ಮಂಗಳೂರು: ಕಂಬಳ ಅಭಿಮಾನಿಗಳಿಗೆ ರಾಜ್ಯ ಸರಕಾರ ಸಿಹಿ ಸುದ್ದಿ ನೀಡಿದ್ದು, ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ರಾಜ್ಯ ಕ್ರೀಡೆಯಾಗಿ ಮಾನ್ಯತೆ ನೀಡಲು ನಿರ್ಧರಿಸಿದೆ. ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಬೀಳಲಿದೆ ಎಂದು ವರದಿಯಾಗಿದೆ.
ಕಂಬಳ ಕ್ರೀಡೆಗೆ ರಾಜ್ಯ ಸರಕಾರಕ್ಕೆ ಅಧಿಕೃತ ಮಾನ್ಯತೆ ಘೋಷಣೆಯಾದರೆ ರಾಜ್ಯದ ಕ್ರೀಡಾ ಪ್ರಾಧಿಕಾರದಿಂದ ಉಳಿದ ಕ್ರೀಡೆಗಳಿಗೆ ಸಿಗುವ ಸೌಲಭ್ಯಗಳು ಕಂಬಳ ಕ್ರೀಡೆಗೂ ಅನ್ವಯವಾಗಲಿದೆ. ಕಂಬಳಕ್ಕೆ ಒಂದೆಡೆ ರಾಜ್ಯದ ಮಾನ್ಯತೆಯ ಸಿದ್ಧತೆ ಅಂತಿಮ ಹಂತದಲ್ಲಿದ್ದರೆ, ಇನ್ನೊಂದೆಡೆ ಕಂಬಳ ಅಸೋಸಿಯೇಶನ್ ನೇಮಕ ಪಟ್ಟಿಯನ್ನು ರಾಜ್ಯ ಸರಕಾರ ಅಂತಿಮಗೊಳಿಸಿದೆ. ಕಂಬಳ ಸಮಿತಿ ಅಧ್ಯಕ್ಷರೇ ಕಂಬಳ ಅಸೋಸಿಯೇಶನ್ಗೆ ಅಧ್ಯಕ್ಷರಾಗಿದ್ದು, ಉಳಿದಂತೆ ಗೌರವ ಸಲಹೆಗಾರರು, ಸದಸ್ಯರು ಸೇರಿದಂತೆ 13 ಮಂದಿಯ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ.
ಕಂಬಳ ಅಸೋಸಿಯೇಶನ್ ಸ್ಥಾಪನೆ ಮಾಡುವ ಮೂಲಕ ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರೋತ್ಸಾಹ ಧನ, ವಿಶೇಷ ಅನುದಾನ, ಓಟಗಾರರು, ಕೋಣದ ಮಾಲೀಕರು, ಇತರರಿಗೆ ಸೌಲಭ್ಯ ದೊರೆಯಲಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರವೇ ಕಂಬಳ ಅಸೋಸಿಯೇಶನ್ಗೆ ಬೈಲಾ ಸಿದ್ಧಪಡಿಸುತ್ತಿದೆ
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…