ಕರಾವಳಿ ಎನ್ನ ಹೃದಯ ಅದನ್ನು ಬಿಟ್ಟು ಬೇರೆ ಅಭಿವೃದ್ಧಿ ಮಾಡಲು ಸಾಧ್ಯವೇ :ಕೇಂದ್ರ ಸಚಿವ ವಿ ಸೋಮಣ್ಣ
ಪಣಿಯೂರು ರೈಲ್ವೆ ನಿಲ್ದಾಣದಲ್ಲಿ ಮತ್ಸ್ಯಗಂಧ ರೈಲು ನಿಲುಗಡೆಗೆ 8 ದಿನದಲ್ಲಿ ಕೆಲಸ ಶುರು
ಕಾಪು ಶಾಸಕರು ಗುರ್ಮೆ ಸುರೇಶ್ ಶೆಟ್ಟಿ, ಮನವಿಗೆ ಸ್ಪಂದಿಸಿದ ಸಚಿವ ಸೋಮಣ್ಣ
ಉಡುಪಿ ಜಿಲ್ಲೆ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಡುಬಿದ್ರಿ ಪಣಿಯೂರು ರೈಲ್ವೆ ನಿಲ್ದಾಣದಲ್ಲಿ ಮಂಗಳೂರು ಕುರ್ಲಾ(ಬಾಂಬೆ) ಮತ್ಸಗಂಧ ರೈಲ್ವೆ ನಿಲುಗಡೆಗೆ ಅವಕಾಶವಿಲ್ಲದೆ ಇದ್ದು ಸಾರ್ವಜನಿಕರು ಸಂಕಷ್ಟಕ್ಕೆ ಈಡಾಗಿರುತ್ತಾರೆ.
ಪಡುಬಿದ್ರೆ ಗ್ರಾಮವು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಾದ ಹೆಜಮಾಡಿ, ಎರ್ಮಾಳು, ತೆಂಕ, ಬೆಳಪು, ಶಿರ್ವ, ಮುದರಂಗಡಿ ಹಾಗೂ ಕಾರ್ಕಳದ ಕಡೆಯಿಂದ ನೂರಾರು ಜನರು ಬಾಂಬೆಯಿಂದ ಪ್ರಯಾಣಿಸುವರಿಗೆ ಪಡುಬಿದ್ರೆ ಪಣಿಯೂರು ರೈಲ್ವೆ ನಿಲ್ದಾಣದಲ್ಲಿ ಮತ್ತ್ವಗಂಧ ರೈಲ್ವೆ ನಿಲುಗಡೆ ಇಲ್ಲದೆ ಇರುವುದರಿಂದ ದೂರದ ಮುಲ್ಕಿ ಹಾಗೂ ಉಡುಪಿ ಇಂದ್ರಾಳಿಯಲ್ಲಿ ಸಾರ್ವಜನಿಕರು ಇಳಿದು ತಮ್ಮ ಸ್ವಂತ ಊರಿಗೆ ತೆರಳಲು ಸಂಕಷ್ಟಪಡುತ್ತಿದ್ದಾರೆ. ಆದ್ದರಿಂದ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಡುಬಿದ್ರೆ ಪಣೆಯೂರು ರೈಲ್ವೆ ನಿಲ್ದಾಣದಲ್ಲಿ ಮಂಗಳೂರು-ಕುರ್ಲಾ(ಬಾಂಬೆ) ಮತ್ತ್ವಗಂಧ ರೈಲ್ವೆ ನಿಲುಗಡೆಗೆ ಅವಕಾಶ ಕಲ್ಪಿಸುವಲ್ಲಿ ಸೂಕ್ತ ಕ್ರಮ ಕೈ ಕೈಗೊಳ್ಳುವಂತೆ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ರಾಜ್ಯ ರೈಲ್ವೆ ಸಚಿವ ಬಿ ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದರು.
ಮನವಿಗೆ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವ ಕರಾವಳಿ ಭಾಗ ನಮಗೆ ಹೃದಯ ಇದ್ದಂತೆ ಅದನ್ನು ಬಿಟ್ಟು ಬೇರೆ ಅಭಿವೃದ್ಧಿ ಮಾಡಲು ಸಾಧ್ಯವಿದೆಯೇ ಎಂಟು ದಿನದ ಅವಕಾಶ ಕೊಡಿ ಶಾಸಕರು ನೀಡಿರುವ ಮನವಿಗೆ ಸೂಕ್ತವಾಗಿ ಸ್ಪಂದಿಸಿ ಸರ್ವೇ ಕಾರ್ಯ ಆರಂಭ ಮಾಡಿ ಕೂಡಲೇ ಇದಕ್ಕೆ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆಯ ಮಾತುಗಳನ್ನಾಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಲಾಲಾಜಿಆರ್ ಮೆಂಡನ್ ಕ್ಷೇತ್ರ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಗೀತಾಂಜಲಿ ಎಂ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…