ಉಡುಪಿ: ಜಿಲ್ಲೆಯ ಐದು ಕ್ಷೇತ್ರಗಳಿಗೆ ಕಾಂಗ್ರೆಸ್ ಸರಕಾರ ಅನುದಾನ ನೀಡದೆ ಸಂಪೂರ್ಣವಾಗಿ ನಿರ್ಲಕ್ಷ್ಯ ವಹಿಸಿದೆ. ಕರಾವಳಿಯ ನಿರ್ಲಕ್ಷ 10 ದಿನದೊಳಗೆ ಸರಿಪಡಿಸದಿದ್ದರೆ, ಅನುದಾನಕ್ಕೆ ಆಗ್ರಹಿಸಿ ಮುಖ್ಯಮಂತ್ರಿಗಳ ಮನೆ ಮುಂದೆ ಧರಣಿ ಕೂರುವುದಾಗಿ ಬಿಜೆಪಿಯ ಐದು ಶಾಸಕರು ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಐದು ಶಾಸಕರು ಹಾಗೂ ಸಂಸದರು ಜಂಟಿಯಾಗಿ ಸುದ್ದಿಗೋಷ್ಟಿ ನಡೆಸಿದ್ದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕಾರ್ಕಳ ಶಾಸಕ ಸುನೀಲ್ ಕುಮಾರ್ ಕರಾವಳಿಯ ಮೂರು ಜಿಲ್ಲೆಗಳನ್ನು ರಾಜ್ಯ ಕಾಂಗ್ರೆಸ್ ಸರಕಾರ ಸಂಪೂರ್ಣ ನಿರ್ಲಕ್ಷ್ಯ ಮಾಡಿದ್ದು ಒಂದು ರೂಪಾಯಿ ಅನುದಾನ ಬಿಡುಗಡೆ ಮಾಡಿಲ್ಲ. ಬಿಜೆಪಿ ಶಾಸಕರು ಎಂಬ ಕಾರಣಕ್ಕೆ ಜಿಲ್ಲಾಡಳಿತ ನಿರಂತರ ಅಸಹಕಾರ ನೀಡುತ್ತಿದೆ ಎಂದರು
ಸದಾ ಜನಪ್ರತಿನಿಧಿಗಳು ಕಾರ್ಯಕರ್ತರ ಟಾರ್ಗೆಟ್ ಮಾಡಲಾಗುತ್ತಿದ್ದು, ಶಾಸಕರ ಅನುದಾನದಲ್ಲಿ ತಾರತಮ್ಯ ಮಾಡಲಾಗುತ್ತಿದೆ.ಕಳೆದ ಮಳೆಗಾಲದಲ್ಲಿ ಸಿಎಂ ಸಿದ್ದರಾಮಯ್ಯ ಕೆಡಿಪಿ ಸಭೆ ಮಾಡಿದ್ದರು ಆದರೆ ಸಭೆಯ ಯಾವ ನಿರ್ಣಯ ಕೂಡ ಅನುಷ್ಠಾನಕ್ಕೆ ತಂದಿಲ್ಲ. ಕಾಲುಸಂಕಕ್ಕೆ 50 ಕೋಟಿ ಕೊಡುತ್ತೇವೆ ಎಂದಿದ್ದರು ಆದನ್ನು ನೀಡಲ್ಲ. 2023ರ ಮಳೆ ಹಾನಿಯಿಂದಾದ ರಸ್ತೆ ರಿಪೇರಿಗೆ, ಬೆಳೆ ಹಾನಿ, ಶಾಲಾ ಕಟ್ಟಡ ರಿಪೇರಿ ಹಣ ನೀಡಿಲ್ಲ ಅಲ್ಲದೆ ಎರಡು ಬಜೆಟ್ ನಲ್ಲಿ ಉಡುಪಿಗೆ ಯಾವುದೇ ಯೋಜನೆ ನೀಡಿಲ್ಲ ಎಂದರು.
ಜಿಲ್ಲಾಡಳಿತ 240 ಕೋಟಿ ಮಳೆಹಾನಿ ಲೆಕ್ಕ ನೀಡಿದ್ದು, ಸರ್ಕಾರ ದಿವಾಳಿಯಾಗಿದೆ ಒಂದು ಪೈಸೆ ಬಿಡುಗಡೆ ಮಾಡಿಲ್ಲ. ಇದು ಕರಾವಳಿಯ ನಿರ್ಲಕ್ಷ್ಯವಲ್ಲದೆ ಮತ್ತಿನ್ನೇನು ಎಂದು ಪ್ರಶ್ನಿಸಿದ ಸುನೀಲ್ ಕುಮಾರ್ ಐದು ಜನ ಬಿಜೆಪಿ ಶಾಸಕರು ಇದ್ದಾರೆ ಎನ್ನುವ ಕಾರಣಕ್ಕೆ ಅನುದಾನ ನೀಡುತ್ತಿಲ್ಲ ಎಂದರು.
ತಾಲೂಕು ಮಟ್ಟದ ಅಧಿಕಾರಿಗಳ ನಿರಂತರ ವರ್ಗಾವಣೆ ದಂಧೆ ನಡೆಯುತ್ತಿದ್ದು, ಶಾಸಕರಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಅಸಹಕಾರ ತೋರುತ್ತಾರೆ. ಕರಾವಳಿಯ ಎಲ್ಲಾ ಬಿಜೆಪಿ ಶಾಸಕರು ನಮ್ಮ ಬೇಡಿಕೆ ನೀಡಿದ್ದು, ಈ ಅನುದಾನವನ್ನು ಸರ್ಕಾರ ತಕ್ಷಣ ಬಿಡುಗಡೆ ಮಾಡಬೇಕು. ಕರಾವಳಿಯ ನಿರ್ಲಕ್ಷ 10 ದಿನದೊಳಗೆ ಸರಿಪಡಿಸದಿದ್ದರೆ, ಅನುದಾನಕ್ಕೆ ಆಗ್ರಹಿಸಿ ಮುಖ್ಯಮಂತ್ರಿಗಳ ಮನೆ ಮುಂದೆ ಧರಣಿ ಕೂರಲಿದ್ದೇವೆ. ಈ ಧರಣಿಗೆ ಸರಕಾರ ಅವಕಾಶ ನೀಡಬಾರದು ಎಂದರು.
ರಸ್ತೆಗಳ ಪ್ಯಾಚ್ ವರ್ಕ್ ಗೂ ಹಣ ನೀಡಿಲ್ಲ ಇದರಿಂದಾಗಿ ಗ್ರಾಮೀಣ ರಸ್ತೆಗಳಲ್ಲಿ ಓಡಾಡುವ ಸ್ಥಿತಿ ಇಲ್ಲ. ಇದಕ್ಕೆಲ್ಲಾ ಹತ್ತು ದಿನದಲ್ಲಿ ಮುಖ್ಯಮಂತ್ರಿಗಳು ಉತ್ತರ ಕೊಡಬೇಕು. ಮೊದಲ ಹಂತದಲ್ಲಿ ಮುಖ್ಯಮಂತ್ರಿಗಳ ಮನೆ ಮುಂದೆ ಧರಣಿ ಕೂರಲಾಗುವುದು ಎರಡನೇ ಹಂತದಲ್ಲಿ ಎರಡು ಜಿಲ್ಲೆಗಳಲ್ಲಿ ಜನಾಂದೋಲನ ನಡೆಸಲಾಗುವುದು ಎಂದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…