Featured

ಕರಾವಳಿಯಲ್ಲಿ ಲೈಟ್ ಫಿಶಿಂಗ್ ಮೀನುಗಾರಿಕೆ ನಿಷೇಧ – Vishwanews24

ಮಂಗಳೂರು : ಕರ್ನಾಟಕದ ಕರಾವಳಿಯ ಆಳ ಸಮುದ್ರದಲ್ಲಿ ಲೈಟ್ ಫಿಶಿಂಗ್ ಮೀನುಗಾರಿಕೆಯನ್ನು ನಿಷೇಧಿಸಿದ ಕೇಂದ್ರ ಸರಕಾರದ ಆದೇಶವನ್ನು ಪಾಲಿಸುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.

ಕೇರಳ, ಕರ್ನಾಟಕ, ಗೋವಾ ಮತ್ತು ಮಹರಾಷ್ಟ್ರದಲ್ಲಿ ದೊಡ್ಡ ದೊಡ್ಡ ಮೀನುಗಾರಿಕಾ ಬೋಟ್ ಗಳಿಗೆ ಎಲ್ ಇಡಿ ಲೈಟ್ ನ್ನು ಬಳಸಿ ಮೀನುಗಾರಿಕೆ ನಡೆಸಲಾಗುತ್ತಿತ್ತು, ಇದರಿಂದಾಗಿ ಮೀನು ಉತ್ಪಾದನೆ ಮೇಲೆ ಪ್ರತಿಕೂಲ ಪರಿಣಾಮ ಬೀರಿದ ಕಾರಣ ಕೇಂದ್ರ ಸರಕಾರ 2017ರಲ್ಲಿ ಲೈಟ್ ಫಿಶಿಂಗ್ ಬ್ಯಾನ್ ಮಾಡಿ ಆದೇಶ ಹೊರಡಿಸಿತ್ತು.

ಆದರೆ ಉಡುಪಿಯ ಮಲ್ಪೆ ಬಂದರಿನ ಅಖಿಲ ಕರ್ನಾಟಕ ಪರ್ಸೀನ್ ಮೀನುಗಾರರ ಸಂಘ ಲೈಟ್ ಫಿಶಿಂಗ್ ಬ್ಯಾನ್ ಮಾಡಿದ ಕೇಂದ್ರ ಸರಕಾರದ ನಿರ್ಧಾರ ಏಕಪಕ್ಷೀಯವಾಗಿದೆ ಎಂದು ಆರೋಪಿಸಿ ಹೈಕೋರ್ಟ್ ಮೊರೆ ಹೋಗಿದ್ದರು. ಕೋಟ್ಯಂತರ ರೂಪಾಯಿ ಬಂಡವಾಳ ಹೂಡಿ ಯಾಂತ್ರಿಕೃತ ದೋಣಿ ಖರೀದಿಸಿ ಬೆಳಕು ಬಳಸಿ ಮೀನುಗಾರಿಕೆ ಮಾಡಲಾಗುತ್ತಿದೆ. ಕೇಂದ್ರದ ಈ ನಿರ್ಧಾರದಿಂದ ಮೀನುಗಾರಿಕೆಯನ್ನೇ ಅವಲಂಬಿಸಿರುವ ಕುಟುಂಬಗಳಿಗೆ ತೊಂದರೆ ಆಗಿದೆ ಎಂದು ಹೈಕೋರ್ಟ್ ನಲ್ಲಿ ಮೀನುಗಾರರ ಪರ ವಕೀಲರು ವಾದ ಮಂಡಿಸಿದ್ದರು.

ವಿಚಾರಣೆ ವೇಳೆ ಕೇಂದ್ರ ಸರಕಾರದ ಪರ ವಾದ ಮಂಡಿಸಿದ ವಕೀಲೆ ಎಂ.ಸಿ ನಾಗಶ್ರೀ , ಎಲ್‌ಇಡಿ, ಹಾಲೋಜನ್‌ ಮತ್ತಿತರ ಬೆಳಕು ಬಳಸಿ ಸಮುದ್ರದಾಳದಲ್ಲಿ ಯಾಂತ್ರೀಕೃತ ದೋಣಿಗಳ ಮೂಲಕ ಮೀನುಗಾರಿಕೆ ಮಾಡಲಾಗುತ್ತಿದೆ. ಇದರಿಂದ ಅಪರೂಪದ ಮೀನಿನ ಸಂತತಿ ಮತ್ತು ಮೀನು ಮರಿಗಳನ್ನೂ ಸಹ ಹಿಡಿಯಲಾಗುತ್ತಿತ್ತು. ಇದು ಮೀನುಗಳ ಉತ್ಪತ್ತಿ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರಕಾರದ ಕ್ರಮವನ್ನು ನ್ಯಾಯಪೀಠಕ್ಕೆ ಮನವರಿಕೆ ಮಾಡಿಕೊಟ್ಟರು.

ಈ ಹಿನ್ನಲೆಯಲ್ಲಿ ಹೈಕೋರ್ಟ್ ಈ ಪ್ರಕರಣವನ್ನು ವಿಲೇವಾರಿ ಮಾಡಿದ್ದು, ಕೇಂದ್ರ ಸರಕಾರದ ಆದೇಶವನ್ನು ಪಾಲಿಸುವಂತೆ ಸೂಚಿಸಿದೆ. ಈ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಲೈಟ್ ಫಿಶಿಂಗ್ ನಿಷೇಧಿಸಲಾಗಿದೆ.

Vishwa News 24

Recent Posts

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

60 minutes ago

ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ – vishwanews24

ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ ಕಾರವಾರ: ಕಪ್ಪೆಚಿಪ್ಪು ತೆಗೆಯಲು ಹೋಗಿ ಸಾವನ್ನಪ್ಪಿದ್ದ 11 ಮಂದಿಯ…

1 hour ago

ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು – vishwanews24

ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು ಜೈಪುರ: ಸ್ಕಾರ್ಪಿಯೋ ಎಸ್‌ಯುವಿ  ಕಾರೊಂದು ಸುಮಾರು 700 ಅಡಿ ಕಂದಕಕ್ಕೆ…

1 hour ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ ಕೊಲ್ಲೂರು: ಮೇ 17ರ…

2 hours ago

ಮಂಗಳೂರು : ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ – vishwanews24

ಮಂಗಳೂರು : ಹೆಚ್ಚುತ್ತಿರುವ ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಂಗಳೂರು : ಆಫ್ರಿಕಾ…

2 hours ago

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

3 days ago