ಉತ್ತರ ಕನ್ನಡ: ರಾಜ್ಯದ ಕರಾವಳಿಯಲ್ಲಿ ಮತ್ತೆ ವರುಣನ ಆರ್ಭಟ ಜೋರಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳಲ್ಲಿ ಸೋಮವಾರ ರಾತ್ರಿಯಿಂದ ಆರಂಭವಾದ ಮಳೆ ಈವರೆಗೂ ಬಿಡುವು ನೀಡಿಲ್ಲ. ಇದರಿಂದಾಗಿ ಮತ್ತೆ ಅನೇಕ ಗ್ರಾಮಗಳು ಮುಳುಗಡೆಯ ಹಂತ ತಲುಪಿವೆ.
ರಾತ್ರಿಯಿಂದ ಬೆಳಗ್ಗಿನವರೆಗೆ ಸುರಿದ ಮಳೆಗೆ ನಿರೀಕ್ಷೆಯೇ ಇರದಷ್ಟು ನೀರು ತುಂಬಿ ಪಟ್ಟಣ ಭಾಗದಲ್ಲೇ ಹತ್ತಾರು ಗ್ರಾಮಗಳು ಜಲಾವೃತವಾಗಿವೆ. ಒಮ್ಮೆಲೆ ನಗರ ಭಾಗದಲ್ಲಿ ನೀರು ತುಂಬಲಾರಂಭಿಸಿದ್ದು, ಇದರಿಂದಾಗಿ ಜನ ಕಂಗಾಲಾಗಿದ್ದಾರೆ. ಬೆಳ್ಳಂಬೆಳಿಗ್ಗೆ ನಿದ್ದೆಯಿಂದ ಎದ್ದು ಕುಳಿತು ಸಾಮಾನು- ಸರಂಜಾಮುಗಳನ್ನ ರಕ್ಷಿಸಿಕೊಳ್ಳಲು ಪರದಾಡಿದರು.
ವೆಂಕಟಾಪುರ, ಚೌಥ್ನಿ, ಶರಾಬಿ ಹೊಳೆಗಳು ತುಂಬಿ ಹರಿದ ಪರಿಣಾಮ ಪಟ್ಟಣ ಭಾಗದ ಕೋಕ್ತಿ, ಆಸರಕೇರಿ, ಮೂಡಭಟ್ಕಳ, ಮುಟ್ಟಳ್ಳಿ, ಚೌಥ್ನಿ, ಮುಂಡಳ್ಳಿ ಭಾಗ ಸಂಪೂರ್ಣ ಜಲಾವೃತವಾಗಿದೆ. ರಾಷ್ಟ್ರೀಯ ಹೆದ್ದಾರಿಯ ಶಂಸುದ್ದೀನ್ ಸರ್ಕಲ್, ರಂಗಿನಕಟ್ಟೆ, ಶಿರಾಲಿಯಲ್ಲಿ ಸೊಂಟದ ಮಟ್ಟ ನೀರು ನಿಂತು ವಾಹನಗಳು ಓಡಾಡದ ಪರಿಸ್ಥಿತಿ ಎದುರಾಗಿದೆ. ಭಟ್ಕಳದ ಶಂಸುದ್ದೀನ್ ವೃತ್ತದಿಂದ ಪೇಟೆಯ ಹೂವಿನ ಚೌಕದವರೆಗೆ ಭಾರಿ ನೀರು ನಿಂತಿದ್ದು, ಸಣ್ಣ-ಪುಟ್ಟ ವಾಹನಗಳು ಕೂಡ ತೇಲಿ ಹೋಗಿವೆ.
ಭಟ್ಕಳ ತಾಲೂಕಿನಲ್ಲಿ ಎಲ್ಲಾ ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ರಜೆ ಘೋಷಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಜಲಾವೃತದಲ್ಲಿ ಸಿಲುಕಿಕೊಂಡವರ ಸ್ಥಳಾಂತರಕ್ಕೆ ಪರದಾಡುವಂತಾಗಿದೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…