Featured

ಕರಾವಳಿಯ ಯುವ ಪ್ರತಿಭಾವಂತ ಕಲಾವಿದರುಗಳ ಮೊದಲ ಪ್ರಯತ್ನ “ಮಚ್ಚಾ ನೀನ್ ಬದುಕ್ಬೇಕಾ?” ಚಲನಚಿತ್ರದ ಪೋಸ್ಟರ್ ಬಿಡುಗಡೆ – ಸದ್ಯದಲ್ಲೇ ತೆರೆಗೆ -Vishwanews24

ಕರಾವಳಿಯ ಯುವ ಪ್ರತಿಭಾವಂತ ಕಲಾವಿದರುಗಳ ಮೊದಲ ಪ್ರಯತ್ನ “ಮಚ್ಚಾ ನೀನ್ ಬದುಕ್ಬೇಕಾ?” ಚಲನಚಿತ್ರದ ಪೋಸ್ಟರ್ ಬಿಡುಗಡೆ – ಸದ್ಯದಲ್ಲೇ ತೆರೆಗೆ -Vishwanews24

ಬೆಂಗಳೂರು : ಕರಾವಳಿಯ ಯುವಕಲಾವಿದರು ಮತ್ತು ಕನ್ನಡದ ಕೆಲ ಹಿರಿಯ ಕಿರುತೆರೆ ಕಲಾವಿದರು ನಟಿಸಿರುವ “ಮಚ್ಚಾ ನೀನ್ ಬದುಕ್ಬೇಕಾ?” ಎಂಬ ಕನ್ನಡ ಚಲನಚಿತ್ರದ ಮೊದಲ ಪೋಸ್ಟರ್‍ನ್ನು ಇಂದು ಬೆಂಗಳೂರಿನಲ್ಲಿ ಬಿಡುಗಡೆ ಮಾಡಲಾಯಿತು.

ಕರಾವಳಿಯ ಕಲಾವಿದರು ಹಾಗೂ ರಂಗಭೂಮಿಯ ಕೆಲ ಹಿರಿಯ ಕಲಾವಿದರು ಸೇರಿ ಅಭಿನಯಿಸಿರುವ ಕನ್ನಡದ ಚಲನಚಿತ್ರದ “ಮಚ್ಚಾ ನೀನ್ ಬದುಕ್ಬೇಕಾ?” ಎಂಬ ಮೊದಲ ಪೋಸ್ಟರ್‍ನ್ನು ಇಂದು ಬಿಡುಗಡೆ ಮಾಡಿದ್ದು, ಯುವ ಕಲಾವಿದರಾದ ರಮೇಶ್ ಶೆಟ್ಟಿ, ಸುರೇಶ್ ಮಲ್ಪೆ, ಶರಣ್ ಉದ್ಯಾವರ ಹಾಗೂ ಅನೇಕ ಯುವ ಕಲಾವಿದರು ಸಹ ಈ ಚಿತ್ರದಲ್ಲಿ ನಟಿಸಿದ್ದಾರೆ.

ಮಂಗಳೂರು ,ಪೆಣಂಬೂರು ಜೊತೆಗೆ ಉಡುಪಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಒಂದು ಹಾಡನ್ನು ಸಹ ಈಗಾಗಲೇ ಚಿತ್ರತಂಡ ಚಿತ್ರೀಕರಣ ಮುಗಿಸಿರುತ್ತದೆ.

ಮೂಲತಃ ಭಟ್ಕಳ ನಿವಾಸಿಯಾದ ಜಗದೀಶ್ ಡಿ ಎನ್, ಭಟ್ಕಳ್ ರವರು ಮೊಟ್ಟ ಮೊದಲ ಬಾರಿಗೆ ನಿರ್ದೇಶಿಸಿರುವ ಹೊಸ ಕನ್ನಡ ಚಿತ್ರ ಇದಾಗಿದ್ದು, ಯುವ ಪ್ರತಿಭೆಗಳಾದ ಮುರುಡೇಶ್ವರದ ಆನಂದ ನಾಯ್ಕ್ ಎನ್ನುವವರು ಸಹ ಚಿತ್ರದ ಒಂದು ಹಾಡಿಗೆ ಸಾಹಿತ್ಯವನ್ನು ಬರೆದಿರುತ್ತಾರೆ. ಜೊತೆಗೆ ಮಂಗಳೂರಿನ ಉಮಾ ಮಹೇಶ್ವರ ಸಹ-ನಿರ್ಮಾಪಕರು, ಜೈರಾಮ್ ಶೆಟ್ಟಿ ಕುಂದಾಪುರ.

ಲಾಕ್ ಡೌನ್ ಸಂದರ್ಭದಲ್ಲಿ ಶೇಕಡಾ 60ರಷ್ಟು ಚಿತ್ರೀಕರಣ ಮುಗಿಸಿರುವ ಈ ಚಿತ್ರ ತಂಡ ಅಗಷ್ಟ್ ತಿಂಗಳ ಒಳಗೆ ಪೋಸ್ಟ್ ಪ್ರೋಡಕ್ಷನ್ ಕೆಲಸವನ್ನು ಮುಗಿಸಿ ಸೆಪ್ಟೆಂಬರ್ ಅಂತ್ಯದ ಒಳಗೆ ಚಿತ್ರದ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಇದು ಐಷಾರಾಮಿ ಜೀವನದ ಆಸೆಗೆ ಕುಟುಂಬಕ್ಕೆ ಆಸರೆ ಆಗಬೇಕಾದ ಒಬ್ಬ ಮಧ್ಯಮ ಕುಟುಂಬದ ಕಾಲೇಜು ಯುವಕ ಹೇಗೆ ಬೆಂಗಳೂರಿನಲ್ಲಿ ಪರಿಸ್ಥಿತಿಗೆ ಬದಲಾಗಿ ಜೀವನದಲ್ಲಿ ಎನಾಗುತ್ತಾನೆ ಎಂಬ ಕಥಾವಸ್ತು ಇದಾಗಿದ್ದು , ಸಮಾಜಕ್ಕೆ ಉತ್ತಮ ರೀತಿಯಲ್ಲಿ ಸಂದೇಶಗಳನ್ನು ಸೇರಿಸಲಾಗಿದೆ. ಕಳೆದ ಕೆಲ ತಿಂಗಳ ಹಿಂದೆ ಬಿಡುಗಡೆ ಆಗಬೇಕಿದ್ದ ಈ ಚಿತ್ರ ಕೊರೊನಾದಿಂದ ಪೊಸ್ಟ್ ಪ್ರೊಡಕ್ಷನ್ ಹಾಗೂ ಔಟ್ ಡೋರ್ ಚಿತ್ರೀಕರಣ ಮುಂದೆ ಹೋಗಿದ್ದ ಕಾರಣ, ಚಿತ್ರದ ಮೊದಲ ಪೋಸ್ಟರ್ ಇಂದು ಬಿಡುಗಡೆಯಾಗಿದೆ.

ನಮ್ಮ ಕರಾವಳಿಯಲ್ಲಿರುವ ಪ್ರತಿಯೊಬ್ಬರು  ಯುವಪ್ರತಿಭೆಗಳಿಗೆ ಪ್ರೋತ್ಸಾಹ ಮತ್ತು ಬೆಂಬಲ ನೀಡುವ ಮೂಲಕ ರಾಜ್ಯಮಟ್ಟದಲ್ಲಿ ಇವರನ್ನು ಇನ್ನೊಮ್ಮೆ ಗುರುತಿಸುವ ಹಾಗೆ ಆಗಲಿ ಎಂದು ಭಟ್ಕಳದ ಜಗದೀಶ್.ಡಿ.ಎನ್ ತಿಳಿಸಿದ್ದಾರೆ

ನಮಸ್ಕಾರ ಸ್ನೇಹಿತರೆ, ಇದು ನಮ್ಮ ಉತ್ತರ ಕನ್ನಡದ ಅನೇಕ ಯುವ ಪ್ರತಿಭೆಗಳ ಮೊದಲ ಪ್ರಯತ್ನ *ಮಚ್ಚ ನೀನ್ ಬದುಕ್ಬೇಕಾ?..* ಹಾಗೂ ನಮ್ಮ ಚಿತ್ರದ ಮೊದಲ ಪೊಸ್ಟರ್.ನಿಮ್ಮ ಸ್ನೇಹಿತರಿಗೆ ಮತ್ತು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮುಲಕ ನಿಮ್ಮ ಆಶೀರ್ವಾದ ಮತ್ತು ಬೆಂಬಲವನ್ನು ನೀಡಿ ಈ ಮೂಲಕ ನಮ್ಮ ಈ ಮೊದಲ ಪ್ರಯತ್ನಕ್ಕೆ ಬೆಂಬಲವಾಗಿ ಜೊತೆಗಿರಲು ಬಯಸುತ್ತೇವೆ ಧನ್ಯವಾದಗಳು..

AJ Creative Minds 2020

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago