ಉಡುಪಿ: ಕರಾವಳಿಯ ಪ್ರಸಿದ್ಧ ದೇವಿಯ ದೇಗುಲ ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಿಗೆ ಉಡುಪಿಯಲ್ಲಿ ಚಿನ್ನದ ಪಲ್ಲಕ್ಕಿ ಸಿದ್ಧಗೊಂಡಿದೆ.
ಈ ಪಲ್ಲಕ್ಕಿ ತಯಾರಿಗೆ 12 ಕಿಲೋ ತೂಕದ ಚಿನ್ನ ಬಳಸಲಾಗಿದೆ. ಸುಮಾರು ಐದು ಕೋಟಿ ರೂ. ವೆಚ್ಚದಲ್ಲಿ ಈ ಕಲಾತ್ಮಕ ಪಲ್ಲಕಿ ಸಿದ್ಧಗೊಳಿಸಲಾಗಿದೆ. ದೇವಾಲಯಗಳ ಆಭರಣ, ರಥ ಹಾಗೂ ಪಲ್ಲಕಿ ನಿರ್ಮಾಣಕ್ಕೆ ಹೆಸರುವಾಸಿಯಾದ ಉಡುಪಿಯ ಸ್ವರ್ಣ ಜುವೆಲ್ಲರ್ಸ್ ಒಂದು ತಿಂಗಳ ಕಾಲಾವಧಿಯಲ್ಲಿ ಪಲ್ಲಕ್ಕಿಯನ್ನು ನಿರ್ಮಾಣ ಮಾಡಿದೆ.
ಉಡುಪಿಯಲ್ಲಿ ಸಿದ್ಧಗೊಂಡ ಸ್ವರ್ಣ ಪಲ್ಲಕ್ಕಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಬಪ್ಪನಾಡು ದೇವಸ್ಥಾನಕ್ಕೆ ಮೆರವಣಿಗೆ ಮೂಲಕ ತೆಗೆದುಕೊಂಡು ಹೋಗಲಾಗಿದೆ. ಸುಮಾರು 5 ಕೋಟಿ ರೂ. ವೆಚ್ಚದ ಈ ಸ್ವರ್ಣ ಪಲ್ಲಕ್ಕಿಯ ಗುಣಮಟ್ಟ, ಚಿನ್ನದ ಪರಿಶುದ್ಧತೆ, ತೂಕ ಸಹಿತ ವಿವಿಧೆಡೆ ಕೆಲಸ ಕಾರ್ಯಗಳನ್ನು ಚಿತ್ರೀಕರಣ ಮಾಡಲಾಗಿತ್ತು. ಬಪ್ಪನಾಡಿನ ಭಕ್ತರ ಸಹಕಾರದೊಂದಿಗೆ ರೂಪಿತವಾಗಿರುವ ಈ ಸ್ವರ್ಣ ಪಲ್ಲಕ್ಕಿಯನ್ನು ಕಳೆದ 2 ತಿಂಗಳೊಳಗೆ ಪೂರ್ಣಗೊಳಿಸಲಾಗಿದೆ ಎಂದು ಸ್ವರ್ಣ ಸಂಸ್ಥೆಯ ನಿರ್ದೇಶಕ ಗುಜ್ಜಾಡಿ ರಾಮದಾಸ್ ನಾಯಕ್ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…