ಉಡುಪಿ: ಕರಾವಳಿಯ ಪ್ರಸಿದ್ಧ ದೇವಿಯ ದೇಗುಲ ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಿಗೆ ಉಡುಪಿಯಲ್ಲಿ ಚಿನ್ನದ ಪಲ್ಲಕ್ಕಿ ಸಿದ್ಧಗೊಂಡಿದೆ.
ಈ ಪಲ್ಲಕ್ಕಿ ತಯಾರಿಗೆ 12 ಕಿಲೋ ತೂಕದ ಚಿನ್ನ ಬಳಸಲಾಗಿದೆ. ಸುಮಾರು ಐದು ಕೋಟಿ ರೂ. ವೆಚ್ಚದಲ್ಲಿ ಈ ಕಲಾತ್ಮಕ ಪಲ್ಲಕಿ ಸಿದ್ಧಗೊಳಿಸಲಾಗಿದೆ. ದೇವಾಲಯಗಳ ಆಭರಣ, ರಥ ಹಾಗೂ ಪಲ್ಲಕಿ ನಿರ್ಮಾಣಕ್ಕೆ ಹೆಸರುವಾಸಿಯಾದ ಉಡುಪಿಯ ಸ್ವರ್ಣ ಜುವೆಲ್ಲರ್ಸ್ ಒಂದು ತಿಂಗಳ ಕಾಲಾವಧಿಯಲ್ಲಿ ಪಲ್ಲಕ್ಕಿಯನ್ನು ನಿರ್ಮಾಣ ಮಾಡಿದೆ.
ಉಡುಪಿಯಲ್ಲಿ ಸಿದ್ಧಗೊಂಡ ಸ್ವರ್ಣ ಪಲ್ಲಕ್ಕಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಬಪ್ಪನಾಡು ದೇವಸ್ಥಾನಕ್ಕೆ ಮೆರವಣಿಗೆ ಮೂಲಕ ತೆಗೆದುಕೊಂಡು ಹೋಗಲಾಗಿದೆ. ಸುಮಾರು 5 ಕೋಟಿ ರೂ. ವೆಚ್ಚದ ಈ ಸ್ವರ್ಣ ಪಲ್ಲಕ್ಕಿಯ ಗುಣಮಟ್ಟ, ಚಿನ್ನದ ಪರಿಶುದ್ಧತೆ, ತೂಕ ಸಹಿತ ವಿವಿಧೆಡೆ ಕೆಲಸ ಕಾರ್ಯಗಳನ್ನು ಚಿತ್ರೀಕರಣ ಮಾಡಲಾಗಿತ್ತು. ಬಪ್ಪನಾಡಿನ ಭಕ್ತರ ಸಹಕಾರದೊಂದಿಗೆ ರೂಪಿತವಾಗಿರುವ ಈ ಸ್ವರ್ಣ ಪಲ್ಲಕ್ಕಿಯನ್ನು ಕಳೆದ 2 ತಿಂಗಳೊಳಗೆ ಪೂರ್ಣಗೊಳಿಸಲಾಗಿದೆ ಎಂದು ಸ್ವರ್ಣ ಸಂಸ್ಥೆಯ ನಿರ್ದೇಶಕ ಗುಜ್ಜಾಡಿ ರಾಮದಾಸ್ ನಾಯಕ್ ತಿಳಿಸಿದ್ದಾರೆ.
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…