ಉಡುಪಿ: ನಗರದಲ್ಲಿ ಮಳೆ ಬಿರುಗಾಳಿಯ ವಾತಾವರಣ ಇದೆ. ಅದರಲ್ಲೂ ಕಡಲ ತೀರದ ಪ್ರದೇಶಗಳಲ್ಲಿ ಮಳೆಯ ಜೊತೆ ಗಾಳಿಯ ತೀವ್ರತೆ ಜೋರಾಗಿದೆ. ಪೂರ್ವ ಮುಂಗಾರು ಆಗಮನ ಸೂಚನೆ ಸಿಕ್ಕಿದೆ. ಕಡಲಲ್ಲಿ ಕಡಲ ಅಲೆಗಳು ಮತ್ತು ಚಂಡಮಾರುತದ ಅಬ್ಬರ ಜೋರಾಗಿದೆ. ಕಳೆದ ಒಂದು ವಾರದಿಂದ ಉಡುಪಿ ಯಲ್ಲಿ ಭಾರೀ ಮಳೆಯಾಗುತ್ತಿದೆ.
ಸದ್ಯ ಜಿಲ್ಲೆಯಲ್ಲಿ ನಿರಂತರವಾಗಿ ಕಾಪು ಹೆಬ್ರಿ ,ಬೈಂದೂರು ಕಾರ್ಕಳ, ಉಡುಪಿ ಮುಂಜಾನೆ ,ಸಂಜೆ ವೇಳೆ ಮಳೆ ಸುರಿಯುತ್ತಿದೆ. ಕಳೆದ ವರ್ಷದ ಮಳೆಗಾಲಕ್ಕೆ ಹೋಲಿಸಿದರೆ ಈ ವರ್ಷ ಮಳೆಗಾಲದ ಸಿದ್ಧತೆ ಬೇಗನೇ ಸಿದ್ದರಾಗುವಂತೆ ಮಾಡಿದೆ. ಮತ್ತೊಂದೆಡೆ ಗಂಟೆಗೆ 55 ರಿಂದ 60 ಕಿಲೋಮೀಟರ್ ವೇಗದ ಗಾಳಿ ಬೀಸುವ ಎಚ್ಚರಿಕೆ ನೀಡಲಾಗಿದೆ.
ಕಡಲ ತೀರದ ನಿವಾಸಿಗಳು ಜಾಗೃತೆಯಿಂದ ಇರುವಂತೆ ಸೂಚಿಸಲಾಗಿದೆ. ಮಳೆ ಜೊತೆ ಈ ಬಾರಿ ಗಾಳಿ ಅಬ್ಬರಿಸುತ್ತಿರುವುದು ಆತಂಕ ಮೂಡಿಸಿದೆ. ಅಲ್ಲದೆ ಸಮುದ್ರ ತೀರದ ನಿವಾಸಿಗಳಿಗೆ ಸಮುದ್ರ ನೋಡಲು ಬಂದ ಪ್ರವಾಸಿಗರಿಗೆ ಎಚ್ಚರಿಕೆ ನೀಡಲಾಗುತ್ತಿದೆ. ಸಮುದ್ರ ತೀರದ ನಿವಾಸಿಗಳಿಗೆ ಮೀನುಗಾರರು ಕಡಲಿಗೆ ಇಳಿಯದಂತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆಯನ್ನು ಸಹ ನೀಡಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…