ಮಂಗಳೂರು : ಕರ್ನಾಟಕದ ಕರಾವಳಿಯ ಆಳ ಸಮುದ್ರದಲ್ಲಿ ಲೈಟ್ ಫಿಶಿಂಗ್ ಮೀನುಗಾರಿಕೆಯನ್ನು ನಿಷೇಧಿಸಿದ ಕೇಂದ್ರ ಸರಕಾರದ ಆದೇಶವನ್ನು ಪಾಲಿಸುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.
ಕೇರಳ, ಕರ್ನಾಟಕ, ಗೋವಾ ಮತ್ತು ಮಹರಾಷ್ಟ್ರದಲ್ಲಿ ದೊಡ್ಡ ದೊಡ್ಡ ಮೀನುಗಾರಿಕಾ ಬೋಟ್ ಗಳಿಗೆ ಎಲ್ ಇಡಿ ಲೈಟ್ ನ್ನು ಬಳಸಿ ಮೀನುಗಾರಿಕೆ ನಡೆಸಲಾಗುತ್ತಿತ್ತು, ಇದರಿಂದಾಗಿ ಮೀನು ಉತ್ಪಾದನೆ ಮೇಲೆ ಪ್ರತಿಕೂಲ ಪರಿಣಾಮ ಬೀರಿದ ಕಾರಣ ಕೇಂದ್ರ ಸರಕಾರ 2017ರಲ್ಲಿ ಲೈಟ್ ಫಿಶಿಂಗ್ ಬ್ಯಾನ್ ಮಾಡಿ ಆದೇಶ ಹೊರಡಿಸಿತ್ತು.
ಆದರೆ ಉಡುಪಿಯ ಮಲ್ಪೆ ಬಂದರಿನ ಅಖಿಲ ಕರ್ನಾಟಕ ಪರ್ಸೀನ್ ಮೀನುಗಾರರ ಸಂಘ ಲೈಟ್ ಫಿಶಿಂಗ್ ಬ್ಯಾನ್ ಮಾಡಿದ ಕೇಂದ್ರ ಸರಕಾರದ ನಿರ್ಧಾರ ಏಕಪಕ್ಷೀಯವಾಗಿದೆ ಎಂದು ಆರೋಪಿಸಿ ಹೈಕೋರ್ಟ್ ಮೊರೆ ಹೋಗಿದ್ದರು. ಕೋಟ್ಯಂತರ ರೂಪಾಯಿ ಬಂಡವಾಳ ಹೂಡಿ ಯಾಂತ್ರಿಕೃತ ದೋಣಿ ಖರೀದಿಸಿ ಬೆಳಕು ಬಳಸಿ ಮೀನುಗಾರಿಕೆ ಮಾಡಲಾಗುತ್ತಿದೆ. ಕೇಂದ್ರದ ಈ ನಿರ್ಧಾರದಿಂದ ಮೀನುಗಾರಿಕೆಯನ್ನೇ ಅವಲಂಬಿಸಿರುವ ಕುಟುಂಬಗಳಿಗೆ ತೊಂದರೆ ಆಗಿದೆ ಎಂದು ಹೈಕೋರ್ಟ್ ನಲ್ಲಿ ಮೀನುಗಾರರ ಪರ ವಕೀಲರು ವಾದ ಮಂಡಿಸಿದ್ದರು.
ವಿಚಾರಣೆ ವೇಳೆ ಕೇಂದ್ರ ಸರಕಾರದ ಪರ ವಾದ ಮಂಡಿಸಿದ ವಕೀಲೆ ಎಂ.ಸಿ ನಾಗಶ್ರೀ , ಎಲ್ಇಡಿ, ಹಾಲೋಜನ್ ಮತ್ತಿತರ ಬೆಳಕು ಬಳಸಿ ಸಮುದ್ರದಾಳದಲ್ಲಿ ಯಾಂತ್ರೀಕೃತ ದೋಣಿಗಳ ಮೂಲಕ ಮೀನುಗಾರಿಕೆ ಮಾಡಲಾಗುತ್ತಿದೆ. ಇದರಿಂದ ಅಪರೂಪದ ಮೀನಿನ ಸಂತತಿ ಮತ್ತು ಮೀನು ಮರಿಗಳನ್ನೂ ಸಹ ಹಿಡಿಯಲಾಗುತ್ತಿತ್ತು. ಇದು ಮೀನುಗಳ ಉತ್ಪತ್ತಿ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರಕಾರದ ಕ್ರಮವನ್ನು ನ್ಯಾಯಪೀಠಕ್ಕೆ ಮನವರಿಕೆ ಮಾಡಿಕೊಟ್ಟರು.
ಈ ಹಿನ್ನಲೆಯಲ್ಲಿ ಹೈಕೋರ್ಟ್ ಈ ಪ್ರಕರಣವನ್ನು ವಿಲೇವಾರಿ ಮಾಡಿದ್ದು, ಕೇಂದ್ರ ಸರಕಾರದ ಆದೇಶವನ್ನು ಪಾಲಿಸುವಂತೆ ಸೂಚಿಸಿದೆ. ಈ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಲೈಟ್ ಫಿಶಿಂಗ್ ನಿಷೇಧಿಸಲಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…