ಉಡುಪಿ: ಜಿಲ್ಲೆಯ ಐದು ಕ್ಷೇತ್ರಗಳಿಗೆ ಕಾಂಗ್ರೆಸ್ ಸರಕಾರ ಅನುದಾನ ನೀಡದೆ ಸಂಪೂರ್ಣವಾಗಿ ನಿರ್ಲಕ್ಷ್ಯ ವಹಿಸಿದೆ. ಕರಾವಳಿಯ ನಿರ್ಲಕ್ಷ 10 ದಿನದೊಳಗೆ ಸರಿಪಡಿಸದಿದ್ದರೆ, ಅನುದಾನಕ್ಕೆ ಆಗ್ರಹಿಸಿ ಮುಖ್ಯಮಂತ್ರಿಗಳ ಮನೆ ಮುಂದೆ ಧರಣಿ ಕೂರುವುದಾಗಿ ಬಿಜೆಪಿಯ ಐದು ಶಾಸಕರು ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಐದು ಶಾಸಕರು ಹಾಗೂ ಸಂಸದರು ಜಂಟಿಯಾಗಿ ಸುದ್ದಿಗೋಷ್ಟಿ ನಡೆಸಿದ್ದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕಾರ್ಕಳ ಶಾಸಕ ಸುನೀಲ್ ಕುಮಾರ್ ಕರಾವಳಿಯ ಮೂರು ಜಿಲ್ಲೆಗಳನ್ನು ರಾಜ್ಯ ಕಾಂಗ್ರೆಸ್ ಸರಕಾರ ಸಂಪೂರ್ಣ ನಿರ್ಲಕ್ಷ್ಯ ಮಾಡಿದ್ದು ಒಂದು ರೂಪಾಯಿ ಅನುದಾನ ಬಿಡುಗಡೆ ಮಾಡಿಲ್ಲ. ಬಿಜೆಪಿ ಶಾಸಕರು ಎಂಬ ಕಾರಣಕ್ಕೆ ಜಿಲ್ಲಾಡಳಿತ ನಿರಂತರ ಅಸಹಕಾರ ನೀಡುತ್ತಿದೆ ಎಂದರು
ಸದಾ ಜನಪ್ರತಿನಿಧಿಗಳು ಕಾರ್ಯಕರ್ತರ ಟಾರ್ಗೆಟ್ ಮಾಡಲಾಗುತ್ತಿದ್ದು, ಶಾಸಕರ ಅನುದಾನದಲ್ಲಿ ತಾರತಮ್ಯ ಮಾಡಲಾಗುತ್ತಿದೆ.ಕಳೆದ ಮಳೆಗಾಲದಲ್ಲಿ ಸಿಎಂ ಸಿದ್ದರಾಮಯ್ಯ ಕೆಡಿಪಿ ಸಭೆ ಮಾಡಿದ್ದರು ಆದರೆ ಸಭೆಯ ಯಾವ ನಿರ್ಣಯ ಕೂಡ ಅನುಷ್ಠಾನಕ್ಕೆ ತಂದಿಲ್ಲ. ಕಾಲುಸಂಕಕ್ಕೆ 50 ಕೋಟಿ ಕೊಡುತ್ತೇವೆ ಎಂದಿದ್ದರು ಆದನ್ನು ನೀಡಲ್ಲ. 2023ರ ಮಳೆ ಹಾನಿಯಿಂದಾದ ರಸ್ತೆ ರಿಪೇರಿಗೆ, ಬೆಳೆ ಹಾನಿ, ಶಾಲಾ ಕಟ್ಟಡ ರಿಪೇರಿ ಹಣ ನೀಡಿಲ್ಲ ಅಲ್ಲದೆ ಎರಡು ಬಜೆಟ್ ನಲ್ಲಿ ಉಡುಪಿಗೆ ಯಾವುದೇ ಯೋಜನೆ ನೀಡಿಲ್ಲ ಎಂದರು.
ಜಿಲ್ಲಾಡಳಿತ 240 ಕೋಟಿ ಮಳೆಹಾನಿ ಲೆಕ್ಕ ನೀಡಿದ್ದು, ಸರ್ಕಾರ ದಿವಾಳಿಯಾಗಿದೆ ಒಂದು ಪೈಸೆ ಬಿಡುಗಡೆ ಮಾಡಿಲ್ಲ. ಇದು ಕರಾವಳಿಯ ನಿರ್ಲಕ್ಷ್ಯವಲ್ಲದೆ ಮತ್ತಿನ್ನೇನು ಎಂದು ಪ್ರಶ್ನಿಸಿದ ಸುನೀಲ್ ಕುಮಾರ್ ಐದು ಜನ ಬಿಜೆಪಿ ಶಾಸಕರು ಇದ್ದಾರೆ ಎನ್ನುವ ಕಾರಣಕ್ಕೆ ಅನುದಾನ ನೀಡುತ್ತಿಲ್ಲ ಎಂದರು.
ತಾಲೂಕು ಮಟ್ಟದ ಅಧಿಕಾರಿಗಳ ನಿರಂತರ ವರ್ಗಾವಣೆ ದಂಧೆ ನಡೆಯುತ್ತಿದ್ದು, ಶಾಸಕರಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಅಸಹಕಾರ ತೋರುತ್ತಾರೆ. ಕರಾವಳಿಯ ಎಲ್ಲಾ ಬಿಜೆಪಿ ಶಾಸಕರು ನಮ್ಮ ಬೇಡಿಕೆ ನೀಡಿದ್ದು, ಈ ಅನುದಾನವನ್ನು ಸರ್ಕಾರ ತಕ್ಷಣ ಬಿಡುಗಡೆ ಮಾಡಬೇಕು. ಕರಾವಳಿಯ ನಿರ್ಲಕ್ಷ 10 ದಿನದೊಳಗೆ ಸರಿಪಡಿಸದಿದ್ದರೆ, ಅನುದಾನಕ್ಕೆ ಆಗ್ರಹಿಸಿ ಮುಖ್ಯಮಂತ್ರಿಗಳ ಮನೆ ಮುಂದೆ ಧರಣಿ ಕೂರಲಿದ್ದೇವೆ. ಈ ಧರಣಿಗೆ ಸರಕಾರ ಅವಕಾಶ ನೀಡಬಾರದು ಎಂದರು.
ರಸ್ತೆಗಳ ಪ್ಯಾಚ್ ವರ್ಕ್ ಗೂ ಹಣ ನೀಡಿಲ್ಲ ಇದರಿಂದಾಗಿ ಗ್ರಾಮೀಣ ರಸ್ತೆಗಳಲ್ಲಿ ಓಡಾಡುವ ಸ್ಥಿತಿ ಇಲ್ಲ. ಇದಕ್ಕೆಲ್ಲಾ ಹತ್ತು ದಿನದಲ್ಲಿ ಮುಖ್ಯಮಂತ್ರಿಗಳು ಉತ್ತರ ಕೊಡಬೇಕು. ಮೊದಲ ಹಂತದಲ್ಲಿ ಮುಖ್ಯಮಂತ್ರಿಗಳ ಮನೆ ಮುಂದೆ ಧರಣಿ ಕೂರಲಾಗುವುದು ಎರಡನೇ ಹಂತದಲ್ಲಿ ಎರಡು ಜಿಲ್ಲೆಗಳಲ್ಲಿ ಜನಾಂದೋಲನ ನಡೆಸಲಾಗುವುದು ಎಂದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…