Featured

ಕರಾವಳಿಯ ಯಕ್ಷಗಾನ ಕಲೆಗೆ ಆಕರ್ಷಿತರಾದ ಆಸ್ಟ್ರೇಲಿಯಾ ಮಾಜಿ ಕ್ರಿಕೆಟಿಗ ಬ್ರಾಡ್ ಹಾಗ್ -Vishwanews24

ಬೆಂಗಳೂರು: ದಕ್ಷಿಣ ಭಾರತದ ಅತ್ಯಂತ ಜನಪ್ರಿಯ ಕಲೆಗಳಲ್ಲಿ ಯಕ್ಷಗಾನ ಅತೀ ಪ್ರಮುಖವಾದದ್ದು. ಇದೀಗ ಈ ವಿಶಿಷ್ಟ ಕಲೆಗೆ ಖ್ಯಾತ ಮಾಜಿ ಕ್ರಿಕೆಟರ್ ಹಾಗೂ ಲೆಗ್ ಸ್ಪಿನ್ನರ್ ಆಗಿರುವ ಬ್ರಾಡ್ ಹಾಗ್ ಆಕರ್ಷಿತರಾಗಿದ್ದಾರೆ.

ಕರ್ನಾಟಕ ಪ್ರೀಮಿಯರ್ ಲೀಗ್ ವೀಕ್ಷಕ ವಿವರಣೆಗೆ ಬೆಂಗಳೂರಿಗೆ ಆಗಮಿಸಿದ್ದ ಬ್ರಾಡ್ ಹಾಗ್, ಇಲ್ಲಿನ ವಿವಿ ಪುರಂ ಕಾಲೇಜಿನಲ್ಲಿ ಭಾನುವಾರ ನಡೆಯುತ್ತಿದ್ದ ಯಕ್ಷಗಾನ ತರಬೇತಿ ಶಿಬಿರಕ್ಕೂ ಭೇಟಿ ನೀಡಿ ಚೆಂಡೆ ನುಡಿಸಿ, ಕುಣಿತ ಕಲಿಯಲೂ ಪ್ರಯತ್ನಿಸಿ ಎಲ್ಲರನ್ನೂ ಬೆರಗುಗೊಳಿಸಿದರು.

ವಿವಿಪುರಂ ಕಲಾ ಕಾಲೇಜಿನಲ್ಲಿ ಕರಾವಳಿ ಕಲಾ ಪ್ರತಿಷ್ಠಾನದ ಸತೀಶ್ ಅಗ್ಪಲ ನೇತೃತ್ವದಲ್ಲಿ ನಡೆಯುವ ಸಂಕೃತಿ ಯಕ್ಷಾನುಭವ ತಂಡದಿಂದ ಯಕ್ಷಗಾನ ತರಬೇತಿ ನಡೆಯುತ್ತಿತ್ತು. ಈ ವೇಳೆ ಮಕ್ಕಳಿಗೆ ಯಕ್ಷಗಾನ ಹೇಳಿಕೊಡುತ್ತಿದ್ದುದನ್ನು ಗಮನಿಸಿದ ಬ್ರಾಡ್ ಹಾಗ್, ತಮಗೂ ಕಲಿಸುವಂತೆ ಕೇಳಿಕೊಂಡರು. ಬಳಿಕ ತಾನೂ ಕೂಡ ಯಕ್ಷಗಾನದ ತಾಳಕ್ಕೆ ಅನುಗುಣವಾಗಿ ಹೆಜ್ಜೆಯನ್ನೂ ಹಾಕಿ ಸಂಭ್ರಮಿಸಿದರು.

ಕರಾವಳಿಯ ಸರ್ವಾಂಗೀಣ ಕಲೆಯಾದ ಯಕ್ಷಗಾನದ ಕುಣಿತದ ಅಭ್ಯಾಸವನ್ನು ನೋಡಿ ಆನಂದಿಸಿದರಲ್ಲದೆ, ಅದರ ಆಕರ್ಷಣೆಗೆ ಮಾರುಹೋಗಿ, ತಾವೂ ಕುಣಿಯುವ ಬಯಕೆ ವ್ಯಕ್ತಪಡಿಸಿದರು.

ಹಿರಿಯ ಮದ್ದಳೆಗಾರರಾದ ಅಡೂರು ಮೋಹನ ಸರಳಾಯ ಅವರಿಂದ ಚೆಂಡೆ ನುಡಿಸುವ ಮಾಹಿತಿ ಪಡೆದ ಹಾಗ್, ತೆಂಕಿನ ಚೆಂಡೆಯನ್ನು ಹೆಗಲಿಗೇರಿಸಿ ತಾನು ಚೆಂಡೆ ನುಡಿಸಿದರು. ಬ್ರಾಡ್ ಹಾಗ್ ಚೆಂಡೆ ನುಡಿಸುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕ್ರಿಕೆಟಿಗ ಬ್ರಾಡ್ ಹಾಗ್ ಅವರು ಫಿಟ್ನೆಸ್ ಬಗ್ಗೆ ಹೆಚ್ಚು ಆಸ್ಥೆಯುಳ್ಳವರಾಗಿದ್ದು, ಕಲೆಯ ಮೇಲಿನ ಅಭಿಮಾನದ ದರ್ಶನವಾಯಿತು. ಅವರಿಗೆ ನಾಟ್ಯ ಮತ್ತು ಲಯದ ಹಿಡಿತವಿದೆ ಎಂಬುದು ಅವರ ಕಲಿಕೆಯನ್ನು ನೋಡಿಯೇ ತಿಳಿಯಿತು. ಕಲಿಕೆಯಲ್ಲಿ ತೋರಿದ ಉತ್ಸಾಹ ಮತ್ತು ಅವರೊಂದಿಗೆ ಯಕ್ಷಗಾನ ಕುರಿತು ಸಂವಹನ ನಡೆಸಿದ್ದು ಅವಿಸ್ಮರಣೀಯ. ಯಕ್ಷಗಾನವು ವಿಶ್ವಗಾನವಾಗುತ್ತಿರುವ ಬಗ್ಗೆ ಸಂತೋಷವಿದೆ.”
-ಪ್ರಸಾದ್ ಚೇರ್ಕಾಡಿ, ಯಕ್ಷಗಾನ ಕಲಾವಿದ, ಗುರು
Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago