ಉಡುಪಿ: ಕರಾವಳಿಯ ಪ್ರಸಿದ್ಧ ದೇವಿಯ ದೇಗುಲ ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಿಗೆ ಉಡುಪಿಯಲ್ಲಿ ಚಿನ್ನದ ಪಲ್ಲಕ್ಕಿ ಸಿದ್ಧಗೊಂಡಿದೆ.
ಈ ಪಲ್ಲಕ್ಕಿ ತಯಾರಿಗೆ 12 ಕಿಲೋ ತೂಕದ ಚಿನ್ನ ಬಳಸಲಾಗಿದೆ. ಸುಮಾರು ಐದು ಕೋಟಿ ರೂ. ವೆಚ್ಚದಲ್ಲಿ ಈ ಕಲಾತ್ಮಕ ಪಲ್ಲಕಿ ಸಿದ್ಧಗೊಳಿಸಲಾಗಿದೆ. ದೇವಾಲಯಗಳ ಆಭರಣ, ರಥ ಹಾಗೂ ಪಲ್ಲಕಿ ನಿರ್ಮಾಣಕ್ಕೆ ಹೆಸರುವಾಸಿಯಾದ ಉಡುಪಿಯ ಸ್ವರ್ಣ ಜುವೆಲ್ಲರ್ಸ್ ಒಂದು ತಿಂಗಳ ಕಾಲಾವಧಿಯಲ್ಲಿ ಪಲ್ಲಕ್ಕಿಯನ್ನು ನಿರ್ಮಾಣ ಮಾಡಿದೆ.
ಉಡುಪಿಯಲ್ಲಿ ಸಿದ್ಧಗೊಂಡ ಸ್ವರ್ಣ ಪಲ್ಲಕ್ಕಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಬಪ್ಪನಾಡು ದೇವಸ್ಥಾನಕ್ಕೆ ಮೆರವಣಿಗೆ ಮೂಲಕ ತೆಗೆದುಕೊಂಡು ಹೋಗಲಾಗಿದೆ. ಸುಮಾರು 5 ಕೋಟಿ ರೂ. ವೆಚ್ಚದ ಈ ಸ್ವರ್ಣ ಪಲ್ಲಕ್ಕಿಯ ಗುಣಮಟ್ಟ, ಚಿನ್ನದ ಪರಿಶುದ್ಧತೆ, ತೂಕ ಸಹಿತ ವಿವಿಧೆಡೆ ಕೆಲಸ ಕಾರ್ಯಗಳನ್ನು ಚಿತ್ರೀಕರಣ ಮಾಡಲಾಗಿತ್ತು. ಬಪ್ಪನಾಡಿನ ಭಕ್ತರ ಸಹಕಾರದೊಂದಿಗೆ ರೂಪಿತವಾಗಿರುವ ಈ ಸ್ವರ್ಣ ಪಲ್ಲಕ್ಕಿಯನ್ನು ಕಳೆದ 2 ತಿಂಗಳೊಳಗೆ ಪೂರ್ಣಗೊಳಿಸಲಾಗಿದೆ ಎಂದು ಸ್ವರ್ಣ ಸಂಸ್ಥೆಯ ನಿರ್ದೇಶಕ ಗುಜ್ಜಾಡಿ ರಾಮದಾಸ್ ನಾಯಕ್ ತಿಳಿಸಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…