Featured

ಕರಾವಳಿಯಾದ್ಯಂತ ಮುಂದುವರೆದ ಮಳೆಯ ಅಬ್ಬರ ; ಶಾಲಾ ಕಾಲೇಜುಗಳಿಗೆ ರಜೆ

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಸಹಿತ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕಾಲು ಸಂಕ ದಾಟುತ್ತಿದ್ದ  ವ್ಯಕ್ತಿಯೊಬ್ಬರು ತೋಡಿಗೆ ಬಿದ್ದು ನೀರು ಪಾಲಾದ ಘಟನೆ ಬೆಳ್ತಂಗಡಿ ತಾಲೂಕಿನ ಮರೋಡಿಯಲ್ಲಿ ರವಿವಾರ ಸಂಭವಿಸಿದೆ.
ಮಂಗಳೂರಿನಲ್ಲಿ ರವಿವಾರ ಬೆಳಗ್ಗಿನ ವೇಳೆ ಸಾಧಾರಣ ಮಳೆಯಾಗಿದ್ದು, ಸಂಜೆ ಗುಡುಗು, ಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಬೆಳ್ತಂಗಡಿ ನಗರದಲ್ಲಿ ಎರಡು ಮನೆಗಳಿಗೆ ಹಾನಿಯಾಗಿದೆ. ಕಾರ್ಕಳ ತಾಲೂಕಿನ ಕಲ್ಯಾ ಸ.ಹಿ.ಪ್ರಾ. ಶಾಲೆಯ ಹಳೆಯ ಕಟ್ಟಡದ ಗೋಡೆ ಕುಸಿದು ಅಪಾರ ನಷ್ಟ ಸಂಭವಿಸಿದೆ.

ಸುಳ್ಯದಲ್ಲೂ ಮಳೆ ಆರ್ಭಟ ಮುಂದುವರಿದಿತ್ತು. ಸಂಪಾಜೆ, ಬೆಳ್ಳಾರೆ, ಸುಬ್ರಹ್ಮಣ್ಯ, ಪಂಜ, ಅರಂತೋಡು ಪರಿಸರದಲ್ಲಿ ಉತ್ತಮ ಮಳೆಯಾಗಿದೆ. ಭಾರೀ ಮಳೆಗೆ ಆದಿ ಸುಬ್ರಹ್ಮಣ್ಯದಲ್ಲಿ ಮುಖ್ಯ ರಸ್ತೆಯಲ್ಲಿ ಮಳೆ ನೀರು ಹರಿದು ರಸ್ತೆ ಬದಿಯ ಅಂಗಡಿಗಳಿಗೆ ನುಗ್ಗಿತ್ತು.  ಸುಬ್ರಹ್ಮಣ್ಯದಲ್ಲಿ ಕುಮಾರ ಧಾರಾ ಮೈದುಂಬಿ ಹರಿಯುತ್ತಿದೆ. ಉಪ್ಪಿನಂಗಡಿ-ಕಡಬ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿರುವ ಹೊಸಮಠ ಸೇತುವೆ ಮುಳುಗಡೆಯಾಗಿದೆ. ಉಪ್ಪಿನಂಗಡಿಯಲ್ಲಿ ನೇತ್ರಾವತಿ-  ಕುಮಾರಧಾರಾ ಮೈದುಂಬಿವೆ.  ಕುಮಾರಧಾರೆ ನೀರು ಆಲಂಕಾರು ಗ್ರಾಮದ ಬುಡೇರಿಯಾ ವ್ಯಾಪ್ತಿಯನ್ನು ಆವರಿಸಿದ್ದು, ಭತ್ತದ ಕೃಷಿ, ಅಡಿಕೆ ತೋಟ ಮತ್ತು ವಿದ್ಯುತ್‌ ಪಂಪ್‌ಸೆಟ್‌ಗಳಿಗೆ ಹಾನಿ  ಮಾಡಿದೆ. ದರ್ಪಣ ತೀರ್ಥ ಹೊಳೆಯ ಪ್ರವಾಹದಿಂದ ಪಂಜ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಸೇತುವೆ ಮುಳುಗಿದೆ. ಸುರತ್ಕಲ್‌, ಬಂಟ್ವಾಳ, ವೇಣೂರು, ಮಡಂತ್ಯಾರು, ಮೂಡಬಿದಿರೆ, ಮಚ್ಚಿನ, ಪುಂಜಾಲಕಟ್ಟೆ, ವಿಟ್ಲ, ಕಡಬ, ಪುತ್ತೂರು, ನೆಲ್ಯಾಡಿ, ಗುಂಡ್ಯ, ಗುರು ವಾಯನ ಕೆರೆ, ಧರ್ಮಸ್ಥಳ, ಕೊಕಡ, ಉಳ್ಳಾಲದಲ್ಲಿ ಮಳೆಯಾಗಿದೆ.

ಉಡುಪಿ: ಮಳೆ ಬಿರುಸು
ಉಡುಪಿ ತಾಲೂಕಿನಲ್ಲಿಯೂ ರವಿವಾರ ಉತ್ತಮ ಮಳೆಯಾಗಿದೆ. ಉಡುಪಿ ಮತ್ತು ಸುತ್ತಮುತ್ತ ಮಧ್ಯಾಹ್ನದ ಅನಂತರ ನಿರಂತರವಾಗಿ ಮಳೆ ಸುರಿಯಿತು. ಕತ್ತಲಾಗುತ್ತಿದ್ದಂತೆ ಗಾಳಿ ಸಮೇತ ಬಿರುಸಿನ ಮಳೆಯಾಯಿತು. ಕಾಪು, ಪಡುಬಿದ್ರಿ, ಶಿರ್ವ, ಬ್ರಹ್ಮಾವರದಲ್ಲಿ  ಉತ್ತಮ ಮಳೆಯಾಗಿದೆ. ಕಾರ್ಕಳದ ಕೆರ್ವಾಶೆ, ಬಜಗೋಳಿ ಪರಿಸರದಲ್ಲಿ ಮಳೆ ಜೋರಾಗಿತ್ತು.

 

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

11 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

11 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

11 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

11 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

12 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

13 hours ago