ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆಯೇ ಬಿಜೆಪಿಯ ಹೈಕಮಾಂಡ್ ಪ್ರಚಾರ ತಂತ್ರ ರೂಪಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಕರೆ ತರಲು ಸಜ್ಜಾಗಿದೆ.
ರಾಜ್ಯದಲ್ಲಿ 16 ಚುನಾವಣಾ ರ್ಯಾಲಿಗಳಲ್ಲಿ ಪ್ರಧಾನಿ ಮಾತನಾಡಲಿದ್ದಾರೆ. ಅದರಂತೆ ಮೇ 8ರಂದು ಮಂಗಳೂರು ಹಾಗೂ ಬೆಂಗಳೂರಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿದುಬಂದಿದೆ.
ಏಪ್ರಿಲ್ 29ರಿಂದ ಅವರು ರಾಜ್ಯದಲ್ಲಿ ಪ್ರಚಾರ ಕಾರ್ಯ ಕೈಗೊಳ್ಳಲಿದ್ದಾರೆ. ಕೋಲಾರ ಹಾಗೂ ರಾಯಚೂರಿನಲ್ಲಿ 29, ಮೇ 1ರಂದು ಬಳ್ಳಾರಿ ಹಾಗೂ ಬೆಳಗಾವಿ, 3ರಂದು ಚಾಮರಾಜನಗರ ಹಾಗೂ ಉಡುಪಿ, 5ರಂದು ಜಮಖಂಡಿ, 6ರಂದು ಹುಬ್ಬಳ್ಳಿ ಹಾಗೂ ಕಲಬುರ್ಗಿ, 7ರಂದು ಶಿವಮೊಗ್ಗ ತುಮಕೂರು ಮತ್ತು 8ರಂದು ಮಂಗಳೂರು, ಬೆಂಗಳೂರಿನಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ ಎಂಬ ಮಾಹಿತಿ ಇದೆ.
ಆದರೆ ಜಿಲ್ಲಾ ಬಿಜೆಪಿ ನಾಯಕರ ಪ್ರಕಾರ ಆಯ್ದ 4-5 ವಿಧಾನಸಭಾ ಕ್ಷೇತ್ರಗಳ ಪ್ರಮುಖ ಭಾಗಗಳಲ್ಲಿ ಮೋದಿ ರೋಡ್ ಶೋ ನಡೆಸುವ ಸಾಧ್ಯತೆ ಇದೆ. ಸಾರ್ವಜನಿಕ ಸಭೆಯಾದರೆ ಹೆಚ್ಚು ಜನರನ್ನು ಸೇರಿಸುವ, ಹೆಚ್ಚಿನ ಭದ್ರತೆ ವ್ಯವಸ್ಥೆ ಮಾಡುವ ಸವಾಲು ಇರುತ್ತದೆ, ರೋಡ್ ಶೋದಲ್ಲಿ ಜನರನ್ನು ನೇರವಾಗಿ ತಲಪುವ ಸಾಧ್ಯತೆ ಹೆಚ್ಚು ಎಂಬ ಕಾರಣಕ್ಕೆ ಇದಕ್ಕೆ ಒತ್ತು ನೀಡಬಹುದು. ಆದರೆ ಜಿಲ್ಲಾ ಬಿಜೆಪಿ ನಾಯಕರಿಗೆ ಅಧಿಕೃತವಾದ ಯಾವುದೇ ಕಾರ್ಯಕ್ರಮ, ವೇಳಾಪಟ್ಟಿ ಲಭ್ಯವಾಗಿಲ್ಲ.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…