Featured

ಕರಾವಳಿಯ ಕೆಲವು ಕಡೆಗಳಲ್ಲಿ ಕೆಂಗಣ್ಣುಕಾಯಿಲೆ ಸಮಸ್ಯೆ  ; ಸೋಂಕಿನ ಬಗ್ಗೆ ಮುನ್ನೆಚ್ಚರಿಕೆ ಅಗತ್ಯ – Vishwanews24

ಕರಾವಳಿಯ ಕೆಲವು ಕಡೆಗಳಲ್ಲಿ ಕೆಂಗಣ್ಣುಕಾಯಿಲೆ ಸಮಸ್ಯೆ  ; ಸೋಂಕಿನ ಬಗ್ಗೆ ಮುನ್ನೆಚ್ಚರಿಕೆ ಅಗತ್ಯ

ಕರಾವಳಿಯ ಕೆಲವು ಕಡೆಗಳಲ್ಲಿ ಕೆಂಗಣ್ಣು ಕಾಯಿಲೆ ಸಮಸ್ಯೆ ಕಾಣಿಸಿಕೊಂಡಿದ್ದು, ಮುನ್ನೆಚ್ಚರಿಕೆ ವಹಿಸುವುದು ಸೂಕ್ತ ಎಂದು ವೈದ್ಯರು ತಿಳಿಸಿದ್ದಾರೆ.

ಸುಮಾರು 10 ದಿನಗಳ ಹಿಂದೆ ಪಡುಪೆರಾರ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಪಡೀಲ್‌ ಪ್ರದೇಶದ ಹಲವಾರು ಮನೆಗಳ ಸದಸ್ಯರು ಈ ಕಾಯಿಲೆಗೆ ತುತ್ತಾಗಿದ್ದರು.

ಪ್ರಸ್ತುತ ಸಮೀಪದ ಪೆರ್ಮುದೆ, ಎಕ್ಕಾರು ಗ್ರಾಮ ಪಂಚಾಯತ್‌, ಬಜಪೆ ಪಟ್ಟಣ ಪಂಚಾಯತ್‌ ವ್ಯಾಪ್ತಿಗೂ ಹರಡಿದ್ದು, ಪರಿಸರದಲ್ಲಿ ಕಪ್ಪು ಕನ್ನಡಕ ಧರಿಸಿ ಓಡಾಡುವವರ ಸಂಖ್ಯೆ ಹೆಚ್ಚುತ್ತಿದೆ. ಬಾಧಿತರಲ್ಲಿ ವಿದ್ಯಾರ್ಥಿಗಳು, ವ್ಯಾಪಾರಿಗಳೂ ಇದ್ದು, ಅವರ ಮೂಲಕ ವೇಗವಾಗಿ ಇತರರಿಗೆ ಹರಡುವ ಸಾಧ್ಯತೆ ಇದೆ.

ಲಾಲಾಜಿಗೆ ಊರಿನ ಅಭಿವೃದ್ಧಿಯ ಕಾಳಜಿಗಿಂತ ತನ್ನ ಬಂಡವಾಳ ಗಟ್ಟಿ ಮಾಡಿಕೊಳ್ಳುವುದೇ ಟೆಂಕ್ಷನ್..

ಮುನ್ನೆಚ್ಚರಿಕೆ ಅಗತ್ಯ
ಈ ಬಗ್ಗೆ ಬಜಪೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಚಾರಿಸಿದಾಗ ಕೆಂಗಣ್ಣು ಸಮಸ್ಯೆ ಬಾಧಿಸಿರುವ ಬಗ್ಗೆ ಯಾವುದೇ ಮಾಹಿತಿಗಳು ಈ ತನಕ ಬಂದಿಲ್ಲ ಎಂದು ಹೇಳಿದ್ದಾರೆ. ಸೂಕ್ತ ಮುನ್ನೆಚ್ಚರಿಕೆ ವಹಿಸುವುದರಿಂದ ಈ ಕಾಯಿಲೆಯಿಂದ ದೂರ ಇರಬಹುದು ಎಂದು ಅವರು ತಿಳಿಸಿದ್ದಾರೆ.

ಏನಿದು ಕಾಯಿಲೆ?
“ಮದ್ರಾಸ್‌ ಐ’ ಎಂದೂ ಕರೆಯಲ್ಪಡುವ ಕೆಂಗಣ್ಣು ಅಥವಾ ಕಂಜಕ್ಟಿವಿಟಿಸ್‌ಗೆ ಕಾರಣ ವೈರಾಣು ಅಥವಾ ಬ್ಯಾಕ್ಟೀರಿಯಾ ಸೋಂಕು. ಕಣ್ಣಿನ ಬಿಳಿಭಾಗದ ಮೇಲ್ಮೆ ಮತ್ತು ಕಣೆÅಪ್ಪೆಗಳ ಒಳಭಾಗ ಉರಿಯೂತಕ್ಕೆ ಈಡಾಗಿ ಕೆಂಪು ಅಥವಾ ಗುಲಾಬಿ ಬಣ್ಣ ಹೊಂದಿ ಊದಿಕೊಳ್ಳುವುದು ಇದರ ಲಕ್ಷಣ. ಇದು ಸುಲಭವಾಗಿ ಹರಡುವ ಸೋಂಕು ರೋಗ.

ಇದಕ್ಕೆ ನಿರ್ದಿಷ್ಟ ಚಿಕಿತ್ಸೆ ಇಲ್ಲ. ರೋಗ ಲಕ್ಷಣಗಳನ್ನು ಕಡಿಮೆ ಮಾಡಲು ಐ ಡ್ರಾಪ್‌ನಂತಹ ಔಷಧಗಳನ್ನು ವೈದ್ಯರು ಸೂಚಿಸುತ್ತಾರೆ.

ಕೆಂಗಣ್ಣು ರೋಗ ಪ್ರದೇಶದಲ್ಲಿ ಇರುವಾಗ ಕಣ್ಣುಗಳನ್ನು ಮುಟ್ಟಿ ಕೊಳ್ಳದಿರುವುದು, ಆಗಾಗ ಕೈಗಳನ್ನು ಸ್ವತ್ಛಗೊಳಿಸಿಕೊಳ್ಳುವುದು, ರೋಗಪೀಡಿತರ ಸಂಪರ್ಕದಿಂದ ದೂರ ಇರುವ ಮೂಲಕ ಕೆಂಗಣ್ಣು ಸೋಂಕು ಪ್ರಸರಣ ತಪ್ಪಿಸಬಹುದು.

ಮಂಗಳೂರು: ಲಾರಿ ಢಿಕ್ಕಿ ; ಪಾದಚಾರಿ ಸಾವು – Vishwanews24

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago