Featured

ಕರಾವಳಿ ಜನರ ಆಪೇಕ್ಷೆ ಮೇರೆಗೆ ಪೊಲೀಸ್ ಅಧಿಕಾರಿಗಳನ್ನು ವರ್ಗಾಯಿಸಿದ್ದೇವೆ : ಪರಮೇಶ್ವರ್ – vishwanews24

ಕರಾವಳಿ ಜನರ ಆಪೇಕ್ಷೆ ಮೇರೆಗೆ ಪೊಲೀಸ್ ಅಧಿಕಾರಿಗಳನ್ನು ವರ್ಗಾಯಿಸಿದ್ದೇವೆ : ಪರಮೇಶ್ವರ್

ಬೆಂಗಳೂರು : ಕರಾವಳಿ ಭಾಗದಲ್ಲಿ ನಡೆಯುತ್ತಿರುವ ಘಟನಾವಳಿಗಳಿಗೆ ಸಂಬಂಧಿಸಿದಂತೆ ಅಲ್ಲಿನ ಜನರು ಆಪೇಕ್ಷೆ ಮೇರೆಗೆ ಪೊಲೀಸ್ ಅಧಿಕಾರಿಗಳನ್ನು ವರ್ಗಾಯಿಸಿದ್ದೇವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಲ್ಲಿನ ಜನಸಮುದಾಯ ಆಪೇಕ್ಷೆ ಮೇರೆಗೆ ಅಧಿಕಾರಿಗಳನ್ನು ವರ್ಗಾಯಿಸಿದ್ದೇವೆ. ಕಳೆದ ಬಾರಿ ಭೇಟಿ ನೀಡಿದಾಗ ಅಧಿಕಾರಿಗಳನ್ನು ಬದಲಾಯಿಸುವಂತೆ ಒತ್ತಾಯಿಸಿದ್ದರು. ಕೂಡಲೇ ಬದಲಾಯಿಸುವುದು ಸರಿಯಲ್ಲ ಎಂಬ ಕಾರಣಕ್ಕೆ ವರ್ಗಾವಣೆ ಮಾಡಿರಲಿಲ್ಲ. ಈ ಬಾರಿಯೂ ಧ್ವನಿ ಎತ್ತಿದ್ದರಿಂದ ಬದಲಾಯಿಸಿದ್ದೇವೆ ಎಂದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳನ್ನು ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿದೆ. ಯಾರು ಏನೇ ಹೇಳಿದರು, ನಾವು ಇದನ್ನು ಸಹಿಸುವುದಿಲ್ಲ. ಆ ಭಾಗದಲ್ಲಿ ಶಾಂತಿ ನೆಲೆಸಬೇಕು. ದಕ್ಷಿಣ ಕನ್ನಡ ಜಿಲ್ಲೆ ಆರ್ಥಿಕವಾಗಿ, ಶೈಕ್ಷಣಿಕವಾಗಿ ಮಾದರಿಯಾಗಿರುವ ಜಿಲ್ಲೆ. ಯಾರು ಶಾಂತಿ ಕದಡುವುದಕ್ಕೆ ಪ್ರಯತ್ನಿಸುತ್ತಾರೆ, ಅವರನ್ನು ಬಿಡುವುದಿಲ್ಲ ಎಂದು ಎಚ್ಚರಿಸಿದರು. ಅಧಿಕಾರಿಗಳನ್ನು ಅನಿವಾರ್ಯವಾಗಿ ಬದಲಾಯಿಸಬೇಕಾದ ಪರಿಸ್ಥಿತಿ ಬಂದಿದ್ದರಿಂದ ಮಂಗಳೂರು ಪೊಲೀಸ್ ಕಮಿಷನರ್, ದಕ್ಷಿಣ ಕನ್ನಡ ಎಸ್‌ಪಿ, ಉಡುಪಿ ಎಸ್‌ಪಿಯನ್ನು ಬದಲಾಯಿಸಿದ್ದೇವೆ. ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು ಎಂದು ಈಗಾಗಲೇ ಅವರಿಗೆ ಸೂಚನೆ ಕೊಟ್ಟಿದ್ದೇವೆ. ಮುಂದೆ ಇದನ್ನು ನಡೆಯುವುದಕ್ಕೆ ಬಿಡುವುದಿಲ್ಲ. ಜನಸಮುದಾಯವು ಇದಕ್ಕೆ ಸಹಕಾರ ಕೊಡಬೇಕು ಎಂದು ಮನವಿ ಮಾಡಿದರು.

ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚನೆಗೆ ಕಾಲಾವಕಾಶ ಬೇಕಾಗಿತ್ತು. ನಿನ್ನೆ ಡಿಜಿಯವರೊಂದಿಗೆ ಚರ್ಚಿಸಿದ್ದೇನೆ. ಕಾರ್ಯಪಡೆಯನ್ನು ಯಾವ ರೀತಿ ನಿಯೋಜಿಸಬೇಕು. ಅವರಿಗೆ ನೀಡಬೇಕಾದ ಅಧಿಕಾರದ ಬಗ್ಗೆ ಚರ್ಚಿಸಲಾಗಿದೆ. ಉಡುಪಿ, ಮಂಗಳೂರು ಮತ್ತು ಶಿವಮೊಗ್ಗದಲ್ಲಿ ನಿಯೋಜಿಸುತ್ತೇವೆ ಎಂದರು.
ಪ್ರಚೋದನಾಕಾರಿ ಭಾಷಣಗಳಿಗೆ ಕಡಿವಾಣ ಹಾಕುತ್ತೇವೆ. ಈಗ ಇರುವ ಕಾನೂನು ಚೌಕಟ್ಟಿನಲ್ಲಿ ಮಾಡಬೇಕಾಗುತ್ತದೆ. ಇಂತಹ ಪ್ರಕರಣಗಳಿಗೆ ಕೋರ್ಟ್‌ಗಳಲ್ಲಿ ಅನೇಕ ಸಂದರ್ಭಗಳಲ್ಲಿ ತಡೆ ನೀಡುತ್ತಾರೆ. ಅಥವಾ ರದ್ದುಗೊಳಿಸುತ್ತಾರೆ. ಇದೆಲ್ಲವನ್ನು ನೋಡಿಕೊಂಡು ಮಾಡಬೇಕಾಗುತ್ತದೆ. ಸೋಷಿಯಲ್ ಮೀಡಿಯಾದಲ್ಲಿನ ಅನವಶ್ಯಕ ಪೋಸ್ಟ್‌ಗಳನ್ನು ನಿಯಂತ್ರಣ ಮಾಡುತ್ತೇವೆ ಎಂದರು ಹೇಳಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

16 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

16 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

16 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

16 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

17 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

17 hours ago