ಕರಾವಳಿಯ ಯಕ್ಷಗಾನ ಕ್ಷೇತ್ರದಲ್ಲಿ ಜನಪ್ರಿಯ ಕಲಾವಿದರೆಂದು ಹೆಸರುವಾಸಿಯಾದ ಮುಸ್ಲಿಂ ಸಮುದಾಯದ ಅರ್ಷಿಯಾ -Vishwanews24

ಮಂಗಳೂರು: ಇತ್ತೀಚೆಗೆ ಹೆಣ್ಣು ಮಕ್ಕಳು ಕೂಡ ಯಕ್ಷಗಾನ ವೇಷಹಾಕಿಕೊಂಡು ರಂಗಸ್ಥಳದಲ್ಲಿ ವೇಷಹಾಕೋದು, ಭಾಗವತಿಕೆ ಮಾಡುವುದು ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತಿರುವ ವಿಚಾರ.ಹಾಗೆಯೇ  ಮುಸ್ಲಿಂ ಸಮುದಾಯದ ಹುಡುಗಿ ಅರ್ಷಿಯಾ ಅವರು ಇತ್ತೀಚೆಗೆ ಯಕ್ಷಗಾನಕ್ಕೆ ಸೇರಿ ಸಾಕಷ್ಟು ಪ್ರದರ್ಶನಗಳನ್ನು ನೀಡಿದ್ದು ಅಲ್ಲದೆ, ಜನಪ್ರಿಯ ಕಲಾವಿದರೆಂದು ಹೆಸರುವಾಸಿಯಾಗಿದ್ದಾರೆ.

ತನು ವಿಟ್ಲ ಎಂಬ ಹೆಸರಿನಲ್ಲಿ ಪ್ರಸಿದ್ದಳಾಗಿರುವ ಅರ್ಷಿಯಾ ಅವರು ಬಂಟ್ವಾಳ ತಾಲೂಕಿನ ವಿಟ್ಲದವರು. ಪ್ರಸ್ತುತ ಇವರು ಆಟೋಮೊಬೈಲ್‌‌ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ಧಾರೆ. ಅರ್ಷಿಯಾ ಅವರು ತನ್ನ ಚಿಕ್ಕ ವಯಸ್ಸಿನಲ್ಲಿ ತನ್ನೂರಿನಲ್ಲಿ ಪ್ರದರ್ಶಿಸಿದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಪ್ರಸಂಗದಲ್ಲಿ ಮಹಿಷಾಸುರನ ಪಾತ್ರದಿಂದ ಎಲ್ಲರನ್ನು ಮಂತ್ರಮುಗ್ದರನ್ನಾಗಿಸಿದ್ದಾರೆ. ಅಂದಿನಿಂದ ಅರ್ಷಿಯಾ ಅವರು ಯಕ್ಷಗಾನ ಕಲಾ ಪ್ರಕಾರ, ಪಾತ್ರ, ಚೆಂಡೆ ಧ್ವನಿಯಿಂದ ಆಕರ್ಷಿತರಾಗಿದ್ದು, ಈ ಮೂಲಕ ಕಲಾಪ್ರಕಾರವನ್ನು ಕಲಿಯಲು ಇಚ್ಚಿಸಿದೆ ಎಂದು ತಿಳಿಸಿದ್ಧಾರೆ.

10ನೇ ವಯಸ್ಸಿನಲ್ಲಿ ತನ್ನೂರಾದ ವಿಟ್ಲದಲ್ಲಿ ಯಕ್ಷಗಾನವನ್ನು ಪ್ರಾರಂಭಿಸಿದ್ದು, ಶಾಲೆಯ ವಾರ್ಷಿಕೋತ್ಸವದ ಸಂದರ್ಭ ಶಾಲಾ ಶಿಕ್ಷಕಿಯೊಬ್ಬರು ತನಗೆ ಯಕ್ಷಾಗಾನವನ್ನು ಕಲಿಸಿದ್ದರು ಎಂದು ಅರ್ಷಿಯಾ ನೆನಪಿಸಿಕೊಳ್ಳುತ್ತಾರೆ.

ಅರ್ಷಿಯಾ ಅವರ ಕುಟುಂಬವು ಅವರಿಗೆ ಪ್ರೋತ್ಸಾಹ ನೀಡಿದೆ, ಆದರೆ, ಅವರ ಸಮುದಾಯದ ಕೆಲವರು ಪ್ರೋತ್ಸಾಹ ನೀಡಲಿಲ್ಲ. ಆದರೆ ಅರ್ಷಿಯಾ ಅವರು ಎಲ್ಲಾ ತೊಂದರೆಗಳನ್ನು ಮೆಟ್ಟಿನಿಂತು ಯಶಸ್ವಿಯಾಗಿ ಯಕ್ಷಗಾನ ರಂಗಕ್ಕೆ ಬಂದಿದ್ಧಾರೆ. ಮಂಗಳೂರು, ಕಾರವಾರ ಹಾಗೂ ಉಡುಪಿಯಲ್ಲಿ ಹಲವಾರು ಪ್ರದರ್ಶನಗಳನ್ನು ನೀಡಿದ್ಧಾರೆ.

ನನ್ನ ಧ್ವನಿ ದೊಡ್ಡದಾಗಿರುವುದರಿಂದ ಅಸುರ ಪಾತ್ರ ನನಗೆ ಸರಿಹೊಂದುತ್ತದೆ ಎಂದು ಹಲವರು ಹೇಳುತ್ತಿದ್ದರು. ನನಗೆ ಯಕ್ಷಗಾನದಲ್ಲಿ ಪ್ರವೇಶ ಪಾತ್ರ ಇಷ್ಟ ಎಂದ ಅವರು, ನನ್ನ ಮುಂದಿನ ಗುರಿ ಚೆಂಡೆ ವಾದ್ಯವನ್ನು ಕಲಿಯುವುದು. ನಾನು ಯಕ್ಷಗಾನ ಪ್ರಸಂಗದಲ್ಲಿ ಶ್ರೀನಿವಾಸ್ ಕಲ್ಯಾಣ, ಸುದರ್ಶನೋಪಕ್ಯಾನ, ಕಡಂಬ ಕೌಶಿಕ, ಶಂಬವಿ ವಿಜಯ, ರಕ್ತಬೀಜಾಸುರ ವದೆ ಮತ್ತು ಇನ್ನೂ ಅನೇಕ ಪಾತ್ರಗಳನ್ನು ನಿರ್ವಹಿಸಿದ್ದೇನೆ ಎಂದರು.

ಅರ್ಷಿಯಾ ಅವರು ಮಂಗಳೂರಿನ ಕಡಲಿ ಕಲಾ ಕೇಂದ್ರದಲ್ಲಿ ರಮೇಶ ಭಟ್‌‌‌ ನೇತೃತ್ವದಲ್ಲಿ ಯಕ್ಷಗಾನ ಕಲಿಯುತ್ತಿದ್ಧಾರೆ.

 

Vishwa News 24

Recent Posts

ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ – vishwanews24

ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ ಉಡುಪಿ: ಕುಕ್ಕೆಹಳ್ಳಿ ಈಶ್ವರನಗರದಲ್ಲಿರುವ ಸ್ವಾಮಿ ಕೊರಗಜ್ಜ ಕ್ಷೇತ್ರದ…

2 hours ago

ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ – ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ ; ಯುವಕ ವಶಕ್ಕೆ – vishwanews24

ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ - ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ…

2 hours ago

ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ – vishwanews24

ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ ಮಂಗಳೂರು: ಮಂಗಳೂರು ನಗರ ಪೊಲೀಸ್…

2 hours ago

ಮಂಗಳೂರು : ಜೈಲಿಗೆ ಡ್ರಗ್ಸ್‌, ಮೊಬೈಲ್‌ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ ಅಳವಡಿಕೆ – vishwanews24

ಮಂಗಳೂರು : ಜೈಲಿಗೆ ಡ್ರಗ್ಸ್‌, ಮೊಬೈಲ್‌ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ…

3 hours ago

ಚಿಕನ್ ಪ್ರಿಯರಿಗೆ ಶಾಕ್ : ದಾಖಲೆಯ ಏರಿಕೆ ಕಂಡ ಚಿಕನ್, ಮೊಟ್ಟೆ ದರ – vishwanews24

ಗ್ರಾಹಕರಿಗೆ ಚಿಕನ್ ಮತ್ತು ಮೊಟ್ಟೆ ಬೆಲೆ ಏರಿಕೆ ಶಾಕ್: ದಾಖಲೆ ಬರೆದ ದರ ಬೆಂಗಳೂರು: ಚಿಕನ್ ಮತ್ತು ಮೊಟ್ಟೆ ಪ್ರಿಯರಿಗೆ…

3 hours ago

ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ – vishwanews24

ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ ಮಂಗಳೂರು:  ಸರ್ಕಾರಿ ಕಾಲೇಜಿನ ಬಿಬಿಎ…

4 hours ago