ಮಂಗಳೂರು : ಕರ್ನಾಟಕದ ಕರಾವಳಿಯ ಆಳ ಸಮುದ್ರದಲ್ಲಿ ಲೈಟ್ ಫಿಶಿಂಗ್ ಮೀನುಗಾರಿಕೆಯನ್ನು ನಿಷೇಧಿಸಿದ ಕೇಂದ್ರ ಸರಕಾರದ ಆದೇಶವನ್ನು ಪಾಲಿಸುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.
ಕೇರಳ, ಕರ್ನಾಟಕ, ಗೋವಾ ಮತ್ತು ಮಹರಾಷ್ಟ್ರದಲ್ಲಿ ದೊಡ್ಡ ದೊಡ್ಡ ಮೀನುಗಾರಿಕಾ ಬೋಟ್ ಗಳಿಗೆ ಎಲ್ ಇಡಿ ಲೈಟ್ ನ್ನು ಬಳಸಿ ಮೀನುಗಾರಿಕೆ ನಡೆಸಲಾಗುತ್ತಿತ್ತು, ಇದರಿಂದಾಗಿ ಮೀನು ಉತ್ಪಾದನೆ ಮೇಲೆ ಪ್ರತಿಕೂಲ ಪರಿಣಾಮ ಬೀರಿದ ಕಾರಣ ಕೇಂದ್ರ ಸರಕಾರ 2017ರಲ್ಲಿ ಲೈಟ್ ಫಿಶಿಂಗ್ ಬ್ಯಾನ್ ಮಾಡಿ ಆದೇಶ ಹೊರಡಿಸಿತ್ತು.
ಆದರೆ ಉಡುಪಿಯ ಮಲ್ಪೆ ಬಂದರಿನ ಅಖಿಲ ಕರ್ನಾಟಕ ಪರ್ಸೀನ್ ಮೀನುಗಾರರ ಸಂಘ ಲೈಟ್ ಫಿಶಿಂಗ್ ಬ್ಯಾನ್ ಮಾಡಿದ ಕೇಂದ್ರ ಸರಕಾರದ ನಿರ್ಧಾರ ಏಕಪಕ್ಷೀಯವಾಗಿದೆ ಎಂದು ಆರೋಪಿಸಿ ಹೈಕೋರ್ಟ್ ಮೊರೆ ಹೋಗಿದ್ದರು. ಕೋಟ್ಯಂತರ ರೂಪಾಯಿ ಬಂಡವಾಳ ಹೂಡಿ ಯಾಂತ್ರಿಕೃತ ದೋಣಿ ಖರೀದಿಸಿ ಬೆಳಕು ಬಳಸಿ ಮೀನುಗಾರಿಕೆ ಮಾಡಲಾಗುತ್ತಿದೆ. ಕೇಂದ್ರದ ಈ ನಿರ್ಧಾರದಿಂದ ಮೀನುಗಾರಿಕೆಯನ್ನೇ ಅವಲಂಬಿಸಿರುವ ಕುಟುಂಬಗಳಿಗೆ ತೊಂದರೆ ಆಗಿದೆ ಎಂದು ಹೈಕೋರ್ಟ್ ನಲ್ಲಿ ಮೀನುಗಾರರ ಪರ ವಕೀಲರು ವಾದ ಮಂಡಿಸಿದ್ದರು.
ವಿಚಾರಣೆ ವೇಳೆ ಕೇಂದ್ರ ಸರಕಾರದ ಪರ ವಾದ ಮಂಡಿಸಿದ ವಕೀಲೆ ಎಂ.ಸಿ ನಾಗಶ್ರೀ , ಎಲ್ಇಡಿ, ಹಾಲೋಜನ್ ಮತ್ತಿತರ ಬೆಳಕು ಬಳಸಿ ಸಮುದ್ರದಾಳದಲ್ಲಿ ಯಾಂತ್ರೀಕೃತ ದೋಣಿಗಳ ಮೂಲಕ ಮೀನುಗಾರಿಕೆ ಮಾಡಲಾಗುತ್ತಿದೆ. ಇದರಿಂದ ಅಪರೂಪದ ಮೀನಿನ ಸಂತತಿ ಮತ್ತು ಮೀನು ಮರಿಗಳನ್ನೂ ಸಹ ಹಿಡಿಯಲಾಗುತ್ತಿತ್ತು. ಇದು ಮೀನುಗಳ ಉತ್ಪತ್ತಿ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರಕಾರದ ಕ್ರಮವನ್ನು ನ್ಯಾಯಪೀಠಕ್ಕೆ ಮನವರಿಕೆ ಮಾಡಿಕೊಟ್ಟರು.
ಈ ಹಿನ್ನಲೆಯಲ್ಲಿ ಹೈಕೋರ್ಟ್ ಈ ಪ್ರಕರಣವನ್ನು ವಿಲೇವಾರಿ ಮಾಡಿದ್ದು, ಕೇಂದ್ರ ಸರಕಾರದ ಆದೇಶವನ್ನು ಪಾಲಿಸುವಂತೆ ಸೂಚಿಸಿದೆ. ಈ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಲೈಟ್ ಫಿಶಿಂಗ್ ನಿಷೇಧಿಸಲಾಗಿದೆ.
ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…
ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್ ಗಾಂಧಿ ಆರೋಪ ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ…
ಪಡುಬಿದ್ರಿ: ಪಾನ್ ಸ್ಟಾಲ್ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…
ಸುಳ್ಯ : ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿ ಬಂಧನ ಸುಳ್ಯ : ಕೌಟುಂಬಿಕ…
ಮೂಡುಬಿದಿರೆ: ಬೈಕಿಗೆ ಆಟೋ ರಿಕ್ಷಾ ಡಿಕ್ಕಿ ; ನಿವೃತ್ತ ಶಿಕ್ಷಕ ಜಿ ಕೆ ಭಟ್ ನಿಧನ ಮೂಡುಬಿದಿರೆ: ಪೇಟೆಯ ರತನ್…
ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣ ; ಪ್ರಮುಖ ಆರೋಪಿಯ ಬಂಧನ ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ…