ಉಡುಪಿ: ನಿಗಮ ಮಂಡಳಿ, ಪ್ರಾಧಿಕಾರದ ಅಧ್ಯಕ್ಷರ ನೇಮಕಾತಿ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನವನ್ನು ಮೊಗವೀರ ಸಮುದಾಯಕ್ಕೆ ಮೀಸಲಿರಿಸುವಂತೆ ಮಾಜಿ ತಾಲೂಕು ಪಂಚಾಯತ್ ಸದಸ್ಯ ಕಿರಣ್ ಕುಮಾರ್ ಉದ್ಯಾವರ ಮನವಿ ಮಾಡಿದ್ದಾರೆ.
ಮೊಗವೀರ ಸಮಾಜವು ಕರಾವಳಿ ಭಾಗವಾದ ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಅತೀ ಹೆಚ್ಚು ಜನಸಂಖ್ಯೆಯನ್ನು ಹೊಂದಿದೆ. ಹಿಂದಿನಿಂದಲೂ ಮೊಗವೀರ ಸಮಾಜವು ಯಾವುದೇ ಆಸೆ, ಅಧಿಕಾರ, ಪಟ್ಟಕ್ಕಾಗಿ ಬೇಡಿಕೆಯನ್ನಿಡದೆ ಕಾಂಗ್ರೆಸ್ ಪಕ್ಷದ ಪರವಾಗಿ ಕೆಲಸವನ್ನು ಮಾಡುತ್ತಾ ಬಂದಿದೆ. ಪಕ್ಷದಿಂದ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೂ ಕೂಡಾ ಪಕ್ಷವೇ ಮುಖ್ಯವೆನ್ನುವ ಧ್ಯೇಯದೊಂದಿಗೆ ಪಕ್ಷದ ಪರವಾಗಿ ಸಮಾಜವು ಭದ್ರವಾಗಿ ನಿಂತಿದೆ. ಅಲ್ಲದೆ ಪಕ್ಷವು ಸಮಾಜದ ಆಗುಹೋಗುಗಳಿಗೆ, ನೋವುಗಳಿಗೆ ಸ್ಪಂದಿಸುತ್ತಾ ಬಂದಿರುವುದು ಎಲ್ಲರಿಗೂ ತಿಳಿದಿರುವ ವಿಷಯ.
ಇತ್ತೀಚಿನ ದಿನಗಳಲ್ಲಿ ಪಕ್ಷಕ್ಕಾಗಿ ದುಡಿದ ಮೊಗವೀರ ಸಮಾಜದ ಹಿರಿಯ ನಾಯಕರನ್ನು ಗುರುತಿಸುವಲ್ಲಿ ವಿಫಲವಾಗಿದೆ. ಕರಾವಳಿ ಭಾಗದಲ್ಲಿ ಪಕ್ಷಕ್ಕಾಗಿ ದುಡಿದ ಹಿರಿಯರಾದ ಮಹಾಬಲ ಕುಂದರ್, ಕೇಶವ ಕೋಟ್ಯಾನ್, ದಿವಾಕರ ಕುಂದರ್, ಹಿರಿಯಣ್ಣ ಚಾತ್ರಬೆಟ್ಟು, ಮದನ್ ಕುಮಾರ್, ಚೇತನ್ ಬೆಂಗ್ರೆ ಇವರಲ್ಲಿ ಯಾರಿಗೊಬ್ಬರಿಗಾದರೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನವನ್ನು ನೀಡಿದಲ್ಲಿ ಮೊಗವೀರ ಸಮಾಜಕ್ಕೆ ನ್ಯಾಯ ದೊರಕಿದಂತಾಗುತ್ತದೆ ಎಂದು ಕಿರಣ್ ಕುಮಾರ್ ಉದ್ಯಾವರ ತಿಳಿಸಿರುತ್ತಾರೆ.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…