ಮಂಗಳೂರು: ಕಂಬಳ ಅಭಿಮಾನಿಗಳಿಗೆ ರಾಜ್ಯ ಸರಕಾರ ಸಿಹಿ ಸುದ್ದಿ ನೀಡಿದ್ದು, ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ರಾಜ್ಯ ಕ್ರೀಡೆಯಾಗಿ ಮಾನ್ಯತೆ ನೀಡಲು ನಿರ್ಧರಿಸಿದೆ. ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಬೀಳಲಿದೆ ಎಂದು ವರದಿಯಾಗಿದೆ.
ಕಂಬಳ ಕ್ರೀಡೆಗೆ ರಾಜ್ಯ ಸರಕಾರಕ್ಕೆ ಅಧಿಕೃತ ಮಾನ್ಯತೆ ಘೋಷಣೆಯಾದರೆ ರಾಜ್ಯದ ಕ್ರೀಡಾ ಪ್ರಾಧಿಕಾರದಿಂದ ಉಳಿದ ಕ್ರೀಡೆಗಳಿಗೆ ಸಿಗುವ ಸೌಲಭ್ಯಗಳು ಕಂಬಳ ಕ್ರೀಡೆಗೂ ಅನ್ವಯವಾಗಲಿದೆ. ಕಂಬಳಕ್ಕೆ ಒಂದೆಡೆ ರಾಜ್ಯದ ಮಾನ್ಯತೆಯ ಸಿದ್ಧತೆ ಅಂತಿಮ ಹಂತದಲ್ಲಿದ್ದರೆ, ಇನ್ನೊಂದೆಡೆ ಕಂಬಳ ಅಸೋಸಿಯೇಶನ್ ನೇಮಕ ಪಟ್ಟಿಯನ್ನು ರಾಜ್ಯ ಸರಕಾರ ಅಂತಿಮಗೊಳಿಸಿದೆ. ಕಂಬಳ ಸಮಿತಿ ಅಧ್ಯಕ್ಷರೇ ಕಂಬಳ ಅಸೋಸಿಯೇಶನ್ಗೆ ಅಧ್ಯಕ್ಷರಾಗಿದ್ದು, ಉಳಿದಂತೆ ಗೌರವ ಸಲಹೆಗಾರರು, ಸದಸ್ಯರು ಸೇರಿದಂತೆ 13 ಮಂದಿಯ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ.
ಕಂಬಳ ಅಸೋಸಿಯೇಶನ್ ಸ್ಥಾಪನೆ ಮಾಡುವ ಮೂಲಕ ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರೋತ್ಸಾಹ ಧನ, ವಿಶೇಷ ಅನುದಾನ, ಓಟಗಾರರು, ಕೋಣದ ಮಾಲೀಕರು, ಇತರರಿಗೆ ಸೌಲಭ್ಯ ದೊರೆಯಲಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರವೇ ಕಂಬಳ ಅಸೋಸಿಯೇಶನ್ಗೆ ಬೈಲಾ ಸಿದ್ಧಪಡಿಸುತ್ತಿದೆ
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…