ಉಡುಪಿ

ಕರಾವಳಿ ಜಿಲ್ಲೆಗಳಲ್ಲಿ 5 ದಿನಗಳ ಕಾಲ ಬಿಸಿಗಾಳಿ ; ಹವಾಮಾನ ಇಲಾಖೆ ಎಚ್ಚರಿಕೆ  – Vishwanews24

ಕರಾವಳಿ ಜಿಲ್ಲೆಗಳಲ್ಲಿ 5 ದಿನಗಳ ಕಾಲ ಬಿಸಿಗಾಳಿ ; ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು : ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಇಂದಿನಿಂದ ಮುಂದಿನ 5 ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಹೀಟ್ ವೇವ್ ಅಥವಾ ಬಿಸಿಗಾಳಿ ಎಚ್ಚರಿಕೆ ನೀಡಿದೆ. ಕರ್ನಾಟಕ, ಗೋವಾ, ಆಂಧ್ರಪ್ರದೇಶ, ತೆಲಂಗಾಣ, ಪುದುಚೇರಿ, ತಮಿಳುನಾಡು ಮತ್ತು ಕೇರಳ ಸೇರಿದಂತೆ ಭಾರತದ ಹೆಚ್ಚಿನ ಭಾಗಗಳಲ್ಲಿ ಉಷ್ಣ ಅಲೆಯ ಪರಿಸ್ಥಿತಿಗಳೊಂದಿಗೆ ಬಿಸಿ ಮತ್ತು ಆರ್ದ್ರ ವಾತಾವರಣದ ಮುನ್ಸೂಚನೆ ನೀಡಿದೆ. ಹೀಗಾಗಿ ಸಾರ್ವಜನಿಕರು ಬೆಳಗ್ಗೆ 11 ರಿಂದ ಸಂಜೆ 4 ರವರೆಗೆ ಹೊರಗೆ ಹೋಗುವುದನ್ನು ತಪ್ಪಿಸುವಂತೆ ಸೂಚಿಸಿದೆ.

ಏಪ್ರಿಲ್ 24 ರಿಂದ 28 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಗಾಳಿ ಮತ್ತು ಆರ್ದ್ರ ವಾತಾವರಣ ಇರುತ್ತದೆ. ಹವಾಮಾನ ಇಲಾಖೆಯು ಕರ್ನಾಟಕಕ್ಕೆ ಆರೆಂಜ್ ಅಲರ್ಟ್ ಅನ್ನು ಘೋಷಿಸಿದೆ. ಒಟ್ಟಾರೆಯಾಗಿ, ಮುಂದಿನ ಐದು ದಿನಗಳಲ್ಲಿ ರಾಜ್ಯಾದ್ಯಂತ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದೆ.

ಸುಡುವ ಸೂರ್ಯನಿಗೆ ದೀರ್ಘಕಾಲ ತೆರೆದುಕೊಳ್ಳುವವರಲ್ಲಿ ಶಾಖ-ಸಂಬಂಧಿತ ಅನಾರೋಗ್ಯದ ಸಾಧ್ಯತೆ ಹೆಚ್ಚಾಗುತ್ತದೆ ಎಂದು ಆರೋಗ್ಯ ಕಾಳಜಿ ಎಚ್ಚರಿಕೆಗಳನ್ನು ಸಹ ನೀಡಲಾಗಿದೆ.ಹೈಬಿಪಿ, ಹೃದಯ ಸಂಬಂಧಿ ಖಾಯಿಲೆ ಇರುವವರು, ಗರ್ಭಿಣಿಯರು, ವೃದ್ಧರು ಮತ್ತು ಮಕ್ಕಳು ರಣ ಬಿಸಿಲಿಗೆ ಮೈ ಒಡ್ಡದಂತೆ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ದೇಹದ ಉಷ್ಣತೆ 40 ಡಿಗ್ರಿ ಸೆಲ್ಸಿಯಸ್‌‌ ಮೀರಿದರೆ ಅತ್ಯಂತ ಗಂಭೀರ ಸಮಸ್ಯೆ ಎದುರಾಗುವ ಸಂಭವ ಇದೆ. ಹೀಟ್ ಸ್ಟೋಕ್ ಜೀವಕ್ಕೆ ಕುತ್ತು ತರುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.

Vishwa News 24

Recent Posts

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

3 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

3 hours ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

3 hours ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

3 hours ago