ಕರಾವಳಿಯ ಕೆಲವು ಕಡೆಗಳಲ್ಲಿ ಕೆಂಗಣ್ಣು ಕಾಯಿಲೆ ಸಮಸ್ಯೆ ಕಾಣಿಸಿಕೊಂಡಿದ್ದು, ಮುನ್ನೆಚ್ಚರಿಕೆ ವಹಿಸುವುದು ಸೂಕ್ತ ಎಂದು ವೈದ್ಯರು ತಿಳಿಸಿದ್ದಾರೆ.
ಸುಮಾರು 10 ದಿನಗಳ ಹಿಂದೆ ಪಡುಪೆರಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡೀಲ್ ಪ್ರದೇಶದ ಹಲವಾರು ಮನೆಗಳ ಸದಸ್ಯರು ಈ ಕಾಯಿಲೆಗೆ ತುತ್ತಾಗಿದ್ದರು.
ಪ್ರಸ್ತುತ ಸಮೀಪದ ಪೆರ್ಮುದೆ, ಎಕ್ಕಾರು ಗ್ರಾಮ ಪಂಚಾಯತ್, ಬಜಪೆ ಪಟ್ಟಣ ಪಂಚಾಯತ್ ವ್ಯಾಪ್ತಿಗೂ ಹರಡಿದ್ದು, ಪರಿಸರದಲ್ಲಿ ಕಪ್ಪು ಕನ್ನಡಕ ಧರಿಸಿ ಓಡಾಡುವವರ ಸಂಖ್ಯೆ ಹೆಚ್ಚುತ್ತಿದೆ. ಬಾಧಿತರಲ್ಲಿ ವಿದ್ಯಾರ್ಥಿಗಳು, ವ್ಯಾಪಾರಿಗಳೂ ಇದ್ದು, ಅವರ ಮೂಲಕ ವೇಗವಾಗಿ ಇತರರಿಗೆ ಹರಡುವ ಸಾಧ್ಯತೆ ಇದೆ.
ಲಾಲಾಜಿಗೆ ಊರಿನ ಅಭಿವೃದ್ಧಿಯ ಕಾಳಜಿಗಿಂತ ತನ್ನ ಬಂಡವಾಳ ಗಟ್ಟಿ ಮಾಡಿಕೊಳ್ಳುವುದೇ ಟೆಂಕ್ಷನ್..
ಮುನ್ನೆಚ್ಚರಿಕೆ ಅಗತ್ಯ
ಈ ಬಗ್ಗೆ ಬಜಪೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಚಾರಿಸಿದಾಗ ಕೆಂಗಣ್ಣು ಸಮಸ್ಯೆ ಬಾಧಿಸಿರುವ ಬಗ್ಗೆ ಯಾವುದೇ ಮಾಹಿತಿಗಳು ಈ ತನಕ ಬಂದಿಲ್ಲ ಎಂದು ಹೇಳಿದ್ದಾರೆ. ಸೂಕ್ತ ಮುನ್ನೆಚ್ಚರಿಕೆ ವಹಿಸುವುದರಿಂದ ಈ ಕಾಯಿಲೆಯಿಂದ ದೂರ ಇರಬಹುದು ಎಂದು ಅವರು ತಿಳಿಸಿದ್ದಾರೆ.
ಏನಿದು ಕಾಯಿಲೆ?
“ಮದ್ರಾಸ್ ಐ’ ಎಂದೂ ಕರೆಯಲ್ಪಡುವ ಕೆಂಗಣ್ಣು ಅಥವಾ ಕಂಜಕ್ಟಿವಿಟಿಸ್ಗೆ ಕಾರಣ ವೈರಾಣು ಅಥವಾ ಬ್ಯಾಕ್ಟೀರಿಯಾ ಸೋಂಕು. ಕಣ್ಣಿನ ಬಿಳಿಭಾಗದ ಮೇಲ್ಮೆ ಮತ್ತು ಕಣೆÅಪ್ಪೆಗಳ ಒಳಭಾಗ ಉರಿಯೂತಕ್ಕೆ ಈಡಾಗಿ ಕೆಂಪು ಅಥವಾ ಗುಲಾಬಿ ಬಣ್ಣ ಹೊಂದಿ ಊದಿಕೊಳ್ಳುವುದು ಇದರ ಲಕ್ಷಣ. ಇದು ಸುಲಭವಾಗಿ ಹರಡುವ ಸೋಂಕು ರೋಗ.
ಇದಕ್ಕೆ ನಿರ್ದಿಷ್ಟ ಚಿಕಿತ್ಸೆ ಇಲ್ಲ. ರೋಗ ಲಕ್ಷಣಗಳನ್ನು ಕಡಿಮೆ ಮಾಡಲು ಐ ಡ್ರಾಪ್ನಂತಹ ಔಷಧಗಳನ್ನು ವೈದ್ಯರು ಸೂಚಿಸುತ್ತಾರೆ.
ಕೆಂಗಣ್ಣು ರೋಗ ಪ್ರದೇಶದಲ್ಲಿ ಇರುವಾಗ ಕಣ್ಣುಗಳನ್ನು ಮುಟ್ಟಿ ಕೊಳ್ಳದಿರುವುದು, ಆಗಾಗ ಕೈಗಳನ್ನು ಸ್ವತ್ಛಗೊಳಿಸಿಕೊಳ್ಳುವುದು, ರೋಗಪೀಡಿತರ ಸಂಪರ್ಕದಿಂದ ದೂರ ಇರುವ ಮೂಲಕ ಕೆಂಗಣ್ಣು ಸೋಂಕು ಪ್ರಸರಣ ತಪ್ಪಿಸಬಹುದು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…