ಉತ್ತರ ಕನ್ನಡ: ರಾಜ್ಯದ ಕರಾವಳಿಯಲ್ಲಿ ಮತ್ತೆ ವರುಣನ ಆರ್ಭಟ ಜೋರಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳಲ್ಲಿ ಸೋಮವಾರ ರಾತ್ರಿಯಿಂದ ಆರಂಭವಾದ ಮಳೆ ಈವರೆಗೂ ಬಿಡುವು ನೀಡಿಲ್ಲ. ಇದರಿಂದಾಗಿ ಮತ್ತೆ ಅನೇಕ ಗ್ರಾಮಗಳು ಮುಳುಗಡೆಯ ಹಂತ ತಲುಪಿವೆ.
ರಾತ್ರಿಯಿಂದ ಬೆಳಗ್ಗಿನವರೆಗೆ ಸುರಿದ ಮಳೆಗೆ ನಿರೀಕ್ಷೆಯೇ ಇರದಷ್ಟು ನೀರು ತುಂಬಿ ಪಟ್ಟಣ ಭಾಗದಲ್ಲೇ ಹತ್ತಾರು ಗ್ರಾಮಗಳು ಜಲಾವೃತವಾಗಿವೆ. ಒಮ್ಮೆಲೆ ನಗರ ಭಾಗದಲ್ಲಿ ನೀರು ತುಂಬಲಾರಂಭಿಸಿದ್ದು, ಇದರಿಂದಾಗಿ ಜನ ಕಂಗಾಲಾಗಿದ್ದಾರೆ. ಬೆಳ್ಳಂಬೆಳಿಗ್ಗೆ ನಿದ್ದೆಯಿಂದ ಎದ್ದು ಕುಳಿತು ಸಾಮಾನು- ಸರಂಜಾಮುಗಳನ್ನ ರಕ್ಷಿಸಿಕೊಳ್ಳಲು ಪರದಾಡಿದರು.
ವೆಂಕಟಾಪುರ, ಚೌಥ್ನಿ, ಶರಾಬಿ ಹೊಳೆಗಳು ತುಂಬಿ ಹರಿದ ಪರಿಣಾಮ ಪಟ್ಟಣ ಭಾಗದ ಕೋಕ್ತಿ, ಆಸರಕೇರಿ, ಮೂಡಭಟ್ಕಳ, ಮುಟ್ಟಳ್ಳಿ, ಚೌಥ್ನಿ, ಮುಂಡಳ್ಳಿ ಭಾಗ ಸಂಪೂರ್ಣ ಜಲಾವೃತವಾಗಿದೆ. ರಾಷ್ಟ್ರೀಯ ಹೆದ್ದಾರಿಯ ಶಂಸುದ್ದೀನ್ ಸರ್ಕಲ್, ರಂಗಿನಕಟ್ಟೆ, ಶಿರಾಲಿಯಲ್ಲಿ ಸೊಂಟದ ಮಟ್ಟ ನೀರು ನಿಂತು ವಾಹನಗಳು ಓಡಾಡದ ಪರಿಸ್ಥಿತಿ ಎದುರಾಗಿದೆ. ಭಟ್ಕಳದ ಶಂಸುದ್ದೀನ್ ವೃತ್ತದಿಂದ ಪೇಟೆಯ ಹೂವಿನ ಚೌಕದವರೆಗೆ ಭಾರಿ ನೀರು ನಿಂತಿದ್ದು, ಸಣ್ಣ-ಪುಟ್ಟ ವಾಹನಗಳು ಕೂಡ ತೇಲಿ ಹೋಗಿವೆ.
ಭಟ್ಕಳ ತಾಲೂಕಿನಲ್ಲಿ ಎಲ್ಲಾ ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ರಜೆ ಘೋಷಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಜಲಾವೃತದಲ್ಲಿ ಸಿಲುಕಿಕೊಂಡವರ ಸ್ಥಳಾಂತರಕ್ಕೆ ಪರದಾಡುವಂತಾಗಿದೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…