ಉತ್ತರ ಕನ್ನಡ: ರಾಜ್ಯದ ಕರಾವಳಿಯಲ್ಲಿ ಮತ್ತೆ ವರುಣನ ಆರ್ಭಟ ಜೋರಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳಲ್ಲಿ ಸೋಮವಾರ ರಾತ್ರಿಯಿಂದ ಆರಂಭವಾದ ಮಳೆ ಈವರೆಗೂ ಬಿಡುವು ನೀಡಿಲ್ಲ. ಇದರಿಂದಾಗಿ ಮತ್ತೆ ಅನೇಕ ಗ್ರಾಮಗಳು ಮುಳುಗಡೆಯ ಹಂತ ತಲುಪಿವೆ.
ರಾತ್ರಿಯಿಂದ ಬೆಳಗ್ಗಿನವರೆಗೆ ಸುರಿದ ಮಳೆಗೆ ನಿರೀಕ್ಷೆಯೇ ಇರದಷ್ಟು ನೀರು ತುಂಬಿ ಪಟ್ಟಣ ಭಾಗದಲ್ಲೇ ಹತ್ತಾರು ಗ್ರಾಮಗಳು ಜಲಾವೃತವಾಗಿವೆ. ಒಮ್ಮೆಲೆ ನಗರ ಭಾಗದಲ್ಲಿ ನೀರು ತುಂಬಲಾರಂಭಿಸಿದ್ದು, ಇದರಿಂದಾಗಿ ಜನ ಕಂಗಾಲಾಗಿದ್ದಾರೆ. ಬೆಳ್ಳಂಬೆಳಿಗ್ಗೆ ನಿದ್ದೆಯಿಂದ ಎದ್ದು ಕುಳಿತು ಸಾಮಾನು- ಸರಂಜಾಮುಗಳನ್ನ ರಕ್ಷಿಸಿಕೊಳ್ಳಲು ಪರದಾಡಿದರು.
ವೆಂಕಟಾಪುರ, ಚೌಥ್ನಿ, ಶರಾಬಿ ಹೊಳೆಗಳು ತುಂಬಿ ಹರಿದ ಪರಿಣಾಮ ಪಟ್ಟಣ ಭಾಗದ ಕೋಕ್ತಿ, ಆಸರಕೇರಿ, ಮೂಡಭಟ್ಕಳ, ಮುಟ್ಟಳ್ಳಿ, ಚೌಥ್ನಿ, ಮುಂಡಳ್ಳಿ ಭಾಗ ಸಂಪೂರ್ಣ ಜಲಾವೃತವಾಗಿದೆ. ರಾಷ್ಟ್ರೀಯ ಹೆದ್ದಾರಿಯ ಶಂಸುದ್ದೀನ್ ಸರ್ಕಲ್, ರಂಗಿನಕಟ್ಟೆ, ಶಿರಾಲಿಯಲ್ಲಿ ಸೊಂಟದ ಮಟ್ಟ ನೀರು ನಿಂತು ವಾಹನಗಳು ಓಡಾಡದ ಪರಿಸ್ಥಿತಿ ಎದುರಾಗಿದೆ. ಭಟ್ಕಳದ ಶಂಸುದ್ದೀನ್ ವೃತ್ತದಿಂದ ಪೇಟೆಯ ಹೂವಿನ ಚೌಕದವರೆಗೆ ಭಾರಿ ನೀರು ನಿಂತಿದ್ದು, ಸಣ್ಣ-ಪುಟ್ಟ ವಾಹನಗಳು ಕೂಡ ತೇಲಿ ಹೋಗಿವೆ.
ಭಟ್ಕಳ ತಾಲೂಕಿನಲ್ಲಿ ಎಲ್ಲಾ ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ರಜೆ ಘೋಷಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಜಲಾವೃತದಲ್ಲಿ ಸಿಲುಕಿಕೊಂಡವರ ಸ್ಥಳಾಂತರಕ್ಕೆ ಪರದಾಡುವಂತಾಗಿದೆ.
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…