Featured

ಕರಾವಳಿಯಲ್ಲಿ ವಿಶೇಷ ಸಂಪ್ರದಾಯ ಆಚರಣೆ ಪ್ರೇತಗಳ ಮದುವೆ – ನಿಧನ ಹೊಂದಿದ 30 ವರ್ಷಗಳ ನಂತರ ಮದುವೆ ಶಾಸ್ತ್ರ – Vishwanews24

ಕರಾವಳಿಯಲ್ಲಿ ವಿಶೇಷ ಸಂಪ್ರದಾಯ ಆಚರಣೆ ಪ್ರೇತಗಳ ಮದುವೆ – ನಿಧನ ಹೊಂದಿದ 30 ವರ್ಷಗಳ ನಂತರ ಮದುವೆ ಶಾಸ್ತ್ರ

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಒಂದು ವಿಶೇಷ ಸಂಪ್ರದಾಯದ ಆಚರಣೆ ನಡೆದಿದ್ದು, ನಿಧನ ಹೊಂದಿದವರಿಗೆ 30 ವರ್ಷಗಳ ನಂತರ ಮದುವೆ ಶಾಸ್ತ್ರ ನೆರವೇರಿಸಲಾಗಿದೆ.ಸಣ್ಣ ವಯಸ್ಸಿನಲ್ಲಿಯೇ ಮರಣ ಹೊಂದಿದವರಿಗೆ ಅವರು ವಯಸ್ಸಿಗೆ ಬಂದ ಬಳಿಕ ಮದುವೆಯನ್ನು ಮಾಡಲಾಗುತ್ತದೆ. ಇದನ್ನು ಇಲ್ಲಿನ ಜನರು ಗೌರವಿಸುತ್ತಾರೆ ಮತ್ತು ನಂಬುತ್ತಾರೆ. ಮೃತಪಟ್ಟು 30 ವರ್ಷಗಳ ನಂತರ ನಡೆದ ಆತ್ಮಗಳ ಮದುವೆ ಇದು.

ರಾಜ್ಯದ ದಕ್ಷಿಣ ಕನ್ನಡ ಮತ್ತು ಕೇರಳದ ಕೆಲವು ಭಾಗಗಳಲ್ಲಿ ಈ ವಿಶಿಷ್ಟ ಸಂಪ್ರದಾಯ ಚಾಲ್ತಿಯಲಿದೆ. ಶೋಭಾ ಮತ್ತು ಚಂದಪ್ಪ ಎಂಬುವರು 30 ವರ್ಷಗಳ ಹಿಂದೆ ಮೃತಪಟ್ಟಿದ್ದರು. ಹುಟ್ಟಿದ ಕೂಡಲೇ ಮೃತಪಟ್ಟಿದ್ದ ಈ ಇಬ್ಬರ ಆತ್ಮಗಳಿಗೆ ಸಂಪ್ರದಾಯಬದ್ಧವಾಗಿ ವಿವಾಹ ನೆರವೇರಿಸಲಾಗಿದೆ. ಈ ಆಚರಣೆಯನ್ನು ಪ್ರೇತ ಕಲ್ಯಾಣ, ಪ್ರೇತಗಳ ಮದುವೆ ಎಂದು ಕರೆಯುತ್ತಾರೆ.

ಈ ಆತ್ಮಗಳ ಮದುವೆ ವಿಡಿಯೋ ಒಂದನ್ನು ಯೂಟ್ಯೂಬರ್ ಅನ್ನಿ ಅರುಣ್ ತಮ್ಮ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ. ಸಣ್ಣ ವಯಸ್ಸಿನಲ್ಲೇ ಮೃತಪಟ್ಟವರು ಪ್ರೇತವಾಗಿ ತಿರುಗುತ್ತಾರೆ. ಮದುವೆ ವಯಸ್ಸಿಗೆ ಬಂದ ಪ್ರೇತ ಮನೆಯವರಿಗೆ ಕಾಟ ಕೊಡುತ್ತದೆ. ಆಗ ಮನೆಯವರು ಮಂತ್ರವಾದಿಗಳ ಬಳಿಗೆ ಹೋಗಿ ಸತ್ತ ಆತ್ಮಗಳ ಮದುವೆ ಮಾಡಿಸಿ ಶಾಂತಿ ಸಿಗುವಂತೆ ಮಾಡುತ್ತಾರೆ ಎಂದು ತಿಳಿಸಿದ್ದಾರೆ.

ಮೃತಪಟ್ಟ ಗಂಡು ಹಾಗೂ ಹೆಣ್ಣಿನ ಮನೆಯವರು ನಿಶ್ಚಿತಾರ್ಥವನ್ನೂ ನೆರವೇರಿಸುತ್ತಾರೆ. ಆರತಕ್ಷತೆ, ಸಪ್ತಪದಿಯೂ ನಡೆಯುತ್ತದೆ. ಈ ಸಂಪ್ರದಾಯವು ದಕ್ಷಿಣ ಕನ್ನಡದಲ್ಲಿ ಆಚರಣೆಯಲ್ಲಿದೆ ಎಂದು ಅರುಣ್ ವಿವರಿಸಿದ್ದಾರೆ.

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

10 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

10 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

10 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

1 day ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

1 day ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

1 day ago