Featured

ಕರಾವಳಿ ಜಿಲ್ಲೆಗಳಲ್ಲಿ ಪಡಿತರದಲ್ಲಿ ಕುಚ್ಚಲಕ್ಕಿ ವಿತರಿಸಲು ಕೇಂದ್ರ ಅನುಮೋದನೆ – Vishwanews24

ಉಡುಪಿ /ದ. ಕ / ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪಡಿತರದಲ್ಲಿ ಕುಚ್ಚಲಕ್ಕಿ  ವಿತರಿಸಲು ಕೇಂದ್ರ ಅನುಮೋದನೆ

ಉಡುಪಿ, : ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೈತರು ಬೆಳೆಯುತ್ತಿರುವ, ಸ್ಥಳೀಯ ಕುಚ್ಚಲಕ್ಕಿ ಪ್ರಭೇಧಗಳಾದ M04, ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ, ಉಮ ಮತ್ತು ಅಭಿಲಾಷ್ ತಳಿಗಳನ್ನು ಕೇಂದ್ರ ಸರಕಾರದ ಕನಿಷ್ಠ ಬೆಂಬಲ ಬೆಲೆಯಡಿಯಲ್ಲಿ (MSP) ಖರೀದಿ ಮಾಡಿ ಪಡಿತರದ ಮೂಲಕ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲಾ ವ್ಯಾಪ್ತಿಗಳಲ್ಲಿ ವಿತರಿಸಲು ಕೇಂದ್ರ ಸರಕಾರ ಇದೀಗ ಏರಡನೇ ವರ್ಷಕ್ಕೂ ಅನುಮೋದನೆ ನೀಡಿದೆ.

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯ ಸಾರ್ವಜನಿಕರು ಪಡಿತರದ ಮೂಲಕ ಕುಚ್ಚಲ್ಲಕ್ಕಿಯನ್ನು ವಿತರಿಸುವಂತೆ ಸ್ಥಳೀಯ ಜನಪ್ರತಿನಿಧಿಗಳಲ್ಲಿ ಬೇಡಿಕೆಯನ್ನು ಸಲ್ಲಿಸಿದ್ದರು. ಈ ನಿಟ್ಟಿನಲ್ಲಿ ಉಡುಪಿ- ಚಿಕ್ಕಮಗಳೂರು ಸಂಸದೆ ಹಾಗೂ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆಯವರು ಮತ್ತು ರಾಜ್ಯ ಸಮಾಜ ಕಲ್ಯಾಣ ಇಲಾಖಾ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರ ಪ್ರಯತ್ನದಿಂದ ಕರ್ನಾಟಕ ಸರ್ಕಾರ ಸದರಿ ಬೇಡಿಕೆಯನ್ನು ಅನುಮೋದಿಸುವಂತೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿತ್ತು.

ಮಂಗಳೂರು: ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿ ಬಂಧನ – Vishwanews24

ಈ ಕುರಿತು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ, ಶೋಭಾ ಕರಂದ್ಲಾಜೆಯವರು, ಕೇಂದ್ರದ ಸದರಿ ಇಲಾಖಾ ಸಚಿವರಾದ ಪಿಯೂಷ್ ಗೋಯಲ್ ಅವರಿಗೆ ಪತ್ರ ಬರೆದು ಸದರಿ ಪ್ರಸ್ತಾವನೆಯನ್ನು ಅನುಮೋದಿಸುವಂತೆ ಕೋರಿದ್ದರು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರ ಮನವಿಯನ್ನು ಪರಿಗಣಿಸಿದ ಪಿಯೂಷ್ ಗೋಯಲ್ ಅವರು ಮೇಲ್ಕಾಣಿಸಿದ ಕುಚ್ಚಲಕ್ಕಿ ಪ್ರಭೇಧಗಳನ್ನು ಬೆಳೆಯುವ ರಾಜ್ಯದ ಜಿಲ್ಲೆಗಳಿಂದ MSP ಮೂಲಕ ಖರೀದಿ ಮಾಡಿ ಪಡಿತರದ ಮೂಲಕ ವಿತರಿಸಲು ರಾಜ್ಯ ಸರಕಾರಕ್ಕೆ ಅನುಮತಿ ನೀಡಿರುತ್ತಾರೆ.

ಕೇಂದ್ರದ ಈ ಅನುಮತಿಯೊಂದಿಗೆ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ರೈತರ ಕೃಷಿ ಉತ್ಪಾದನೆಗೆ ಇನ್ನು ಹೆಚ್ಚಿನ ಪ್ರೋತ್ಸಾಹ ಸಿಕ್ಕಿದಂತಾಗಿದೆ. ಅದಲ್ಲದೇ, ಕುಚ್ಚಲಕ್ಕಿಯನ್ನೇ ಹೆಚ್ಚಾಗಿ ಸೇವಿಸುವ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಸಾರ್ವಜನಿಕರ ಬೇಡಿಕೆಯಾದ ಪಡಿತರದಲ್ಲಿ ಕುಚ್ಚಲಕ್ಕಿ ವಿತರಿಸುವ ಬೇಡಿಕೆಗೆ ಪುಷ್ಟಿ ಸಿಕ್ಕಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

15 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

15 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago