ಮಂಗಳೂರು: ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಭಾಗಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಉತ್ತಮ ಮಳೆಯಾಗಲಿದೆ. ಇಂದು ರಾತ್ರಿ ರಾಜ್ಯದಲ್ಲಿ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ನೈಸರ್ಗಿಕ ವಿಕೋಪ ಕೇಂದ್ರದ ನಿರ್ದೇಶಕ ಶ್ರೀನಿವಾಸರೆಡ್ಡಿ ಮಾಹಿತಿ ನೀಡಿದ್ದಾರೆ. ರಾಜ್ಯ ರಾಜಧಾನಿಯ ವಿಧಾನಸೌಧ, ಕಾರ್ಪೋರೇಷನ್ ವೃತ್ತ, ಬಸವನಗುಡಿ ಸೇರಿದಂತೆ ಹಲವು ಭಾಗಗಳಲ್ಲಿ ಭರ್ಜರಿ ಮಳೆಯಾಗಿದ್ದು, ರಸ್ತೆಗಳೆಲ್ಲ ಕೆರೆಗಳಂತಾದ ದೃಶ್ಯ ಕಂಡುಬಂದಿತು.
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ನಿರ್ಮಾಣದಿಂದ ಕರಾವಳಿ ಭಾಗದಲ್ಲಿ ದೊಡ್ಡ ಚಂಡಮಾರುತ ಸೃಷ್ಟಿಯಾಗುವ ಭೀತಿ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ 7 ಮತ್ತು 8 ರಂದು ಬಹಳ ತೀವ್ರತರದ ಚಂಡಮಾರುತ ಆರ್ಭಟಸಲಿದೆಯಂತೆ. ಈ ವಾರ ಮತ್ತೆ ಪ್ರವಾಹ ವಕ್ಕರಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಅಕ್ಟೋಬರ್ 6 ರ ನಂತರ ಮೀನುಗಾರರು ಸಮುದ್ರಕ್ಕೆ ಇಳಿಯಬಾರದೆಂದು ತುರ್ತು ಕಾರ್ಯಾಚರಣೆ ಕೇಂದ್ರವು ಕಟ್ಟುನಿಟ್ಟು ಸೂಚನೆ ರವಾನಿಸಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…