ಮಂಗಳೂರು: ಮೀನುಗಾರಿಕಾ ಇಲಾಖೆಯ ‘ಮತ್ಸ್ಯ ದರ್ಶಿನಿ’ ಉಪಾಹಾರ ಮಂದಿರಗಳನ್ನು ರಾಜ್ಯದ ಎಲ್ಲ ಭಾಗಗಳಿಗೆ ವಿಸ್ತರಿಸಲಾಗುವುದು ಎಂದು ಮೀನುಗಾರಿಕೆ, ಬಂದರು ಮತ್ತು ಧಾರ್ಮಿಕ ದತ್ತಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಅವರು ಮಂಗಳೂರಿನಲ್ಲಿ ಗುರುವಾರ ದ.ಕ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಮಹಾ ಮಂಡಲದ ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದ್ದಾರೆ.
ಮೀನುಗಾರಿಕಾ ಇಲಾಖೆಯ ಮತ್ಸ್ಯ ದರ್ಶಿನಿ ಉಪಾಹಾರ ಮಂದಿರಗಳು ಪ್ರಸ್ತುತ ರಾಜ್ಯದ ಆಯ್ದ ನಗರಗಳಿಗೆ ಸೀಮಿತವಾಗಿದೆ. ಕರಾವಳಿಯ ಮೀನಿನ ಸ್ವಾದವನ್ನು ರಾಜ್ಯದ ಎಲ್ಲ ತಾಲೂಕುಗಳಿಗೆ ಒಯ್ಯಲಾಗುವುದು. ರಾಜ್ಯದ ಎಲ್ಲ ತಾಲೂಕುಗಳಲ್ಲಿ ಮತ್ಸ್ಯ ದರ್ಶಿನಿ ಆರಂಭದೊಂದಿದೆ ಮೀನುಗಾರಿಕೆಯನ್ನು ಬೆಂಬಲಿಸಲಾಗುವುದು ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಇದೇ ಸಂದರ್ಭದಲ್ಲಿ, “ಮೀನುಗಾರ ಮಹಿಳೆಯರು ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಹೊಂದಿರುವ ಐವತ್ತು ಸಾವಿರ ರೂಪಾಯಿ ಸಾಲ ಮನ್ನಾ ಮಾಡಲು ಸರ್ಕಾರ ನಿರ್ಧರಿಸಿದೆ. ಆದ್ದರಿಂದ ಸಾಲ ಮರುಪಾವತಿಸಲು ಒತ್ತಡ ಹೇರಬಾರದೆಂದು ರಾಷ್ಟ್ರೀಕೃತ ಬ್ಯಾಂಕ್ಗಳಿಗೆ ನಿರ್ದೇಶಿಸಲಾಗಿದೆ” ಎಂದು ತಿಳಿಸಿದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…