದ ಮಟ್ಟ ನೀರು ನಿಂತು ವಾಹನಗಳು ಓಡಾಡದ ಪರಿಸ್ಥಿತಿ ಎದುರಾಗಿದೆ. ಭಟ್ಕಳದ ಶಂಸುದ್ದೀನ್ ವೃತ್ತದಿಂದ ಪೇಟೆಯ ಹೂವಿನ ಚೌಕದವರೆಗೆ ಭಾರಿ ನೀರು ನಿಂತಿದ್ದು, ಸಣ್ಣ-ಪುಟ್ಟ ವಾಹನಗಳು ಕೂಡ ತೇಲಿ ಹೋಗಿವೆ.

ಮುಂಜಾಗ್ರತಾ ಕ್ರಮವಾಗಿ ಭಟ್ಕಳದ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ನೆರೆ ಉಂಟಾಗುವ ತಾಲೂಕು ಅಲ್ಲದಿದ್ದರೂ ಸಹ ಭಟ್ಕಳ ಇತಿಹಾಸದಲ್ಲಿ ಕಂಡು ಕೇಳರಿಯದ ಪ್ರವಾಹ ಪರಿಸ್ಥಿತಿಗೆ ಈ ಬಾರಿ ತುತ್ತಾದಂತಾಗಿದೆ. ಆಗಸ್ಟ್ 6ರವರೆಗೂ ಭಾರಿ ಮಳೆಯ ಮುನ್ಸೂಚನೆ ಕಾರಣ ಈಗಾಗಲೇ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಜನತೆ ಎಚ್ಚರ ವಹಿಸಬೇಕಿದೆ.

ಭಟ್ಕಳ ತಾಲೂಕಿನಲ್ಲಿ ಎಲ್ಲಾ ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ರಜೆ ಘೋಷಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಜಲಾವೃತದಲ್ಲಿ ಸಿಲುಕಿಕೊಂಡವರ ಸ್ಥಳಾಂತರಕ್ಕೆ ಪರದಾಡುವಂತಾಗಿದೆ.

Vishwa News 24

Recent Posts

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

8 hours ago

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

17 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

18 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

18 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

1 day ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

1 day ago