ಉಡುಪಿ: ಕರಾವಳಿಯ ಪ್ರಸಿದ್ಧ ದೇವಿಯ ದೇಗುಲ ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಿಗೆ ಉಡುಪಿಯಲ್ಲಿ ಚಿನ್ನದ ಪಲ್ಲಕ್ಕಿ ಸಿದ್ಧಗೊಂಡಿದೆ.
ಈ ಪಲ್ಲಕ್ಕಿ ತಯಾರಿಗೆ 12 ಕಿಲೋ ತೂಕದ ಚಿನ್ನ ಬಳಸಲಾಗಿದೆ. ಸುಮಾರು ಐದು ಕೋಟಿ ರೂ. ವೆಚ್ಚದಲ್ಲಿ ಈ ಕಲಾತ್ಮಕ ಪಲ್ಲಕಿ ಸಿದ್ಧಗೊಳಿಸಲಾಗಿದೆ. ದೇವಾಲಯಗಳ ಆಭರಣ, ರಥ ಹಾಗೂ ಪಲ್ಲಕಿ ನಿರ್ಮಾಣಕ್ಕೆ ಹೆಸರುವಾಸಿಯಾದ ಉಡುಪಿಯ ಸ್ವರ್ಣ ಜುವೆಲ್ಲರ್ಸ್ ಒಂದು ತಿಂಗಳ ಕಾಲಾವಧಿಯಲ್ಲಿ ಪಲ್ಲಕ್ಕಿಯನ್ನು ನಿರ್ಮಾಣ ಮಾಡಿದೆ.
ಉಡುಪಿಯಲ್ಲಿ ಸಿದ್ಧಗೊಂಡ ಸ್ವರ್ಣ ಪಲ್ಲಕ್ಕಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಬಪ್ಪನಾಡು ದೇವಸ್ಥಾನಕ್ಕೆ ಮೆರವಣಿಗೆ ಮೂಲಕ ತೆಗೆದುಕೊಂಡು ಹೋಗಲಾಗಿದೆ. ಸುಮಾರು 5 ಕೋಟಿ ರೂ. ವೆಚ್ಚದ ಈ ಸ್ವರ್ಣ ಪಲ್ಲಕ್ಕಿಯ ಗುಣಮಟ್ಟ, ಚಿನ್ನದ ಪರಿಶುದ್ಧತೆ, ತೂಕ ಸಹಿತ ವಿವಿಧೆಡೆ ಕೆಲಸ ಕಾರ್ಯಗಳನ್ನು ಚಿತ್ರೀಕರಣ ಮಾಡಲಾಗಿತ್ತು. ಬಪ್ಪನಾಡಿನ ಭಕ್ತರ ಸಹಕಾರದೊಂದಿಗೆ ರೂಪಿತವಾಗಿರುವ ಈ ಸ್ವರ್ಣ ಪಲ್ಲಕ್ಕಿಯನ್ನು ಕಳೆದ 2 ತಿಂಗಳೊಳಗೆ ಪೂರ್ಣಗೊಳಿಸಲಾಗಿದೆ ಎಂದು ಸ್ವರ್ಣ ಸಂಸ್ಥೆಯ ನಿರ್ದೇಶಕ ಗುಜ್ಜಾಡಿ ರಾಮದಾಸ್ ನಾಯಕ್ ತಿಳಿಸಿದ್ದಾರೆ.
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…
ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ…
ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್ ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…