Featured

ಕರಾವಳಿಯಲ್ಲಿ ಮೇ 20 ರಿಂದ 23 ವರೆಗೆ  ಹವಾಮಾನ ಇಲಾಖೆಯಿಂದ ಭಾರಿ ಗಾಳಿ- ಮಳೆ ಮುನ್ಸೂಚನೆ – vishwanews24

ಕರಾವಳಿಯಲ್ಲಿ ಮೇ 20 ರಿಂದ 23 ವರೆಗೆ  ಹವಾಮಾನ ಇಲಾಖೆಯಿಂದ ಭಾರಿ ಗಾಳಿ-ಮಳೆ ಮುನ್ಸೂಚನೆ

     ಉಡುಪಿ: ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 3 ದಿನಗಳ ಕಾಲ ( ಮೇ 20 ರಿಂದ 23 ವರೆಗೆ) ಜಿಲ್ಲೆಯ ಕೆಲವು ಭಾಗಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆಯೆಂದು ಸೂಚಿಸಿದ್ದು, ಹಿನ್ನೆಲೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಹಾಗೂ ಅಧಿಕಾರಿಗಳಿಗೆ ಕೆಳಕಂಡ0ತೆ ಸೂಚನೆಗಳನ್ನು ನೀಡಿದೆ

     ಕೃಷಿಕರು ಮಳೆ/ಸಿಡಿಲಿನಂತಹ ಸಂದರ್ಭದಲ್ಲಿ ಕೃಷಿ ಚಟುವಟಿಕೆಯಿಂದ ದೂರವಿರಬೇಕು. ಸಾರ್ವಜನಿಕರು, ಮಕ್ಕಳು, ಕಾರ್ಮಿಕರು ಸಿಡಿಲು ಬೀಳುವ ಸಂದರ್ಭದಲ್ಲಿ ಹೊರಗೆ ತಿರುಗಾಡದೆ, ಸೂಕ್ತ ಕಟ್ಟಡದಲ್ಲಿ ಆಶ್ರಯ ಪಡೆಯಬೇಕು ಮತ್ತು ಪ್ರವಾಸಿಗರು ಹಾಗೂ ಮೀನುಗಾರರು ನದಿ, ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು

    ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ಮರ ಮತ್ತು ವಿದ್ಯುತ್ ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿA ದೂರವಿರಬೇಕು. ದುರ್ಬಲವಾದ ಅಥವಾ ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ ಮತ್ತು ಮರಗಳ ಕೆಳಗೆ ನಿಲ್ಲಬಾರದು. ಮೇಲ್ಕಂಡ ಎಲ್ಲಾ ಅಂಶಗಳನ್ನು ಗುಡುಗು, ಸಿಡಿಲು ಹಾಗೂ ಮಳೆ ಗಾಳಿಯಂತಹ ಸಂದರ್ಭಗಳಲ್ಲಿ ಚಾಚೂ ತಪ್ಪದೇ ಕಡ್ಡಾಯವಾಗಿ ಪಾಲಿಸಬೇಕು

   ಸಾರ್ವಜನಿಕರು ಅಗತ್ಯವಿದ್ದಲ್ಲಿ ಮುಂಜಾಗೃತ ಕ್ರಮವಾಗಿ ಹತ್ತಿರದ ಕಾಳಜಿ ಕೇಂದ್ರದಲ್ಲಿ ಉಳಿಯಬಹುದು. ಹೆಚ್ಚಿನ ಮಾಹಿತಿಗಾಗಿ ವಿಪತ್ತು ನಿರ್ವಹಣಾ ಕಂಟ್ರೋಲ್ ರೂಂ ಶುಲ್ಕ ರಹಿತ 1077, ದೂರವಾಣಿ ಸಂಖ್ಯೆ: 0820-2574802 ಅಥವಾ ಆಯಾ ತಾಲೂಕಾ ತಹಶೀಲ್ದಾರರ ಕಛೇರಿಗೆ ಕರೆ ಮಾಡಬಹುದಾಗಿದೆ

   ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು, ನಿಯೋಜನೆಗೊಂಡ ನೋಡಲ್ ಅಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತನ್ನು ನಿಭಾಯಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

21 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

23 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

24 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

24 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

24 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago