Featured

ಕರಾವಳಿಯ ಮೂರು ದೇವಾಲಯಗಳ ಸ್ಪೋಟಕ್ಕೆ ಉಗ್ರರ ಸ್ಕೆಚ್ : ಮಂಗಳೂರಿನಲ್ಲಿ ಹೈ ಅಲರ್ಟ್ ; ತೀವ್ರ ತಪಾಸಣೆ – Vishwanews24

ಕರಾವಳಿಯ ದೇವಾಲಯಗಳ ಸ್ಪೋಟಕ್ಕೆ ಉಗ್ರರ ಸ್ಕೆಚ್ : ಮಂಗಳೂರಿನಲ್ಲಿ ಹೈ ಅಲರ್ಟ್ ; ತೀವ್ರ ತಪಾಸಣೆ

ಮಂಗಳೂರು : ಮಂಗಳೂರಿನಲ್ಲಿ ಸ್ಪೋಟ ಬೆನ್ನಲ್ಲೇ ಕರಾವಳಿ ಜಿಲ್ಲೆಯಲ್ಲಿ ಆತಂಕ ಮನೆ ಮಾಡಿದೆ. ಕರಾವಳಿಯ ಮೂರು ದೇವಾಲಯಗಳನ್ನು ಸ್ಪೋಟಿಸಲು ಉಗ್ರರು ಸಂಚು ರೂಪಿಸಿದ್ದರು ಎಂಬ ಸ್ಪೋಟಕ ಮಾಹಿತಿ ಪೊಲೀಸರಿಗೆ ಲಭ್ಯವಾಗಿದ್ದು, ಆತಂಕ ಮನೆ ಮಾಡಿದೆ.

ಈ ಹಿನ್ನೆಲೆ ಮಂಗಳೂರಿನಲ್ಲಿ ಪೊಲೀಸರು ಹೈ ಅಲರ್ಟ್ ಆಗಿದ್ದು, ಕುದ್ರೋಳಿಯ ಗೋಕರ್ಣನಾಥ ದೇವಾಲಯದಲ್ಲಿ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದಾರೆ. ಅಲ್ಲದೇ ಮಂಗಳೂರಿನ ಎಲ್ಲಾ ದೇವಾಲಯಗಳಲ್ಲಿ ಕೂಡ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಈ ಹಿನ್ನೆಲೆ ದೇವಾಲಯಕ್ಕೆ ಬರುವ ಜನರ ಮೇಲೆ ಪೊಲೀಸರು ಕಣ್ಣಿಟ್ಟಿದ್ದಾರೆ.

ಮಂಗಳೂರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರಿಗೆ ದಿನದಿಂದ ದಿನಕ್ಕೆ ಸ್ಪೋಟಕ ಮಾಹಿತಿ ಸಿಗುತ್ತಿದೆ. ಇದೀಗ ಇಡೀ ರಾಜ್ಯವೇ ಬೆಚ್ಚಿ ಬೀಳಿಸುವ ಸುದ್ದಿ ಬಯಲಾಗಿದ್ದು. ‘ಹಿಂದೂ’ ದೇವಾಲಯಗಳ ಸ್ಪೋಟಕ್ಕೆ ಉಗ್ರರು ಸ್ಕೆಚ್ ಹಾಕಿದ್ದರು ಎಂಬುದು ಬಯಲಾಗಿದೆ.. ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯ , ಮಂಗಳಾದೇವಿ ದೇವಾಲಯ, ಮಂಜುನಾಥ ಸ್ವಾಮಿ ದೇವಾಲಯಕ್ಕೂ ಉಗ್ರರು ಸ್ಕೆಚ್ ಹಾಕಿದ್ದರು ಎಂಬ ಮಾಹಿತಿ ಬಯಲಾಗಿದೆ.

ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ – ಮುಸ್ಲಿಂ ವ್ಯಾಪಾರ ಬಹಿಷ್ಕಾರ..ಮುಸ್ಲಿಮರನ್ನೆಲ್ಲಾ ಕೊಂದು ಹಿಂದೂ ರಾಷ್ಟ್ರ ಮಾಡಿ ..ಮುಸ್ಲಿಂ ಮುಖಂಡ ಮೊಹಮ್ಮದ್ ಖಾಲಿದ್ ಆಕ್ರೋಶ..

ಶಾರೀಖ್ ಮೊಬೈಲ್ ತನಿಖೆ ನಡೆಸಿದ ಪೊಲೀಸರಿಗೆ ಈ ವಿಚಾರ ಗೊತ್ತಾಗಿದೆ. ಅದೇ ರೀತಿ ಮಂಗಳೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣವನ್ನು ಕೂಡ ಸ್ಪೋಟಿಸುವ ಸ್ಕೆಚ್ ಹಾಕಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ದೇಗುಲ ಮಾತ್ರವಲ್ಲದೇ ಸಾರ್ವಜನಿಕ ಸ್ಥಳಗಳನ್ನು ಕೂಡ ಸ್ಪೋಟಿಸುವ ಸ್ಕೆಚ್ ಹಾಕಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಶಿವನ ಡಿಪಿ ಬೆನ್ನತ್ತಿದ ಪೊಲೀಸರಿಗೆ ಸ್ಪೋಟಕ ಮಾಹಿತಿ ಲಭ್ಯವಾಗಿದೆ. ಕರಾವಳಿ ಭಾಗದ ಮೂರು ದೇವಾಲಯಗಳನ್ನು ಸ್ಪೋಟಿಸುವ ಸ್ಕೆಚ್ ಹಾಕಲಾಗಿತ್ತು ಎಂಬ ಸ್ಪೋಟಕ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದು ಬಂದಿದೆ.

ಮಂಗಳೂರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಶಾರೀಕ್ ಬೆನ್ನಿಗೆ ನಿಂತಿದ್ದು, ಇನ್ನೊಂದು ದಾಳಿ ಮಾಡುವ ಬೆದರಿಕೆ ಒಡ್ಡಿದೆ.ಶಂಕಿ ಉಗ್ರ ಶಾರೀಕ್ ಬೆಂಬಲಿಸಿ ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ (Islamic Resistence Concil – IRC) ಹೇಳಿಕೆ ಬಿಡುಗಡೆ ಮಾಡಿದೆ.ಶಂಕಿತ ಉಗ್ರ ಶಾರೀಕ್ ನಮ್ಮ ಸಹೋದರ. ಮಂಗಳೂರಿನ ಕದ್ರಿ ದೇವಾಲಯದ ಮೇಲೆ ದಾಳಿಗೆ ಯತ್ನಿಸಲಾಗಿತ್ತು. ಮಂಗಳೂರು ಕೇಸರಿ ಭಯೋತ್ಪಾದಕರ ಭದ್ರಕೋಟೆಯಾಗಿದೆ. ಈ ಕಾರ್ಯಾಚರಣೆಯ ನಮ್ಮ ಉದ್ದೇಶ ಈಡೇರದಿದ್ದರೂ ರಾಜ್ಯ, ಕೇಂದ್ರ ಗುಪ್ತಚರ ಸಂಸ್ಥೆಗಳ ಕಣ್ತಪ್ಪಿಸಿ ದಾಳಿಗೆ ಸಿದ್ಧತೆ ಮಾಡಿಕೊಳ್ಳುತ್ತೇವೆ’ ಎಂದು ಉಗ್ರರು ಎಚ್ಚರಿಕೆ ನೀಡಿದ್ದಾರೆ.

ಬೆಳ್ತಂಗಡಿ : ಬೈಕ್ ಮತ್ತು ರಿಕ್ಷಾ ನಡುವೆ ನಡೆದ ಭೀಕರ ರಸ್ತೆ ಅಪಘಾತ : ಕಾಲೇಜು ವಿದ್ಯಾರ್ಥಿ ಮೃತ್ಯು – Vishwanews24

ನಿಮ್ಮ ಸಂತೋಷ ಅಲ್ಪಕಾಲಿಕ, ರಾಜ್ಯದಲ್ಲಿ ಹತ್ಯೆ, ದಬ್ಬಾಳಿಕೆಯ ಕಾನೂನು ನಡೆಯುತ್ತಿದೆ ಎಂದು ಡಾರ್ಕ್ ವೆಬ್ ಮೂಲಕ ಉಗ್ರರು ಎಚ್ಚರಿಕೆ ಸಂದೇಶ ನೀಡಿದ್ದಾರೆ. ಸ್ಪೋಟದ ಹೊಣೆಯನ್ನು ಇಸ್ಲಾಮಿಕ್ ರೆಸಿಸ್ಟೆನ್ಸ್ ಹೊತ್ತಿಕೊಂಡಿದ್ದು, ಉಗ್ರ ಶಾರೀಖ್ ದುಷ್ಕ್ರೃತ್ಯವನ್ನು ಸಮರ್ಥಿಸಿಕೊಂಡಿದೆ.

Vishwa News 24

Recent Posts

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

16 minutes ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

1 hour ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

22 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

22 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

22 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

22 hours ago