ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವುದರ ಜೊತೆಗೆ ಟೆಂಪಲ್ ಟೂರಿಸಂ ಬಗ್ಗೆಯೂ ವಿಶೇಷ ಗಮನ ಹರಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಅಧಿವೇಶನದ ವೇಳೆ ಸರ್ಕಾರದ ಗಮನ ಸೆಳೆದರು.
ದೇಶದ ಪ್ರಸಿದ್ಧ ತೀರ್ಥಕ್ಷೇತ್ರಗಳಂತೆ ಕರಾವಳಿಯಲ್ಲೂ ಸುಪ್ರಸಿದ್ಧ ತೀರ್ಥಕ್ಷೇತ್ರಗಳಿವೆ. ಇಲ್ಲಿನ ದೈವ-ದೇವರುಗಳಿಗೆ ದೇಶ, ವಿದೇಶಗಳಲ್ಲೂ ಭಕ್ತರಿದ್ದಾರೆ. ಹೀಗಾಗಿ ಪ್ರತಿವರ್ಷ ಸಾವಿರಾರು ಭಕ್ತರು ರಸ್ತೆ, ಜಲ, ವಾಯು ಸಾರಿಗೆಗಳನ್ನು ಬಳಸಿಕೊಂಡು ಇಲ್ಲಿನ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡುತ್ತಿರುತ್ತಾರೆ. ಇಲ್ಲಿಗೆ ಭೇಟಿ ನೀಡುವವರಿಗೆ ಇನ್ನೂ ಹೆಚ್ಚಿನ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಕೊಟ್ಟರೆ ಕರಾವಳಿ ಧಾರ್ಮಿಕ ಟೂರಿಸಂಗೆ ಹೇರಳ ಅವಕಾಶವಿದೆ ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ಪ್ರವಾಸೋದ್ಯಮ ಸಚಿವ ಎಚ್ ಕೆ ಪಾಟೀಲ್ ರವರು ಟೆಂಪಲ್ ಟೂರಿಸಮ್ ಗೆ ಇಡೀ ರಾಜ್ಯದಲ್ಲಿ ದಕ್ಷಿಣ ಕನ್ನಡ ಉಡುಪಿ ಹಾಗೂ ಉತ್ತರ ಕನ್ನಡ ಈ ಮೂರೂ ಜಿಲ್ಲೆಗಳು ನೀಡಿರುವ ಕೊಡುಗೆ ಬಹಳಷ್ಟಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕೆಲವೇ ತಿಂಗಳಲ್ಲಿ ಬರಲಿರುವ ನೂತನ ಪ್ರವಾಸೋದ್ಯಮ ನೀತಿಯಲ್ಲಿ ಶಾಸಕ ಕಾಮತ್ ಅವರು ಉಲ್ಲೇಖಿಸಿದ ಕರಾವಳಿಯ ಟೆಂಪಲ್ ಟೂರಿಸಂಗೂ ವಿಶೇಷ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…