ಉಡುಪಿ: ನಗರದಲ್ಲಿ ಮಳೆ ಬಿರುಗಾಳಿಯ ವಾತಾವರಣ ಇದೆ. ಅದರಲ್ಲೂ ಕಡಲ ತೀರದ ಪ್ರದೇಶಗಳಲ್ಲಿ ಮಳೆಯ ಜೊತೆ ಗಾಳಿಯ ತೀವ್ರತೆ ಜೋರಾಗಿದೆ. ಪೂರ್ವ ಮುಂಗಾರು ಆಗಮನ ಸೂಚನೆ ಸಿಕ್ಕಿದೆ. ಕಡಲಲ್ಲಿ ಕಡಲ ಅಲೆಗಳು ಮತ್ತು ಚಂಡಮಾರುತದ ಅಬ್ಬರ ಜೋರಾಗಿದೆ. ಕಳೆದ ಒಂದು ವಾರದಿಂದ ಉಡುಪಿ ಯಲ್ಲಿ ಭಾರೀ ಮಳೆಯಾಗುತ್ತಿದೆ.
ಸದ್ಯ ಜಿಲ್ಲೆಯಲ್ಲಿ ನಿರಂತರವಾಗಿ ಕಾಪು ಹೆಬ್ರಿ ,ಬೈಂದೂರು ಕಾರ್ಕಳ, ಉಡುಪಿ ಮುಂಜಾನೆ ,ಸಂಜೆ ವೇಳೆ ಮಳೆ ಸುರಿಯುತ್ತಿದೆ. ಕಳೆದ ವರ್ಷದ ಮಳೆಗಾಲಕ್ಕೆ ಹೋಲಿಸಿದರೆ ಈ ವರ್ಷ ಮಳೆಗಾಲದ ಸಿದ್ಧತೆ ಬೇಗನೇ ಸಿದ್ದರಾಗುವಂತೆ ಮಾಡಿದೆ. ಮತ್ತೊಂದೆಡೆ ಗಂಟೆಗೆ 55 ರಿಂದ 60 ಕಿಲೋಮೀಟರ್ ವೇಗದ ಗಾಳಿ ಬೀಸುವ ಎಚ್ಚರಿಕೆ ನೀಡಲಾಗಿದೆ.
ಕಡಲ ತೀರದ ನಿವಾಸಿಗಳು ಜಾಗೃತೆಯಿಂದ ಇರುವಂತೆ ಸೂಚಿಸಲಾಗಿದೆ. ಮಳೆ ಜೊತೆ ಈ ಬಾರಿ ಗಾಳಿ ಅಬ್ಬರಿಸುತ್ತಿರುವುದು ಆತಂಕ ಮೂಡಿಸಿದೆ. ಅಲ್ಲದೆ ಸಮುದ್ರ ತೀರದ ನಿವಾಸಿಗಳಿಗೆ ಸಮುದ್ರ ನೋಡಲು ಬಂದ ಪ್ರವಾಸಿಗರಿಗೆ ಎಚ್ಚರಿಕೆ ನೀಡಲಾಗುತ್ತಿದೆ. ಸಮುದ್ರ ತೀರದ ನಿವಾಸಿಗಳಿಗೆ ಮೀನುಗಾರರು ಕಡಲಿಗೆ ಇಳಿಯದಂತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆಯನ್ನು ಸಹ ನೀಡಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…