ಕಾರವಾರ: ನೌಕಾನೆಲೆಯ ಸಿಬ್ಬಂದಿ ಮೀನುಗಾರರಿಗೆ ತೊಂದರೆ ಕೊಡುತ್ತಿರುವ ಕುರಿತು ಚುನಾವಣೆ ಮುಗಿದ ಬಳಿಕ ಶಾಸಕಿ ರೂಪಾಲಿ ನಾಯ್ಕ ಅವರೊಂದಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿ ಚರ್ಚಿಸುವುದಾಗಿ ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಅವರು ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೀನುಗಾರಿಕೆಗೆ ತೆರಳುವ ದೋಣಿಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದಂತೆ ಕೇಂದ್ರ ಸಚಿವರ ಬಳಿ ಮನವಿ ಮಾಡಿಕೊಳ್ಳಲಾಗುವುದು ಎಂದರು. ಕೇಂದ್ರ ಸರ್ಕಾರವೇ ಮೀನುಗಾರರ ದೋಣಿಗಳಿಗೆ 1488 ಲೀಟರ್ ಸೀಮೆಎಣ್ಣೆ ಕೊಡುವ ಯೋಜನೆ ಜಾರಿಗೆ ತಂದಿದೆ.
ಕೇಂದ್ರ ಸರ್ಕಾರವೇ ನೇರವಾಗಿ ಮೀನುಗಾರರಿಗೆ ಸೀಮೆಎಣ್ಣೆ ವಿತರಣೆ ಮಾಡುತ್ತಿರುವುದು ಇದೇ ಮೊದಲು ಎಂದು ಅವರು ತಿಳಿಸಿದರು. ರಾಜ್ಯ ಸರ್ಕಾರವೂ ಮೀನುಗಾರರಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಸಬ್ಸಿಡಿ ಡಿಸೇಲ್ ಪ್ರಮಾಣವನ್ನು ಒಂದು ಲಕ್ಷದಿಂದ ಎರಡು ಲಕ್ಷ ಕಿಲೋ ಲೀಟರ್ಗೆ ಏರಿಕೆ ಮಾಡಲಾಗಿದೆ ಎಂದು ಮಧ್ವರಾಜ ತಿಳಿಸಿದರು.
ಸೀಬರ್ಡ್ ಯೋಜನೆಯಿಂದ ನಿರಾಶ್ರಿತರಾದವರಿಗೆ ಮಾಜಾಳಿಯಲ್ಲಿ ಮೀನುಗಾರಿಕೆ ಬಂದರು ನಿರ್ಮಾಣ ಮಾಡಲಾಗುತ್ತಿದ್ದು, ಮೀನುಗಾರರ ಗತವೈಭವ ಮರುಕಳುಹಿ ಸಲಿದೆ ಎಂದು ಅವರು ತಿಳಿಸಿದರು. ಬಿಜೆಪಿ ಹಿಂದೂತ್ವ ರಕ್ಷಣೆ ಮಾಡುತ್ತಿದ್ದರೆ, ಕಾಂಗ್ರೆಸ್ ಹಿಂದೂ ವಿರೋಧಿ ನಿಲುವು ಗಳನ್ನು ಅನುಸರಿಸುತ್ತಿದೆ. ಇದನ್ನು ಅವರು ನೇರವಾಗಿ ಹೇಳುತ್ತಾರೆ.
ಉತ್ತರ ಕನ್ನಡ ಜಿಲ್ಲೆ ಅದರಲ್ಲೂ ಕರಾವಳಿ ಕ್ಷೇತ್ರಗಳು ಬಿಜೆಪಿಯ ಭದ್ರಕೋಟೆಯಾಗಿದೆ ಎಂದರು. ಸ್ಥಳೀಯ ಶಾಸಕಿ ರೂಪಾಲಿ ನಾಯ್ಕ ಅವರು, ಉತ್ತಮ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು, ಚುನಾವಣೆಯಲ್ಲಿ ಅವರು ಜಯಗಳಿಸಿದ್ದಾರೆ.
ಗೆಲುವಿನ ಅಂತರ ಹೆಚ್ಚಿಸಿಕೊಳ್ಳಲು ಈ ಹೋರಾಟ ನಡೆಯುತ್ತಿದೆ ಎಂದು ಮಧ್ವರಾಜ ತಿಳಿಸಿದರು.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…