ಉಡುಪಿ : ಕರಾವಳಿ ಚಿಯರ್ ಬಾಯ್ ಒಬ್ಬರ ವಿಡಿಯೋ ಭಾರಿ ವೈರಲ್ ಆಗಿದ್ದು, ಕ್ರಿಕೆಟ್ ಮ್ಯಾಚ್ ಗಳಲ್ಲಿ ಕಾಣ ಸಿಗುವ ಚಿಯರ್ ಗರ್ಲ್ಸ್ ರೀತಿಯಾಗಿಯೇ ಇಲ್ಲೊಬ್ಬರು ಸ್ಥಳೀಯ ಕ್ರೀಡಾಕೂಟಗಳಲ್ಲಿ ಚಿಯರ್ ಬಾಯ್ ಆಗಿ ಮಿಂಚುತ್ತಿದ್ದು, ಕರಾವಳಿಯಲ್ಲಿ ಚಿಯರ್ ಬಾಯ್ ಆಗಿ ಭಾರೀ ಫೇಮಸ್ ಆಗಿದ್ದಾರೆ.
ವೃತ್ತಿಯಲ್ಲಿ ಪೇಂಟರ್ ಆಗಿರುವ ಚೇತನ್, ಹಿಂದಿನಿಂದಲೂ ತಮ್ಮ ಊರಿನ ಯಾವುದೇ ಕಾರ್ಯಕ್ರಮದಲ್ಲಿ ಎಲ್ಲರನ್ನು ನಗಿಸುವ ಪ್ರಯತ್ನ ಮಾಡುತಿದ್ದರು. ಕೆಸರು ಗದ್ದೆ ಕ್ರೀಡಾಕೂಟದಲ್ಲಿ ವಿಶೇಷ ನೃತ್ಯ, ಹುಲಿವೇಷ ಕುಣಿತ, ವಾಲಿಬಾಲ್ ಮ್ಯಾಚ್ ಸಂದರ್ಭ ಬೊಂಬೆ ಕುಣಿತ ಸೇರಿದಂತೆ ಹಲವು ಬಗೆಗಳಲ್ಲಿ ನೆರೆದವರನ್ನು ಮನರಂಜಿಸುತಿದ್ದಾರೆ.
ಇತ್ತೀಚೆಗೆ ನಡೆದ ಕ್ರೀಡಾಕೂಟದಲ್ಲಿ ಚೇತನ್ ಅವರು ತನ್ನದೇ ಆದ ಡೈಲಾಗ್, ನೃತ್ಯದ ಮೂಲಕ ಎಲ್ಲರನ್ನು ನಗೆಗಡಲಲ್ಲಿ ತೇಲಿಸಿದ್ದಾರೆ. ಚೇತನ್ ಹಾಡಿನ ತಾಳಕ್ಕೆ ತಕ್ಕಂತೆ ಚಂಡೆಯವರೂ ಬಾರಿಸಿದ ವಿಡಿಯೋ ಸಾಮಾಜಿಕ ತಾಣದಲ್ಲಿ ಶಹಬ್ಬಾಸ್ ಗಿರಿ ಪಡೆದುಕೊಂಡಿದೆ. ಕ್ರಿಯೇಟಿವಿಟಿ ಮೂಲಕ ಪ್ರಯೋಗಗಳನ್ನು ಮಾಡುತ್ತಿರುವುದರಿಂದ ಎಲ್ಲರ ಮೆಚ್ಚುಗೆಯನ್ನು ಚೇತನ್ ಪಡೆದಿದ್ದಾರೆ.
ವಿಶೇಷವಾಗಿ ಹಗ್ಗಜಗ್ಗಾಟ ಪಂದ್ಯಾಟದಲ್ಲಿ ಹೆಚ್ಚಾಗಿ ಆಟಗಾರರನ್ನು ಹುರಿದುಂಬಿಸುತ್ತಿದ್ದು. ಸಿನಿಮಾ ಡೈಲಾಗ್ಗಳನ್ನು ಹೇಳಿ ಎಲ್ಲರ ಚಪ್ಪಾಳೆ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಇದೀಗ ಚೇತನ್ ಎಷ್ಟರ ಮಟ್ಟಿಗೆ ಪ್ರಸಿದ್ಧಿ ಪಡೆದಿದ್ದಾರೆ ಅಂದರೆ ಕ್ರೀಡಾಕೂಟಕ್ಕೆ ಚೇತನ್ ಬರುತ್ತಾರಾ ಎಂದು ವಿಚಾರಿಸಿ ಇವರ ಮನೋರಂಜನೆ ನೋಡುವುದಕ್ಕೆಂದೆ ಬರುವವರು ಹೆಚ್ಚಾಗಿದ್ದಾರೆ.
ಚೇತನ್ ಹಾಡಿನ ತಾಳಕ್ಕೆ ತಕ್ಕಂತೆ ಚಂಡೆಯವರೂ ಬಾರಿಸಿದ ವಿಡಿಯೋ ಸಾಮಾಜಿಕ ತಾಣದಲ್ಲಿ ಶಹಬ್ಬಾಸ್ ಗಿರಿ ಪಡೆದುಕೊಂಡಿದೆ. ಕ್ರಿಯೇಟಿವಿಟಿ ಮೂಲಕ ಪ್ರಯೋಗಗಳನ್ನು ಮಾಡುತ್ತಿರುವುದರಿಂದ ಎಲ್ಲರ ಮೆಚ್ಚುಗೆಯನ್ನು ಚೇತನ್ ಪಡೆದಿದ್ದಾರೆ..
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…