ಉಡುಪಿ: ನಗರದಲ್ಲಿ ಮಳೆ ಬಿರುಗಾಳಿಯ ವಾತಾವರಣ ಇದೆ. ಅದರಲ್ಲೂ ಕಡಲ ತೀರದ ಪ್ರದೇಶಗಳಲ್ಲಿ ಮಳೆಯ ಜೊತೆ ಗಾಳಿಯ ತೀವ್ರತೆ ಜೋರಾಗಿದೆ. ಪೂರ್ವ ಮುಂಗಾರು ಆಗಮನ ಸೂಚನೆ ಸಿಕ್ಕಿದೆ. ಕಡಲಲ್ಲಿ ಕಡಲ ಅಲೆಗಳು ಮತ್ತು ಚಂಡಮಾರುತದ ಅಬ್ಬರ ಜೋರಾಗಿದೆ. ಕಳೆದ ಒಂದು ವಾರದಿಂದ ಉಡುಪಿ ಯಲ್ಲಿ ಭಾರೀ ಮಳೆಯಾಗುತ್ತಿದೆ.
ಸದ್ಯ ಜಿಲ್ಲೆಯಲ್ಲಿ ನಿರಂತರವಾಗಿ ಕಾಪು ಹೆಬ್ರಿ ,ಬೈಂದೂರು ಕಾರ್ಕಳ, ಉಡುಪಿ ಮುಂಜಾನೆ ,ಸಂಜೆ ವೇಳೆ ಮಳೆ ಸುರಿಯುತ್ತಿದೆ. ಕಳೆದ ವರ್ಷದ ಮಳೆಗಾಲಕ್ಕೆ ಹೋಲಿಸಿದರೆ ಈ ವರ್ಷ ಮಳೆಗಾಲದ ಸಿದ್ಧತೆ ಬೇಗನೇ ಸಿದ್ದರಾಗುವಂತೆ ಮಾಡಿದೆ. ಮತ್ತೊಂದೆಡೆ ಗಂಟೆಗೆ 55 ರಿಂದ 60 ಕಿಲೋಮೀಟರ್ ವೇಗದ ಗಾಳಿ ಬೀಸುವ ಎಚ್ಚರಿಕೆ ನೀಡಲಾಗಿದೆ.
ಕಡಲ ತೀರದ ನಿವಾಸಿಗಳು ಜಾಗೃತೆಯಿಂದ ಇರುವಂತೆ ಸೂಚಿಸಲಾಗಿದೆ. ಮಳೆ ಜೊತೆ ಈ ಬಾರಿ ಗಾಳಿ ಅಬ್ಬರಿಸುತ್ತಿರುವುದು ಆತಂಕ ಮೂಡಿಸಿದೆ. ಅಲ್ಲದೆ ಸಮುದ್ರ ತೀರದ ನಿವಾಸಿಗಳಿಗೆ ಸಮುದ್ರ ನೋಡಲು ಬಂದ ಪ್ರವಾಸಿಗರಿಗೆ ಎಚ್ಚರಿಕೆ ನೀಡಲಾಗುತ್ತಿದೆ. ಸಮುದ್ರ ತೀರದ ನಿವಾಸಿಗಳಿಗೆ ಮೀನುಗಾರರು ಕಡಲಿಗೆ ಇಳಿಯದಂತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆಯನ್ನು ಸಹ ನೀಡಿದೆ.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…